AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆಯಲ್ಲಿ ಅನರ್ಹರ ಸ್ಪರ್ಧೆ? ಆಯೋಗದ ‘ಸಮ್ಮತಿ​ಗೆ’ ಉಗ್ರಪ್ಪ ಕಿಡಿಕಿಡಿ

ಬೆಂಗಳೂರು: ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬೇಲಿಯೇ ಎದ್ದು ಹೊಲ ಮೇಯ್ದಿದೆ ಎನ್ನುವುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಪಾರದರ್ಶಕವಾಗಿ ನಡೆಯುವ ಜವಾಬ್ದಾರಿ ಇದೆ. ಆದರೆ ಚುನಾವಣಾ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಒಂದು ವಿಂಗ್ ತರಹ ಕೆಲಸ ಮಾಡಿದೆ. ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆದ ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ಬಿಜೆಪಿಯ ಕಪಿಮುಷ್ಠಿಯಲ್ಲಿ […]

ಉಪಚುನಾವಣೆಯಲ್ಲಿ ಅನರ್ಹರ ಸ್ಪರ್ಧೆ? ಆಯೋಗದ 'ಸಮ್ಮತಿ​ಗೆ' ಉಗ್ರಪ್ಪ ಕಿಡಿಕಿಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 23, 2019 | 6:23 PM

Share

ಬೆಂಗಳೂರು: ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬೇಲಿಯೇ ಎದ್ದು ಹೊಲ ಮೇಯ್ದಿದೆ ಎನ್ನುವುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿ ಎಂದು ಆರೋಪಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ಪಾರದರ್ಶಕವಾಗಿ ನಡೆಯುವ ಜವಾಬ್ದಾರಿ ಇದೆ. ಆದರೆ ಚುನಾವಣಾ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಒಂದು ವಿಂಗ್ ತರಹ ಕೆಲಸ ಮಾಡಿದೆ. ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆದ ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ಬಿಜೆಪಿಯ ಕಪಿಮುಷ್ಠಿಯಲ್ಲಿ ಚುನಾವಣಾ ಆಯೋಗ ಇದ್ದಂತೆ ಕಾಣಸ್ತಿದೆ ಎಂದು ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ.

ಚುನಾವಣಾ ಆಯೋಗ ಒಂದು ಪಕ್ಷ ಅಲ್ಲ: ಇಂದು ಸುಪ್ರೀಂಕೋರ್ಟ್​ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇತ್ತು. ನ್ಯಾಯಾಲಯದ ಮುಂದೆ ಚುನಾವಣಾ ಆಯೋಗದ ಪರವಾಗಿ ರಾಕೇಶ್ ದ್ವಿವೇದಿ ಹಾಜರಾಗಿದ್ದರು. ಆದ್ರೆ ಈ ಪ್ರಕರಣದಲ್ಲಿ ಚುನಾವಣಾ ಆಯೋಗ ಪಕ್ಷ ಅಲ್ಲವೇ ಅಲ್ಲ. ಆದ್ರೂ ಸಹ ವಕೀಲರು ಹಾಜರಾಗಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ದೆಹಲಿಗೆ ಹೋಗಿ ಒತ್ತಡ ತಂದಿದ್ದಾರೆ. ಹೀಗಾಗಿ ಪಿಎಂ ಮೋದಿ, ಅಮಿತ್ ಶಾ ನಿರ್ದೇಶನದ ಮೇರೆಗೆ ಚುನಾವಣಾ ಆಯೋಗದ ವಕೀಲರು ಹಾಜರಾಗಿದ್ದಾರೆ. ಇದರರ್ಥ ಸುಪ್ರೀಂಕೋರ್ಟ್​ ಮೇಲೂ ಪ್ರಭಾವ ಬೀರುವ ಕೆಲಸ ಆಗಿದೆ ಎಂದರು.

ಹಾಲಿ ಸ್ಪೀಕರ್​ಗೆ ಸುಪ್ರೀಂ ನೋಟಿಸ್ ನೀಡಿಲ್ಲ: ನಮ್ಮ ರಾಜ್ಯದ ಚುನಾವಣಾ ಆಯೋಗದ ಆಯುಕ್ತರು ಅನರ್ಹರು ಸ್ಪರ್ಧೆ ಮಾಡೋದಕ್ಕೆ ಅರ್ಹರಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದ್ರೆ, ಕೇಂದ್ರ ಚುನಾವಣಾ ಆಯೋಗದ ವಕೀಲರು ಈ ವಿಚಾರದಲ್ಲಿ ಬೇರೆ ಮಾತುಗಳನ್ನ ಹೇಳ್ತಿದ್ದಾರೆ. ಅವರೇ ವಿಚಾರವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಆದ್ರೆ ಹಾಲಿ ಸ್ಪೀಕರ್​ಗೆ ಇದುವರೆಗೂ ಸುಪ್ರೀಂಕೋರ್ಟ್​ನಿಂದ ನೋಟಿಸ್ ಬಂದಿಲ್ಲ. ಆದರೂ ಸ್ಪೀಕರ್ ಪರವಾಗಿ ಅಧಿಕಾರಿಗಳು ದೆಹಲಿಗೆ ಹೋಗಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಂತೆ ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನತಾ ಕೋರ್ಟ್​ನಲ್ಲಿ ಅಂತಿಮ ತೀರ್ಮಾನ: ಇದು ಹೀಗೇ ಮುಂದುವರಿದರೆ ಜನತಾ ನ್ಯಾಯಾಲಯದಲ್ಲೇ ಅಂತಿಮ ತೀರ್ಮಾನ ಆಗಬೇಕಾಗುತ್ತದೆ. ಈ ಕುರಿತು ನಮ್ಮ ಪರ ವಕೀಲ ಕಪಿಲ್ ಸಿಬಲ್ ಅತ್ಯಂತ ಸ್ಪಷ್ಟವಾಗಿ ಕೋರ್ಟ್​ಗೆ ಮನದಟ್ಟು ಮಾಡಿಕೊಟ್ಟಿದ್ದಾರೆ. ಚುನಾವಣೆ ಆಯೋಗ ಸುಮೋಟೋ ಆಗಿ ಕೋರ್ಟ್​ ಮುಂದೆ ಹಾಜರಾಗಿದ್ದು ಎಷ್ಟು ಸರಿ.? ಯಡಿಯೂರಪ್ಪ ದೆಹಲಿಗೆ ಹೋಗಿದ್ದು ಇದೇ ಸಂದೇಶ ಕಳಿಸುವುದಕ್ಕೆ ಅನಿಸುತ್ತಿದೆ. ಈ ದೇಶದಲ್ಲಿ ಚುನಾವಣೆಗಳು ಹೆಸರಿಗೆ ಮಾತ್ರ ನಡೆಯುತ್ತಿವೆ. ಇದು ಚುನಾವಣೆ ಆಯೋಗದಿಂದಲೇ ಸ್ಪಷ್ಟವಾಗಿ ಗೊತ್ತಾಗುತ್ತಿದೆ ಎಂದು ವಿ.ಎಸ್.ಉಗ್ರಪ್ಪ ಗಂಭೀರವಾಗಿ ಆರೋಪಿಸಿದ್ದಾರೆ.

Published On - 5:49 pm, Mon, 23 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ