AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Apr 26, 2021 | 10:49 PM

Share

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ ಎಂದು ಹೇಳಲಾಗಿತ್ತು. ಇದಕ್ಕೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಸರ್ಕಾರ ಲಾಕ್​ಡೌನ್​ ಘೋಷಣೆ ನಿರ್ಧಾರದ ಬೆನ್ನಲ್ಲೇ ವಿಟಿಯು ಪರೀಕ್ಷೆಯನ್ನು ಮುಂದೂಡಲಾಗಿದೆ.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ. ಎಲ್ಲ ಪ್ರಾಯೋಗಿಕ ಪರೀಕ್ಷೆಗಳು ಸಹ ಮುಂದೂಡಲ್ಪಟ್ಟಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಪರೀಕ್ಷೆಗಳು ಏಪ್ರಿಲ್ 19ರಿಂದ ಆರಂಭವಾಗಬೇಕಿತ್ತು. ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದರು.

ಕೊರೊನಾ 2ನೇ ಅಲೆ ಇಡೀ ದೇಶವನ್ನೆ ಕಾಡುತ್ತಿದೆ. ಕೊರೊನಾ ಹೊಡೆತಕ್ಕೆ ಕರ್ನಾಟಕ ಅಕ್ಷರಶಃ ತತ್ತರಿಸಿದೆ. ಮಾಹಾಮಾರಿ ಓಟಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಕಠಿಣಾತಿ ಕಠಿಣ ರೂಲ್ಸ್ ಜಾರಿಗೆ ತಂದಿದೆ. ಇಂದಿನಿಂದ ಮೇ 4ರವರೆಗೂ ನೈಟ್‌ ಕರ್ಫ್ಯೂ ಜೊತೆ ಜೊತೆಗೆ ವೀಕೆಂಡ್‌ ಕರ್ಫ್ಯೂವನ್ನ ಹೇರಿ ಆದೇಶ ಹೊರಡಿಸಿದೆ. ಹಾಗೂ ಶಾಲಾ-ಕಾಲೇಜು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಬಂದ್ ಮಾಡುವಂತೆ ಮಾರ್ಗಸೂಚಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಹೀಗಾಗಿ ಬಹುತೇಕ ಕಾಲೇಜು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಆದರೆ, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸೋದು ಎಷ್ಟು ಸರಿ ಎನ್ನುವ ಪ್ರಶ್ನೆ ಮೂಡಿತ್ತು.

ಇದನ್ನೂ ಓದಿ: ವಿಟಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ: ಕುಲಪತಿ ಪ್ರೊ.ಕರಿಸಿದ್ದಪ್ಪ

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ