ಮತ್ತೆ ಹಳದಿ ಬಣ್ಣಕ್ಕೆ ತಿರುಗಿದ ವೃಷಭಾವತಿ ನದಿ ನೀರು!

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಹರಿಯುವ ಏಕೈಕ ನದಿಯೆಂದರೆ ವೃಷಭಾವತಿ ನದಿ. ಈ ಹಿಂದೆ ವೃಷಭಾವತಿ ನೀರನ್ನೇ ಬೆಂಗಳೂರಿನ ಜನ ಬಳಸುತ್ತಿದ್ದರು. ಸಾವಿರಾರು ರೈತರಿಗೆ ಈ ನದಿ ವರದಾನವಾಗಿತ್ತು. ಆದ್ರೆ ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕಾರ್ಖಾನೆಗಳು ಹೆಚ್ಚಾದ ಕಾರಣ ನೀರಿನ ಬಣ್ಣವೇ ಬದಲಾಗಿದೆ. ನದಿಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಕಾರಣ ವೃಷಭಾವತಿ ನದಿ ಉಳಿವಿಗಾಗಿ ಇತ್ತೀಚಿನ ದಿನಗಳಲ್ಲಿ ಹಲವು ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದ್ರೆ, ಇದೀಗ ಮತ್ತೆ ವೃಷಭಾವತಿ ನದಿ ನೀರು ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದರಿಂದ ವೃಷಭಾವತಿ […]

ಮತ್ತೆ ಹಳದಿ ಬಣ್ಣಕ್ಕೆ ತಿರುಗಿದ ವೃಷಭಾವತಿ ನದಿ ನೀರು!
ಸಾಧು ಶ್ರೀನಾಥ್​

Updated on: Sep 23, 2019 | 5:05 PM

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಹರಿಯುವ ಏಕೈಕ ನದಿಯೆಂದರೆ ವೃಷಭಾವತಿ ನದಿ. ಈ ಹಿಂದೆ ವೃಷಭಾವತಿ ನೀರನ್ನೇ ಬೆಂಗಳೂರಿನ ಜನ ಬಳಸುತ್ತಿದ್ದರು. ಸಾವಿರಾರು ರೈತರಿಗೆ ಈ ನದಿ ವರದಾನವಾಗಿತ್ತು. ಆದ್ರೆ ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕಾರ್ಖಾನೆಗಳು ಹೆಚ್ಚಾದ ಕಾರಣ ನೀರಿನ ಬಣ್ಣವೇ ಬದಲಾಗಿದೆ. ನದಿಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಕಾರಣ ವೃಷಭಾವತಿ ನದಿ ಉಳಿವಿಗಾಗಿ ಇತ್ತೀಚಿನ ದಿನಗಳಲ್ಲಿ ಹಲವು ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿತ್ತು.

ಆದ್ರೆ, ಇದೀಗ ಮತ್ತೆ ವೃಷಭಾವತಿ ನದಿ ನೀರು ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದರಿಂದ ವೃಷಭಾವತಿ ನದಿ ಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಉಂಟಾಗಿದೆ. ಇಷ್ಟು ದಿನಗಳವರೆಗೆ ಕಪ್ಪು ಬಣ್ಣದಲ್ಲಿ ಹರಿಯುತ್ತಿದ್ದ ನೀರು, ಇದೀಗ ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದಕ್ಕೆ ಪ್ರಮುಖ ಕಾರಣ ನದಿ ಪಾತ್ರದ ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ನೀರು. ಬೆಂಗಳೂರು ಹೊರವಲಯದ ಅಂಚೆಪಾಳ್ಯ, ಕುಂಬಳಗೋಡು ಸಮೀಪದ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ನದಿಗೆ ಬಿಡುತ್ತಿವೆ.

ವೃಷಭಾವತಿ ನದಿ ಪುನಶ್ಚೇತನಕ್ಕೆ ಇತ್ತೀಚೆಗಷ್ಟೇ ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ಮೂಲಕ ವೃಷಭಾವತಿ ನದಿ ಉಳಿಸುವ ಬಗ್ಗೆ ಅರಿವು ಮೂಡಿಸಲಾಗಿತ್ತು. ಆದ್ರೆ ಇದೀಗ ಮತ್ತೆ ನದಿಗೆ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ಬಿಟ್ಟಿವೆ.

Published On - 5:03 pm, Mon, 23 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us