ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ

ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ ನೋಟಿಸ್ ವಿಚಾರ ಸದ್ಯ ಕಾಂಗ್ರೆಸ್​ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್​ ಸಮರಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಮಾತನಾಡಿದ್ದು, ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು 1973-74ರಲ್ಲಿ ನೋಟಿಫಿಕೇಷನ್​ ಆಗಿದೆ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ
ವಿಜಯಪುರದಲ್ಲಿ ವಕ್ಫ್​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 28, 2024 | 6:55 PM

ಬೆಂಗಳೂರು, ಅಕ್ಟೋಬರ್​​ 28: ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ (Waqf land dispute) ನೋಟಿಸ್ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಮಧ್ಯೆ ವಾಕ್​ ಸಮರಕ್ಕೂ ಕಾರಣವಾಗಿದೆ. ಇದೀಗ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿದ್ದು, ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು 1973-74ರಲ್ಲಿ ನೋಟಿಫಿಕೇಷನ್ ಆಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪೈಕಿ 700 ಎಕರೆ ಮಾತ್ರ ವಕ್ಫ್‌ ಬೋರ್ಡ್‌ನ ಸ್ವಾಧೀನದಲ್ಲಿದೆ. ಉಳಿದ ಆಸ್ತಿಗಳು ಕೆಲವು ಮುಸ್ಲಿಂ ಸಂಸ್ಥೆಗಳ ವಶದಲ್ಲಿವೆ. ಕೆಲವು ಆಸ್ತಿ ಈದ್ಗಾ ಮೈದಾನ ಆಗಿದೆ, ದರ್ಗಾ ಹೆಸರಲ್ಲಿದೆ. 1319 ಎಕರೆ ಯಾವುದೇ ವೈಯಕ್ತಿಕ ಅನುಭೋಗದಲ್ಲಿ ಇಲ್ಲ. 1319 ಎಕರೆ ಯಾರಿಗೂ ಮಂಜೂರು ಆಗಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: 433 ರೈತರಿಗೆ ನೋಟಿಸ್: ವಕ್ಫ್ ಆಸ್ತಿ ವಿವಾದಕ್ಕೆ ತೆರೆ ಎಳೆದ ಸಚಿವ ಎಂಬಿ ಪಾಟೀಲ್​

ಇವುಗಳನ್ನು ಇಂದೀಕರಣ ಮಾಡಬಹುದು ಅಂತಾ ತೀರ್ಮಾನಿಸಲಾಗಿದೆ. ಇಂದೀಕರಣ ಮಾಡುವುದರಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ. 11,835 ಎಕರೆ ಉಳುವವನೇ ಭೂಒಡೆಯ ಅಡಿ ಮಂಜೂರಾಗಿದೆ. ಬೇರೆ ಬೇರೆ ಯೋಜನೆಗಳಿಗೂ ಭೂಸ್ವಾಧೀನ ಆಗಿದೆ. ಇದು ಯಾವುದಕ್ಕೂ ನೋಟಿಸ್ ಕೊಟ್ಟಿಲ್ಲ, ಕೊಡುವ ಉದ್ದೇಶವೂ ಇಲ್ಲ. ವಕ್ಫ್ ಇಲಾಖೆಯ ಸಚಿವ ಜಮೀರ್‌ ಕೂಡ ಇದಕ್ಕೆ ಸೂಚನೆ ನೀಡಿಲ್ಲ. ರೈತರಿಗೆ ಮಂಜೂರಾದ ಜಮೀನಿಗೆ ಯಾರಿಗೂ ನೋಟಿಸ್‌ ನೀಡಿಲ್ಲ. 121 ನೋಟಿಸ್ ನೀಡಿರುವುದು ನಿಜ ಎಂದಿದ್ದಾರೆ.

ಇದನ್ನೂ ಓದಿ: ಸಮಿತಿಯಲ್ಲಿ ಹೆಸರು ಸೇರಿಸದೆ ವಿಜಯೇಂದ್ರರಿಂದ ನನ್ನನ್ನು ತುಳಿಯುವ ಪ್ರಯತ್ನ: ಬಸನಗೌಡ ಯತ್ನಾಳ್

ಇಂಡಿ ತಾಲೂಕಿನ ಕೆಲವು ಕಡೆ ತಹಶೀಲ್ದಾರ್‌ ಕೆಲವು ಕಡೆ ನೋಟಿಸ್ ನೀಡದೆ ಮಾಡಿದ್ದಾರೆ. ಇದನ್ನು ವಾಪಸ್ ಮಾಡುತ್ತೇವೆ. ಉದ್ದೇಶಪೂರ್ವಕವಾಗಿ ಗಲಭೆ ಹುಟ್ಟಿಸಬೇಕು ಎಂದೇ ಹೊರಟಿದ್ದಾರೆ. 1977ರಲ್ಲೇ ಹೊನವಾಡ ಗ್ರಾಮವನ್ನು ವಕ್ಫ್‌ನಿಂದ ತೆಗೆದುಹಾಕಲಾಗಿದೆ. ಹೊನವಾಡ ಗ್ರಾಮದಲ್ಲಿ 11 ಎಕರೆ ಮಾತ್ರ ವಕ್ಫ್‌ ಆಸ್ತಿ ಇದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹೊನವಾಡದಲ್ಲಿರುವ ಗ್ರಾಮದ ಯಾವ ರೈತರಿಗೂ ನೋಟಿಸ್ ನೀಡಿಲ್ಲ. ಇದು ವಕ್ಫ್‌ ಹಾಗೂ ರೈತರ ನಡುವೆ ಇರುವ ಸಮಸ್ಯೆಯಲ್ಲ. ಇದು ಕೇವಲ ಯತ್ನಾಳ್‌, ವಿಜಯೇಂದ್ರ ನಡುವೆ ಇರುವ ಸಮಸ್ಯೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ