ಕುಕ್ಕೆಯಲ್ಲಿ ಪ್ಲಾಸ್ಟಿಕ್​ ಬಾಟಲ್​ಗಳಿಂದ ನಿರ್ಮಾಣವಾಗಿದೆ ಕಾಂಪೌಂಡ್

ಮಂಗಳೂರು: ಎಲ್ಲಿ ನೋಡಿದ್ರೂ.. ಯಾರ ಕೈಯಲ್ಲಿ ನೋಡಿದ್ರೂ ಪ್ಲಾಸ್ಟಿಕ್​ ಬಾಟಲ್​​ಗಳದ್ದೇ ಹಾವಳಿ.. ಕಂಡ ಕಂಡಲ್ಲಿ ಕಾಣೋದು ಪ್ಲಾಸ್ಟಿಕ್ ಬಾಟಲಿಗಳೇ ಕಣ್ಣಿಗೆ ಬೀಳ್ತವೆ.. ಆದ್ರೆ.. ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ಲಾಸ್ಟಿಕ್​​ ಬಾಟಲ್​​​ನಲ್ಲೇ ಕಾಂಪೌಂಡ್​ ಅರಳಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಂದ್ರೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸೋ ಸುಕ್ಷೇತ್ರ. ಅದ್ರಲ್ಲೂ ವಿಶೇಷ ದಿನಗಳಲ್ಲಂತೂ ಭಕ್ತರ ದಂಡೇ ಹರಿದು ಬರುತ್ತೆ. ಈ ಪುಣ್ಯಕ್ಷೇತ್ರಕ್ಕೆ ಬರೋ ಪ್ರವಾಸಿಗರು ಬರಿಗೈಲಿ ಏನ್ ಬರ್ತಾರಾ.. ಪ್ಲಾಸ್ಟಿಕ್ ಬಾಟಲ್​ಗಳನ್ನ ತಂದು […]

ಕುಕ್ಕೆಯಲ್ಲಿ ಪ್ಲಾಸ್ಟಿಕ್​ ಬಾಟಲ್​ಗಳಿಂದ ನಿರ್ಮಾಣವಾಗಿದೆ ಕಾಂಪೌಂಡ್
ಸಾಧು ಶ್ರೀನಾಥ್​

Updated on: Dec 12, 2019 | 8:33 AM

ಮಂಗಳೂರು: ಎಲ್ಲಿ ನೋಡಿದ್ರೂ.. ಯಾರ ಕೈಯಲ್ಲಿ ನೋಡಿದ್ರೂ ಪ್ಲಾಸ್ಟಿಕ್​ ಬಾಟಲ್​​ಗಳದ್ದೇ ಹಾವಳಿ.. ಕಂಡ ಕಂಡಲ್ಲಿ ಕಾಣೋದು ಪ್ಲಾಸ್ಟಿಕ್ ಬಾಟಲಿಗಳೇ ಕಣ್ಣಿಗೆ ಬೀಳ್ತವೆ.. ಆದ್ರೆ.. ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ಲಾಸ್ಟಿಕ್​​ ಬಾಟಲ್​​​ನಲ್ಲೇ ಕಾಂಪೌಂಡ್​ ಅರಳಿದೆ.

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಂದ್ರೆ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸೋ ಸುಕ್ಷೇತ್ರ. ಅದ್ರಲ್ಲೂ ವಿಶೇಷ ದಿನಗಳಲ್ಲಂತೂ ಭಕ್ತರ ದಂಡೇ ಹರಿದು ಬರುತ್ತೆ. ಈ ಪುಣ್ಯಕ್ಷೇತ್ರಕ್ಕೆ ಬರೋ ಪ್ರವಾಸಿಗರು ಬರಿಗೈಲಿ ಏನ್ ಬರ್ತಾರಾ.. ಪ್ಲಾಸ್ಟಿಕ್ ಬಾಟಲ್​ಗಳನ್ನ ತಂದು ಎಲ್ಲೆಂದರಲ್ಲಿ ಬಿಸಾಡಿ ಹೋಗ್ತಿದ್ರು. ಇದೀಗ ದೇಶಾದ್ಯಂತ ಪ್ಲಾಸ್ಟಿಕ್‌ ನಿಷೇಧ ಚರ್ಚೆಯಲ್ಲಿರೋವಾಗ್ಲೇ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್​​ನವರು ಪ್ಲಾಸ್ಟಿಕ್ ಬಾಟಲ್​ಗಳ ಪುನರ್‌ ಬಳಕೆ ಮಾಡಿದ್ದಾರೆ. ದೇಗುಲದ ಬಳಿಯೇ ತ್ಯಾಜ್ಯ ಘಟಕ ಸ್ಥಾಪಿಸಿ ವೇಸ್ಟ್​ ಆಗಿರೋ ಪ್ಲಾಸ್ಟಿಕ್ ಬಾಟಲ್​ಗಳಿಂದಲೇ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ.

ಇನ್ನು, ಸಂಗ್ರಹವಾದ ಒಂದು ಲೀಟರ್‌ನ ಪ್ಲಾಸ್ಟಿಕ್‌ ಬಾಟಲಿಗಳಿಗೆ ಮರಳು, ಸಣ್ಣ ಜಲ್ಲಿ ತುಂಬಲಾಗುತ್ತದೆ. ಸಿಮೆಂಟ್‌ ಮಿಶ್ರಣ ಉಪಯೋಗಿಸಿ ಇಟ್ಟಿಗೆಯಂತೆಯೇ ಜೋಡಿಸಿ ಗೋಡೆ ನಿರ್ಮಿಸಲಾಗುತ್ತಿದೆ. ಇಂಜಾಡಿ ಬಳಿ ಇರುವ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್​ನ ತ್ಯಾಜ್ಯ ಘಟಕದಲ್ಲಿ 4 ಅಡಿ ಎತ್ತರ ಮತ್ತು 20 ಮೀ. ಉದ್ದದ ಗೋಡೆಗೆ 2,500 ಬಾಟಲ್​ಗಳನ್ನು ಬಳಸಲಾಗಿದೆ.

ಪ್ರತೀ 20 ಮೀ. ಬಳಿಕ ಒಂದರಂತೆ ಕಲ್ಲಿನ ಆಧಾರಸ್ತಂಭ ನಿರ್ಮಿಸಿದ್ದಾರೆ. ನುರಿತ ಮೇಸ್ತ್ರಿ ಸಹಾಯದಿಂದ ಘನತ್ಯಾಜ್ಯ ಘಟಕದ ಸಿಬ್ಬಂದಿಯೇ ಕಾಮಗಾರಿ ಮಾಡಿರೋದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿದೇಶದಲ್ಲಿ ಪ್ಲಾಸ್ಟಿಕ್​ ಬಾಟಲ್​ಗಳನ್ನ ಮರುಬಳಕೆ ಮಾಡಿ ಹೊಸ ಕಾರ್ಯ ಮಾಡಿರೋದು ನೋಡ್ತಿದ್ವಿ. ಆದ್ರೆ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಹೊಸ ಪ್ರಯೋಗ ಮಾಡಲಾಗಿದೆ. ಎಸೆಯೋ ಬಾಟಲ್​ಗಳಿಂದ ಹೀಗೂ ಮಾಡ್ಬೋದು ಅನ್ನೋದನ್ನ ಇಲ್ಲಿಯವರು ತೋರಿಸಿ ಕೊಟ್ಟಿದ್ದಾರೆ.

Published On - 8:32 am, Thu, 12 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us