AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆಯಲ್ಲಿ ಅನರ್ಹರ ಸ್ಪರ್ಧೆ? ಆಯೋಗದ ‘ಸಮ್ಮತಿ​ಗೆ’ ಉಗ್ರಪ್ಪ ಕಿಡಿಕಿಡಿ

ಬೆಂಗಳೂರು: ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬೇಲಿಯೇ ಎದ್ದು ಹೊಲ ಮೇಯ್ದಿದೆ ಎನ್ನುವುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಪಾರದರ್ಶಕವಾಗಿ ನಡೆಯುವ ಜವಾಬ್ದಾರಿ ಇದೆ. ಆದರೆ ಚುನಾವಣಾ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಒಂದು ವಿಂಗ್ ತರಹ ಕೆಲಸ ಮಾಡಿದೆ. ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆದ ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ಬಿಜೆಪಿಯ ಕಪಿಮುಷ್ಠಿಯಲ್ಲಿ […]

ಉಪಚುನಾವಣೆಯಲ್ಲಿ ಅನರ್ಹರ ಸ್ಪರ್ಧೆ? ಆಯೋಗದ 'ಸಮ್ಮತಿ​ಗೆ' ಉಗ್ರಪ್ಪ ಕಿಡಿಕಿಡಿ
ಸಾಧು ಶ್ರೀನಾಥ್​
|

Updated on:Sep 23, 2019 | 6:23 PM

Share

ಬೆಂಗಳೂರು: ಉಪಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲರು ಹೇಳಿದ್ದಾರೆ. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬೇಲಿಯೇ ಎದ್ದು ಹೊಲ ಮೇಯ್ದಿದೆ ಎನ್ನುವುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿ ಎಂದು ಆರೋಪಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ಪಾರದರ್ಶಕವಾಗಿ ನಡೆಯುವ ಜವಾಬ್ದಾರಿ ಇದೆ. ಆದರೆ ಚುನಾವಣಾ ಆಯೋಗ ಕೇಂದ್ರ ಬಿಜೆಪಿ ಸರ್ಕಾರದ ಒಂದು ವಿಂಗ್ ತರಹ ಕೆಲಸ ಮಾಡಿದೆ. ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆದ ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ಬಿಜೆಪಿಯ ಕಪಿಮುಷ್ಠಿಯಲ್ಲಿ ಚುನಾವಣಾ ಆಯೋಗ ಇದ್ದಂತೆ ಕಾಣಸ್ತಿದೆ ಎಂದು ವಿ.ಎಸ್.ಉಗ್ರಪ್ಪ ಕಿಡಿಕಾರಿದ್ದಾರೆ.

ಚುನಾವಣಾ ಆಯೋಗ ಒಂದು ಪಕ್ಷ ಅಲ್ಲ: ಇಂದು ಸುಪ್ರೀಂಕೋರ್ಟ್​ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇತ್ತು. ನ್ಯಾಯಾಲಯದ ಮುಂದೆ ಚುನಾವಣಾ ಆಯೋಗದ ಪರವಾಗಿ ರಾಕೇಶ್ ದ್ವಿವೇದಿ ಹಾಜರಾಗಿದ್ದರು. ಆದ್ರೆ ಈ ಪ್ರಕರಣದಲ್ಲಿ ಚುನಾವಣಾ ಆಯೋಗ ಪಕ್ಷ ಅಲ್ಲವೇ ಅಲ್ಲ. ಆದ್ರೂ ಸಹ ವಕೀಲರು ಹಾಜರಾಗಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ದೆಹಲಿಗೆ ಹೋಗಿ ಒತ್ತಡ ತಂದಿದ್ದಾರೆ. ಹೀಗಾಗಿ ಪಿಎಂ ಮೋದಿ, ಅಮಿತ್ ಶಾ ನಿರ್ದೇಶನದ ಮೇರೆಗೆ ಚುನಾವಣಾ ಆಯೋಗದ ವಕೀಲರು ಹಾಜರಾಗಿದ್ದಾರೆ. ಇದರರ್ಥ ಸುಪ್ರೀಂಕೋರ್ಟ್​ ಮೇಲೂ ಪ್ರಭಾವ ಬೀರುವ ಕೆಲಸ ಆಗಿದೆ ಎಂದರು.

ಹಾಲಿ ಸ್ಪೀಕರ್​ಗೆ ಸುಪ್ರೀಂ ನೋಟಿಸ್ ನೀಡಿಲ್ಲ: ನಮ್ಮ ರಾಜ್ಯದ ಚುನಾವಣಾ ಆಯೋಗದ ಆಯುಕ್ತರು ಅನರ್ಹರು ಸ್ಪರ್ಧೆ ಮಾಡೋದಕ್ಕೆ ಅರ್ಹರಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದ್ರೆ, ಕೇಂದ್ರ ಚುನಾವಣಾ ಆಯೋಗದ ವಕೀಲರು ಈ ವಿಚಾರದಲ್ಲಿ ಬೇರೆ ಮಾತುಗಳನ್ನ ಹೇಳ್ತಿದ್ದಾರೆ. ಅವರೇ ವಿಚಾರವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಆದ್ರೆ ಹಾಲಿ ಸ್ಪೀಕರ್​ಗೆ ಇದುವರೆಗೂ ಸುಪ್ರೀಂಕೋರ್ಟ್​ನಿಂದ ನೋಟಿಸ್ ಬಂದಿಲ್ಲ. ಆದರೂ ಸ್ಪೀಕರ್ ಪರವಾಗಿ ಅಧಿಕಾರಿಗಳು ದೆಹಲಿಗೆ ಹೋಗಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಂತೆ ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನತಾ ಕೋರ್ಟ್​ನಲ್ಲಿ ಅಂತಿಮ ತೀರ್ಮಾನ: ಇದು ಹೀಗೇ ಮುಂದುವರಿದರೆ ಜನತಾ ನ್ಯಾಯಾಲಯದಲ್ಲೇ ಅಂತಿಮ ತೀರ್ಮಾನ ಆಗಬೇಕಾಗುತ್ತದೆ. ಈ ಕುರಿತು ನಮ್ಮ ಪರ ವಕೀಲ ಕಪಿಲ್ ಸಿಬಲ್ ಅತ್ಯಂತ ಸ್ಪಷ್ಟವಾಗಿ ಕೋರ್ಟ್​ಗೆ ಮನದಟ್ಟು ಮಾಡಿಕೊಟ್ಟಿದ್ದಾರೆ. ಚುನಾವಣೆ ಆಯೋಗ ಸುಮೋಟೋ ಆಗಿ ಕೋರ್ಟ್​ ಮುಂದೆ ಹಾಜರಾಗಿದ್ದು ಎಷ್ಟು ಸರಿ.? ಯಡಿಯೂರಪ್ಪ ದೆಹಲಿಗೆ ಹೋಗಿದ್ದು ಇದೇ ಸಂದೇಶ ಕಳಿಸುವುದಕ್ಕೆ ಅನಿಸುತ್ತಿದೆ. ಈ ದೇಶದಲ್ಲಿ ಚುನಾವಣೆಗಳು ಹೆಸರಿಗೆ ಮಾತ್ರ ನಡೆಯುತ್ತಿವೆ. ಇದು ಚುನಾವಣೆ ಆಯೋಗದಿಂದಲೇ ಸ್ಪಷ್ಟವಾಗಿ ಗೊತ್ತಾಗುತ್ತಿದೆ ಎಂದು ವಿ.ಎಸ್.ಉಗ್ರಪ್ಪ ಗಂಭೀರವಾಗಿ ಆರೋಪಿಸಿದ್ದಾರೆ.

Published On - 5:49 pm, Mon, 23 September 19

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್