AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಳದಿ ಬಣ್ಣಕ್ಕೆ ತಿರುಗಿದ ವೃಷಭಾವತಿ ನದಿ ನೀರು!

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಹರಿಯುವ ಏಕೈಕ ನದಿಯೆಂದರೆ ವೃಷಭಾವತಿ ನದಿ. ಈ ಹಿಂದೆ ವೃಷಭಾವತಿ ನೀರನ್ನೇ ಬೆಂಗಳೂರಿನ ಜನ ಬಳಸುತ್ತಿದ್ದರು. ಸಾವಿರಾರು ರೈತರಿಗೆ ಈ ನದಿ ವರದಾನವಾಗಿತ್ತು. ಆದ್ರೆ ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕಾರ್ಖಾನೆಗಳು ಹೆಚ್ಚಾದ ಕಾರಣ ನೀರಿನ ಬಣ್ಣವೇ ಬದಲಾಗಿದೆ. ನದಿಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಕಾರಣ ವೃಷಭಾವತಿ ನದಿ ಉಳಿವಿಗಾಗಿ ಇತ್ತೀಚಿನ ದಿನಗಳಲ್ಲಿ ಹಲವು ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದ್ರೆ, ಇದೀಗ ಮತ್ತೆ ವೃಷಭಾವತಿ ನದಿ ನೀರು ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದರಿಂದ ವೃಷಭಾವತಿ […]

ಮತ್ತೆ ಹಳದಿ ಬಣ್ಣಕ್ಕೆ ತಿರುಗಿದ ವೃಷಭಾವತಿ ನದಿ ನೀರು!
ಸಾಧು ಶ್ರೀನಾಥ್​
|

Updated on:Sep 23, 2019 | 5:05 PM

Share

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಹರಿಯುವ ಏಕೈಕ ನದಿಯೆಂದರೆ ವೃಷಭಾವತಿ ನದಿ. ಈ ಹಿಂದೆ ವೃಷಭಾವತಿ ನೀರನ್ನೇ ಬೆಂಗಳೂರಿನ ಜನ ಬಳಸುತ್ತಿದ್ದರು. ಸಾವಿರಾರು ರೈತರಿಗೆ ಈ ನದಿ ವರದಾನವಾಗಿತ್ತು. ಆದ್ರೆ ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕಾರ್ಖಾನೆಗಳು ಹೆಚ್ಚಾದ ಕಾರಣ ನೀರಿನ ಬಣ್ಣವೇ ಬದಲಾಗಿದೆ. ನದಿಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಕಾರಣ ವೃಷಭಾವತಿ ನದಿ ಉಳಿವಿಗಾಗಿ ಇತ್ತೀಚಿನ ದಿನಗಳಲ್ಲಿ ಹಲವು ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿತ್ತು.

ಆದ್ರೆ, ಇದೀಗ ಮತ್ತೆ ವೃಷಭಾವತಿ ನದಿ ನೀರು ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದರಿಂದ ವೃಷಭಾವತಿ ನದಿ ಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಉಂಟಾಗಿದೆ. ಇಷ್ಟು ದಿನಗಳವರೆಗೆ ಕಪ್ಪು ಬಣ್ಣದಲ್ಲಿ ಹರಿಯುತ್ತಿದ್ದ ನೀರು, ಇದೀಗ ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದಕ್ಕೆ ಪ್ರಮುಖ ಕಾರಣ ನದಿ ಪಾತ್ರದ ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ನೀರು. ಬೆಂಗಳೂರು ಹೊರವಲಯದ ಅಂಚೆಪಾಳ್ಯ, ಕುಂಬಳಗೋಡು ಸಮೀಪದ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ನದಿಗೆ ಬಿಡುತ್ತಿವೆ.

ವೃಷಭಾವತಿ ನದಿ ಪುನಶ್ಚೇತನಕ್ಕೆ ಇತ್ತೀಚೆಗಷ್ಟೇ ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ಮೂಲಕ ವೃಷಭಾವತಿ ನದಿ ಉಳಿಸುವ ಬಗ್ಗೆ ಅರಿವು ಮೂಡಿಸಲಾಗಿತ್ತು. ಆದ್ರೆ ಇದೀಗ ಮತ್ತೆ ನದಿಗೆ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ಬಿಟ್ಟಿವೆ.

Published On - 5:03 pm, Mon, 23 September 19

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ