AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆಯಲ್ಲಿ ಪ್ಲಾಸ್ಟಿಕ್​ ಬಾಟಲ್​ಗಳಿಂದ ನಿರ್ಮಾಣವಾಗಿದೆ ಕಾಂಪೌಂಡ್

ಮಂಗಳೂರು: ಎಲ್ಲಿ ನೋಡಿದ್ರೂ.. ಯಾರ ಕೈಯಲ್ಲಿ ನೋಡಿದ್ರೂ ಪ್ಲಾಸ್ಟಿಕ್​ ಬಾಟಲ್​​ಗಳದ್ದೇ ಹಾವಳಿ.. ಕಂಡ ಕಂಡಲ್ಲಿ ಕಾಣೋದು ಪ್ಲಾಸ್ಟಿಕ್ ಬಾಟಲಿಗಳೇ ಕಣ್ಣಿಗೆ ಬೀಳ್ತವೆ.. ಆದ್ರೆ.. ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ಲಾಸ್ಟಿಕ್​​ ಬಾಟಲ್​​​ನಲ್ಲೇ ಕಾಂಪೌಂಡ್​ ಅರಳಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಂದ್ರೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸೋ ಸುಕ್ಷೇತ್ರ. ಅದ್ರಲ್ಲೂ ವಿಶೇಷ ದಿನಗಳಲ್ಲಂತೂ ಭಕ್ತರ ದಂಡೇ ಹರಿದು ಬರುತ್ತೆ. ಈ ಪುಣ್ಯಕ್ಷೇತ್ರಕ್ಕೆ ಬರೋ ಪ್ರವಾಸಿಗರು ಬರಿಗೈಲಿ ಏನ್ ಬರ್ತಾರಾ.. ಪ್ಲಾಸ್ಟಿಕ್ ಬಾಟಲ್​ಗಳನ್ನ ತಂದು […]

ಕುಕ್ಕೆಯಲ್ಲಿ ಪ್ಲಾಸ್ಟಿಕ್​ ಬಾಟಲ್​ಗಳಿಂದ ನಿರ್ಮಾಣವಾಗಿದೆ ಕಾಂಪೌಂಡ್
ಸಾಧು ಶ್ರೀನಾಥ್​
|

Updated on:Dec 12, 2019 | 8:33 AM

Share

ಮಂಗಳೂರು: ಎಲ್ಲಿ ನೋಡಿದ್ರೂ.. ಯಾರ ಕೈಯಲ್ಲಿ ನೋಡಿದ್ರೂ ಪ್ಲಾಸ್ಟಿಕ್​ ಬಾಟಲ್​​ಗಳದ್ದೇ ಹಾವಳಿ.. ಕಂಡ ಕಂಡಲ್ಲಿ ಕಾಣೋದು ಪ್ಲಾಸ್ಟಿಕ್ ಬಾಟಲಿಗಳೇ ಕಣ್ಣಿಗೆ ಬೀಳ್ತವೆ.. ಆದ್ರೆ.. ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ಲಾಸ್ಟಿಕ್​​ ಬಾಟಲ್​​​ನಲ್ಲೇ ಕಾಂಪೌಂಡ್​ ಅರಳಿದೆ.

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಂದ್ರೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸೋ ಸುಕ್ಷೇತ್ರ. ಅದ್ರಲ್ಲೂ ವಿಶೇಷ ದಿನಗಳಲ್ಲಂತೂ ಭಕ್ತರ ದಂಡೇ ಹರಿದು ಬರುತ್ತೆ. ಈ ಪುಣ್ಯಕ್ಷೇತ್ರಕ್ಕೆ ಬರೋ ಪ್ರವಾಸಿಗರು ಬರಿಗೈಲಿ ಏನ್ ಬರ್ತಾರಾ.. ಪ್ಲಾಸ್ಟಿಕ್ ಬಾಟಲ್​ಗಳನ್ನ ತಂದು ಎಲ್ಲೆಂದರಲ್ಲಿ ಬಿಸಾಡಿ ಹೋಗ್ತಿದ್ರು. ಇದೀಗ ದೇಶಾದ್ಯಂತ ಪ್ಲಾಸ್ಟಿಕ್‌ ನಿಷೇಧ ಚರ್ಚೆಯಲ್ಲಿರೋವಾಗ್ಲೇ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್​​ನವರು ಪ್ಲಾಸ್ಟಿಕ್ ಬಾಟಲ್​ಗಳ ಪುನರ್‌ ಬಳಕೆ ಮಾಡಿದ್ದಾರೆ. ದೇಗುಲದ ಬಳಿಯೇ ತ್ಯಾಜ್ಯ ಘಟಕ ಸ್ಥಾಪಿಸಿ ವೇಸ್ಟ್​ ಆಗಿರೋ ಪ್ಲಾಸ್ಟಿಕ್ ಬಾಟಲ್​ಗಳಿಂದಲೇ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ.

ಇನ್ನು, ಸಂಗ್ರಹವಾದ ಒಂದು ಲೀಟರ್‌ನ ಪ್ಲಾಸ್ಟಿಕ್‌ ಬಾಟಲಿಗಳಿಗೆ ಮರಳು, ಸಣ್ಣ ಜಲ್ಲಿ ತುಂಬಲಾಗುತ್ತದೆ. ಸಿಮೆಂಟ್‌ ಮಿಶ್ರಣ ಉಪಯೋಗಿಸಿ ಇಟ್ಟಿಗೆಯಂತೆಯೇ ಜೋಡಿಸಿ ಗೋಡೆ ನಿರ್ಮಿಸಲಾಗುತ್ತಿದೆ. ಇಂಜಾಡಿ ಬಳಿ ಇರುವ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್​ನ ತ್ಯಾಜ್ಯ ಘಟಕದಲ್ಲಿ 4 ಅಡಿ ಎತ್ತರ ಮತ್ತು 20 ಮೀ. ಉದ್ದದ ಗೋಡೆಗೆ 2,500 ಬಾಟಲ್​ಗಳನ್ನು ಬಳಸಲಾಗಿದೆ.

ಪ್ರತೀ 20 ಮೀ. ಬಳಿಕ ಒಂದರಂತೆ ಕಲ್ಲಿನ ಆಧಾರಸ್ತಂಭ ನಿರ್ಮಿಸಿದ್ದಾರೆ. ನುರಿತ ಮೇಸ್ತ್ರಿ ಸಹಾಯದಿಂದ ಘನತ್ಯಾಜ್ಯ ಘಟಕದ ಸಿಬ್ಬಂದಿಯೇ ಕಾಮಗಾರಿ ಮಾಡಿರೋದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿದೇಶದಲ್ಲಿ ಪ್ಲಾಸ್ಟಿಕ್​ ಬಾಟಲ್​ಗಳನ್ನ ಮರುಬಳಕೆ ಮಾಡಿ ಹೊಸ ಕಾರ್ಯ ಮಾಡಿರೋದು ನೋಡ್ತಿದ್ವಿ. ಆದ್ರೆ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಹೊಸ ಪ್ರಯೋಗ ಮಾಡಲಾಗಿದೆ. ಎಸೆಯೋ ಬಾಟಲ್​ಗಳಿಂದ ಹೀಗೂ ಮಾಡ್ಬೋದು ಅನ್ನೋದನ್ನ ಇಲ್ಲಿಯವರು ತೋರಿಸಿ ಕೊಟ್ಟಿದ್ದಾರೆ.

Published On - 8:32 am, Thu, 12 December 19

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ