AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Apr 26, 2021 | 10:49 PM

Share

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ ಎಂದು ಹೇಳಲಾಗಿತ್ತು. ಇದಕ್ಕೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಸರ್ಕಾರ ಲಾಕ್​ಡೌನ್​ ಘೋಷಣೆ ನಿರ್ಧಾರದ ಬೆನ್ನಲ್ಲೇ ವಿಟಿಯು ಪರೀಕ್ಷೆಯನ್ನು ಮುಂದೂಡಲಾಗಿದೆ.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ. ಎಲ್ಲ ಪ್ರಾಯೋಗಿಕ ಪರೀಕ್ಷೆಗಳು ಸಹ ಮುಂದೂಡಲ್ಪಟ್ಟಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಪರೀಕ್ಷೆಗಳು ಏಪ್ರಿಲ್ 19ರಿಂದ ಆರಂಭವಾಗಬೇಕಿತ್ತು. ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದರು.

ಕೊರೊನಾ 2ನೇ ಅಲೆ ಇಡೀ ದೇಶವನ್ನೆ ಕಾಡುತ್ತಿದೆ. ಕೊರೊನಾ ಹೊಡೆತಕ್ಕೆ ಕರ್ನಾಟಕ ಅಕ್ಷರಶಃ ತತ್ತರಿಸಿದೆ. ಮಾಹಾಮಾರಿ ಓಟಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಕಠಿಣಾತಿ ಕಠಿಣ ರೂಲ್ಸ್ ಜಾರಿಗೆ ತಂದಿದೆ. ಇಂದಿನಿಂದ ಮೇ 4ರವರೆಗೂ ನೈಟ್‌ ಕರ್ಫ್ಯೂ ಜೊತೆ ಜೊತೆಗೆ ವೀಕೆಂಡ್‌ ಕರ್ಫ್ಯೂವನ್ನ ಹೇರಿ ಆದೇಶ ಹೊರಡಿಸಿದೆ. ಹಾಗೂ ಶಾಲಾ-ಕಾಲೇಜು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಬಂದ್ ಮಾಡುವಂತೆ ಮಾರ್ಗಸೂಚಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಹೀಗಾಗಿ ಬಹುತೇಕ ಕಾಲೇಜು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಆದರೆ, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸೋದು ಎಷ್ಟು ಸರಿ ಎನ್ನುವ ಪ್ರಶ್ನೆ ಮೂಡಿತ್ತು.

ಇದನ್ನೂ ಓದಿ: ವಿಟಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ: ಕುಲಪತಿ ಪ್ರೊ.ಕರಿಸಿದ್ದಪ್ಪ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?