VTUನಲ್ಲಿ ಕೋಟ್ಯಾಂತರ ರೂ ಹಗರಣ, ಲೋಕಾಯುಕ್ತರಿಗೆ ದೂರು ನೀಡಲು ನಿರ್ಧಾರ

VTU Fund Scam: ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ನೀಡಿದ ಕೋಟ್ಯಾಂತರ ಹಣ ಅಕ್ರಮವಾಗಿದೆ. ಬರೋಬ್ಬರಿ 172.2 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಆರ್‌ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ಆರೋಪ ಮಾಡಿದ್ದಾರೆ.

VTUನಲ್ಲಿ ಕೋಟ್ಯಾಂತರ ರೂ ಹಗರಣ, ಲೋಕಾಯುಕ್ತರಿಗೆ ದೂರು ನೀಡಲು ನಿರ್ಧಾರ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)
Follow us
|

Updated on:Feb 05, 2021 | 3:09 PM

ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (VTU) ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹಗರಣಗಳ ಹೊಳೆಯಲ್ಲಿ VTU ತೇಲುತ್ತಿದೆ. ಗುಣಮಟ್ಟ ಶಿಕ್ಷಣಕ್ಕೆ ಸರ್ಕಾರ ನೀಡಿದ ಕೋಟ್ಯಾಂತರ ಹಣ ಅಕ್ರಮವಾಗಿದೆ. ಬರೋಬ್ಬರಿ 172.2 ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಆರ್‌ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ಆರೋಪ ಮಾಡಿದ್ದಾರೆ. 2017-18 ನೇ ಸಾಲಿನ ವಾರ್ಷಿಕ ಲೆಕ್ಕ ಪರಿಶೋಧನಾ ವರದಿಯಲ್ಲಿ ಈ ಅಕ್ರಮ ಬಯಲಾಗಿದೆ.

ಬೆಳಗಾವಿಯ ವಕೀಲ ಸುರೇಂದ್ರ ಉಗಾರೆ ಆರ್‌ಟಿಐ ಅಡಿ ಸಲ್ಲಿಸಿದ್ದ ಅರ್ಜಿಯಲ್ಲಿ ಮಾಹಿತಿ ಬಹಿರಂಗಗೊಂಡಿದೆ. ವಿಟಿಯು ಖಾತೆಯಲ್ಲಿನ ಹಣ ಡ್ರಾ ಮಾಡಿಕೊಂಡು ಮತ್ತೆ ಅದೇ ಅಕೌಂಟ್​ಗೆ ಜಮೆ ಮಾಡಲಾಗಿದೆ. ನಿಗದಿತ ಉದ್ದೇಶವಿಲ್ಲದೇ ಹಣ ಡ್ರಾ ಮಾಡಿ ಮತ್ತೆ ಜಮೆ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ ಮೌಲ್ಯಮಾಪನ ಕುಲಸಚಿವರಿಗೆ ₹109.60 ಕೋಟಿ ರೂಪಾಯಿ ಮುಂಗಡ ಹಣ ಪಾವತಿ ಮಾಡಲಾಗಿದೆ.

ನಿಯಮ ಬಾಹಿರವಾಗಿ ಗುತ್ತಿಗೆ ಸಿಬ್ಬಂದಿ ನೇಮಕ ಮಾಡಿ 28,44,517 ರೂಪಾಯಿ ಸಂದಾಯ ಮಾಡಲಾಗಿದೆ. 2017-18ನೇ ಸಾಲಿನ ಮೌಲ್ಯಮಾಪನ ಮುಂಗಡ ಲೆಡ್ಜರ್ ಪರಿಶೀಲಿಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ತಾತ್ಕಾಲಿಕ ಹಣದ ದುರುಪಯೋಗ ಪ್ರಕರಣ ಎಂದು ಪರಿಗಣಿಸಿದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಅಲ್ಲದೆ ಮೌಲ್ಯಮಾಪನ ಕುಲಸಚಿವರ ಹೆಸರಿನಲ್ಲಿ ಯಾವುದೇ ಬ್ಯಾಂಕ್ ಖಾತೆ ಇಲ್ಲ. ಬ್ಯಾಂಕ್ ಖಾತೆ ಇಲ್ಲದಿದ್ರೂ ಕೋಟ್ಯಾಂತರ ರೂ. ವಹಿವಾಟು ನಡೆದಿದೆ. ಅಕ್ರಮದ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲು ನಿರ್ಧಾರ ಮಾಡಲಾಗಿದೆ ಎಂದು ಟಿವಿ9ಗೆ ಆರ್‌ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ತಿಳಿಸಿದ್ದಾರೆ.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​

Published On - 11:52 am, Fri, 5 February 21

ತಾಜಾ ಸುದ್ದಿ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ