Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ

ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ ನೋಟಿಸ್ ವಿಚಾರ ಸದ್ಯ ಕಾಂಗ್ರೆಸ್​ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್​ ಸಮರಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಮಾತನಾಡಿದ್ದು, ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು 1973-74ರಲ್ಲಿ ನೋಟಿಫಿಕೇಷನ್​ ಆಗಿದೆ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ
ವಿಜಯಪುರದಲ್ಲಿ ವಕ್ಫ್​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Oct 28, 2024 | 6:55 PM

ಬೆಂಗಳೂರು, ಅಕ್ಟೋಬರ್​​ 28: ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ (Waqf land dispute) ನೋಟಿಸ್ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಮಧ್ಯೆ ವಾಕ್​ ಸಮರಕ್ಕೂ ಕಾರಣವಾಗಿದೆ. ಇದೀಗ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿದ್ದು, ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು 1973-74ರಲ್ಲಿ ನೋಟಿಫಿಕೇಷನ್ ಆಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪೈಕಿ 700 ಎಕರೆ ಮಾತ್ರ ವಕ್ಫ್‌ ಬೋರ್ಡ್‌ನ ಸ್ವಾಧೀನದಲ್ಲಿದೆ. ಉಳಿದ ಆಸ್ತಿಗಳು ಕೆಲವು ಮುಸ್ಲಿಂ ಸಂಸ್ಥೆಗಳ ವಶದಲ್ಲಿವೆ. ಕೆಲವು ಆಸ್ತಿ ಈದ್ಗಾ ಮೈದಾನ ಆಗಿದೆ, ದರ್ಗಾ ಹೆಸರಲ್ಲಿದೆ. 1319 ಎಕರೆ ಯಾವುದೇ ವೈಯಕ್ತಿಕ ಅನುಭೋಗದಲ್ಲಿ ಇಲ್ಲ. 1319 ಎಕರೆ ಯಾರಿಗೂ ಮಂಜೂರು ಆಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: 433 ರೈತರಿಗೆ ನೋಟಿಸ್: ವಕ್ಫ್ ಆಸ್ತಿ ವಿವಾದಕ್ಕೆ ತೆರೆ ಎಳೆದ ಸಚಿವ ಎಂಬಿ ಪಾಟೀಲ್​

ಇವುಗಳನ್ನು ಇಂದೀಕರಣ ಮಾಡಬಹುದು ಅಂತಾ ತೀರ್ಮಾನಿಸಲಾಗಿದೆ. ಇಂದೀಕರಣ ಮಾಡುವುದರಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ. 11,835 ಎಕರೆ ಉಳುವವನೇ ಭೂಒಡೆಯ ಅಡಿ ಮಂಜೂರಾಗಿದೆ. ಬೇರೆ ಬೇರೆ ಯೋಜನೆಗಳಿಗೂ ಭೂಸ್ವಾಧೀನ ಆಗಿದೆ. ಇದು ಯಾವುದಕ್ಕೂ ನೋಟಿಸ್ ಕೊಟ್ಟಿಲ್ಲ, ಕೊಡುವ ಉದ್ದೇಶವೂ ಇಲ್ಲ. ವಕ್ಫ್ ಇಲಾಖೆಯ ಸಚಿವ ಜಮೀರ್‌ ಕೂಡ ಇದಕ್ಕೆ ಸೂಚನೆ ನೀಡಿಲ್ಲ. ರೈತರಿಗೆ ಮಂಜೂರಾದ ಜಮೀನಿಗೆ ಯಾರಿಗೂ ನೋಟಿಸ್‌ ನೀಡಿಲ್ಲ. 121 ನೋಟಿಸ್ ನೀಡಿರುವುದು ನಿಜ ಎಂದಿದ್ದಾರೆ.

ಇದನ್ನೂ ಓದಿ: ಸಮಿತಿಯಲ್ಲಿ ಹೆಸರು ಸೇರಿಸದೆ ವಿಜಯೇಂದ್ರರಿಂದ ನನ್ನನ್ನು ತುಳಿಯುವ ಪ್ರಯತ್ನ: ಬಸನಗೌಡ ಯತ್ನಾಳ್

ಇಂಡಿ ತಾಲೂಕಿನ ಕೆಲವು ಕಡೆ ತಹಶೀಲ್ದಾರ್‌ ಕೆಲವು ಕಡೆ ನೋಟಿಸ್ ನೀಡದೆ ಮಾಡಿದ್ದಾರೆ. ಇದನ್ನು ವಾಪಸ್ ಮಾಡುತ್ತೇವೆ. ಉದ್ದೇಶಪೂರ್ವಕವಾಗಿ ಗಲಭೆ ಹುಟ್ಟಿಸಬೇಕು ಎಂದೇ ಹೊರಟಿದ್ದಾರೆ. 1977ರಲ್ಲೇ ಹೊನವಾಡ ಗ್ರಾಮವನ್ನು ವಕ್ಫ್‌ನಿಂದ ತೆಗೆದುಹಾಕಲಾಗಿದೆ. ಹೊನವಾಡ ಗ್ರಾಮದಲ್ಲಿ 11 ಎಕರೆ ಮಾತ್ರ ವಕ್ಫ್‌ ಆಸ್ತಿ ಇದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹೊನವಾಡದಲ್ಲಿರುವ ಗ್ರಾಮದ ಯಾವ ರೈತರಿಗೂ ನೋಟಿಸ್ ನೀಡಿಲ್ಲ. ಇದು ವಕ್ಫ್‌ ಹಾಗೂ ರೈತರ ನಡುವೆ ಇರುವ ಸಮಸ್ಯೆಯಲ್ಲ. ಇದು ಕೇವಲ ಯತ್ನಾಳ್‌, ವಿಜಯೇಂದ್ರ ನಡುವೆ ಇರುವ ಸಮಸ್ಯೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್