AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ವಿಟಿಯು ಪರೀಕ್ಷೆ: ಸಮಸ್ಯೆ ಬಗ್ಗೆ ವಿಟಿಯುಗೆ ಟ್ಯಾಗ್ ಮಾಡಿದ್ದ ವಿದ್ಯಾರ್ಥಿಗಳು ಸಸ್ಪೆಂಡ್

ನಾಳೆಯಿಂದ ಮೇ 5ರ ವರೆಗೆ ಪ್ರಥಮ ವರ್ಷದ ವಿಟಿಯು ಪರೀಕ್ಷೆ ನಡೆಯಲಿದೆ. ಮಹಾಮಾರಿ ಕೊರೊನಾ ನಡುವೆ ನಡೆಸುವ ಪರೀಕ್ಷೆಯಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುತ್ತದೆಯಾ ಎಂಬ ಆತಂಕ ಮನೆ ಮಾಡಿದೆ.

ನಾಳೆಯಿಂದ ವಿಟಿಯು ಪರೀಕ್ಷೆ: ಸಮಸ್ಯೆ ಬಗ್ಗೆ ವಿಟಿಯುಗೆ ಟ್ಯಾಗ್ ಮಾಡಿದ್ದ ವಿದ್ಯಾರ್ಥಿಗಳು ಸಸ್ಪೆಂಡ್
ಪ್ರಾತಿನಿಧಿಕ ಚಿತ್ರ
sandhya thejappa
| Edited By: |

Updated on: Apr 18, 2021 | 5:54 PM

Share

ಬೆಂಗಳೂರು: ವಿದ್ಯಾರ್ಥಿಗಳ ವಿರೋಧದ ನಡುವೆಯೂ ನಾಳೆಯಿಂದ (ಏಪ್ರಿಲ್ 19) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಇಂಜಿನಿಯರಿಂಗ್ ಮೊದಲ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ನಡೆಸುತ್ತಿದೆ. ನಾಳೆಯಿಂದ ನಡೆಯುವ ಮೊದಲ ಸೆಮಿಸ್ಟರ್ ಪರೀಕ್ಷೆ ಹಿನ್ನೆಲೆ ಸಮಸ್ಯೆ ಬಗ್ಗೆ ವಿಟಿಯುಗೆ ಟ್ಯಾಗ್ ಮಾಡಿದ್ದವರನ್ನು ವಿಟಿಯು ಸಸ್ಪೆಂಡ್ ಶಿಕ್ಷೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಪರೀಕ್ಷೆ ಮಾಡಿ ಎಂದು ಟ್ವಿಟರ್​ನಲ್ಲಿ ವಿಟಿಯುಗೆ ಟ್ಯಾಗ್ ಮಾಡಿ ಮನವಿ ಕೋರಿದ್ದ ವಿದ್ಯಾರ್ಥಿಗಳು ಸಸ್ಪೆಂಡ್ ಆಗಿದ್ದಾರೆ.

ನಾಳೆಯಿಂದ ಮೇ 5ರ ವರೆಗೆ ಪ್ರಥಮ ವರ್ಷದ ವಿಟಿಯು ಪರೀಕ್ಷೆ ನಡೆಯಲಿದೆ. ಮಹಾಮಾರಿ ಕೊರೊನಾ ನಡುವೆ ನಡೆಸುವ ಪರೀಕ್ಷೆಯಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುತ್ತದೆಯಾ ಎಂಬ ಆತಂಕ ಮನೆ ಮಾಡಿದೆ. ಕೊರೊನಾ ಇದ್ದರೂ ಪರೀಕ್ಷೆ ಬರೆಯಬೇಕಾಗಿದ್ದು, ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ಬೇಡ ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ. ಬೆಂಗಳೂರಿನಲ್ಲೇ 15 ಸಾವಿರಕ್ಕೂ ಹೆಚ್ಚು ವಿಟಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗುಜರಾತ್, ಮಹಾರಾಷ್ಟ್ರ, ಕೇರಳದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬರಬೇಕಿದೆ. ಸದ್ಯದ ಪರಿಸ್ಥಿತಿಗೆ ಪರೀಕ್ಷೆ ಬೇಡ ಎಂದು ವಿದ್ಯಾರ್ಥಿಗಳು ಮನವಿ ಮಾಡುತ್ತಿದ್ದರೂ ಪರೀಕ್ಷೆ ನಡೆಸಲು ವಿಟಿಯು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಿಕೆ ಮಾಡಲ್ಲ. ಆಫ್​ಲೈನಲ್ಲೇ ಪರೀಕ್ಷೆ ಬರೆಯಬೇಕು ಎಂದು ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹೇಳುತ್ತಿದ್ದಾರೆ.

ಟ್ವಿಟರ್​ನಲ್ಲಿ ಮನವಿ ಕೋರಿದ್ದ ವಿದ್ಯಾರ್ಥಿಗಳು

ಇದನ್ನೂ ಓದಿ

Tv9 Digital Live: 10 ಸಾವಿರ ಇ-ಮೇಲ್​ಗೂ ಕಿವಿಗೊಡದ ವಿಟಿಯು; ಒಂದೇ ದಿನದ ಅಂತರದಲ್ಲಿ ಕಠಿಣ ವಿಷಯಗಳ ಪರೀಕ್ಷೆ ನಡೆಸಲು ಸಿದ್ಧತೆ

ರೈಲುಗಳ ಮೂಲಕ ವೈದ್ಯಕೀಯ ಆಕ್ಸಿಜನ್​ ಸಾಗಣೆಗೆ ಅವಕಾಶ ಕೊಡಿ; ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರದ ಮನವಿ

(VTU has suspended students who insisted on conducting the test after Corona came under control in twitter)

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ