AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ರಾತ್ರಿಯಲ್ಲಿ 43 ಮೆಟ್ರಿಕ್ ಟನ್ ಕಬ್ಬು ಟ್ರ್ಯಾಕ್ಟರ್​ಗೆ ತುಂಬಿಸಿ ಸಾಹಸ ಮೆರೆದ ಕಾರ್ಮಿಕ

ಗ್ರಾಮದ ಶ್ರೀನಿವಾಸ ಲೆಂಡಿ ಎನ್ನುವ ರೈತರ ಜಮೀನಿನಲ್ಲಿ ಕಡಿದು ಹಾಕಿದ್ದ ಕಬ್ಬನ್ನು ಕಾರ್ಮಿಕರಾದ ಶ್ರೀನಿವಾಸ ಹೊತ್ತುಕೊಂಡು ಟ್ರ್ಯಾಕ್ಟರ್​ನಲ್ಲಿ ಹಾಕಿದ್ದು, ಈ ಹಿಂದೆ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಒಂದು ರಾತ್ರಿಯಲ್ಲಿ 34 ಟನ್ ಕಬ್ಬು ಲೋಡ್ ಮಾಡಿದ್ದರು.

ಒಂದೇ ರಾತ್ರಿಯಲ್ಲಿ 43 ಮೆಟ್ರಿಕ್ ಟನ್ ಕಬ್ಬು ಟ್ರ್ಯಾಕ್ಟರ್​ಗೆ ತುಂಬಿಸಿ ಸಾಹಸ ಮೆರೆದ ಕಾರ್ಮಿಕ
ಶ್ರೀನಿವಾಸ ಕಬ್ಬು ಟ್ರ್ಯಾಕ್ಟರ್​ಗೆ ಲೋಡ್ ಮಾಡುತ್ತಿರುವ ದೃಶ್ಯ
preethi shettigar
| Edited By: |

Updated on:Jan 19, 2021 | 12:33 PM

Share

ಬಾಗಲಕೋಟೆ: ಕಡಿದು ಹಾಕಿದ್ದ 43 ಮೆಟ್ರಿಕ್ ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ  ಟ್ರ್ಯಾಕ್ಟರ್​ನಲ್ಲಿ ಹೇರುವ ಮೂಲಕ ಕೂಲಿ ಕಾರ್ಮಿಕರೊಬ್ಬರು ಸಾಹಸ ಮೆರೆದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದಲ್ಲಿ ನಡೆದಿದೆ.

ಕಬ್ಬು ಕಡಿಯುವ ಗ್ಯಾಂಗ್​ನಲ್ಲಿ ಕೂಲಿ ಕೆಲಸ ಮಾಡುವ ಶ್ರೀನಿವಾಸ ನಾಯಕ ಎನ್ನುವ 21 ವರ್ಷದ ಯುವಕ ಈ ಸಾಹಸ ಮಾಡಿದ್ದಾರೆ. ಶ್ರೀನಿವಾಸ ಅವರು ರಾತ್ರಿ 11.50 ಕ್ಕೆ ಕಬ್ಬು ಹೇರುವ ಕೆಲಸವನ್ನು ಆರಂಭಿಸಿ, ಬೆಳಗ್ಗೆ 6.20 ರವರೆಗೆ ಮೂರು ಟ್ರ್ಯಾಲಿಗಳಲ್ಲಿ ಒಟ್ಟು 43 ಟನ್ ಕಬ್ಬು ಲೋಡ್ ಮಾಡಿದ್ದಾರೆ.

ಟ್ರ್ಯಾಕ್ಟರ್​ನಲ್ಲಿ ಕಬ್ಬು ಹೇರುವ ಚಿತ್ರಣ

ಗ್ರಾಮದ ಶ್ರೀನಿವಾಸ ಲೆಂಡಿ ಎನ್ನುವ ರೈತರ ಜಮೀನಿನಲ್ಲಿ ಕಡಿದು ಹಾಕಿದ್ದ ಕಬ್ಬನ್ನು ಕಾರ್ಮಿಕರಾದ ಶ್ರೀನಿವಾಸ ಹೊತ್ತುಕೊಂಡು ಟ್ರ್ಯಾಕ್ಟರ್​ನಲ್ಲಿ ಹಾಕಿದ್ದು, ಈ ಹಿಂದೆ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಒಂದು ರಾತ್ರಿಯಲ್ಲಿ 34 ಟನ್ ಕಬ್ಬು ಲೋಡ್ ಮಾಡಿದ್ದರು. ಆದರೆ ಈಗ ಈ ದಾಖಲೆ ಮುರಿಯಲು ಶ್ರೀನಿವಾಸ 43 ಟನ್ ಕಬ್ಬು ಲೋಡ್ ಮಾಡಿ, ಕಬ್ಬಿನ ಗ್ಯಾಂಗ್​ನವರಿಂದ ಶಹಬ್ಬಾಸ್​ಗಿರಿ ಪಡೆದಿದ್ದಾರೆ.

ಕಬ್ಬು ಕಟಾವು ಕಾರ್ಮಿಕರ ಅಲೆದಾಟ, ಶಿಕ್ಷಣವಿಲ್ಲದೆ ಮಕ್ಕಳ ಭವಿಷ್ಯ ಅತಂತ್ರ..!

Published On - 12:32 pm, Tue, 19 January 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್