ವಕ್ಫ್ ಆಸ್ತಿ ನೋಂದಣಿ ವಿವಾದ: ಬಿಜೆಪಿ ಪರಿಶೀಲನಾ ತಂಡ ಪುನಾರಚನೆ, ಯತ್ನಾಳ್​ಗೆ ಸ್ಥಾನ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಕ್ಫ್‌ ಬೋರ್ಡ್‌ನ ದುರಾಸೆ ವಿಜಯಪುರ ರೈತರ ಜಮೀನಿನವರೆಗೂ ತಲುಪಿದೆ ಎನ್ನುವ ಆರೋಪ ಕೇಳಿ ಬಂದಿದೆ. ವಕ್ಫ್ ಬೋರ್ಡ್ ಕಡೆಯಿಂದ ರೈತರಿಗೆ ನೊಟೀಸ್ ಜಾರಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ದೊಡ್ಡ ಚರ್ಚೆಯಾಗುತ್ತಿದ್ದು, ಪರಿಶೀಲನೆ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸಮಿತಿ ರಚಿಸಿದ್ದಾರೆ. ಆದ್ರೆ, ಮುಖ್ಯವಾಗಿ ಕ್ಷೇತ್ರದ ಶಾಸಕ ಯತ್ನಾಳ್​ ಹೆಸರು ಕೈಬಿಟ್ಟಿದ್ದಾರೆ. ಇದರಿಂದ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ವಿಜಯೇಂದ್ರ ತಂಡ ಪುನಾರಚನೆ ಮಾಡಿದ್ದಾರೆ.

ವಕ್ಫ್ ಆಸ್ತಿ ನೋಂದಣಿ ವಿವಾದ: ಬಿಜೆಪಿ ಪರಿಶೀಲನಾ ತಂಡ ಪುನಾರಚನೆ, ಯತ್ನಾಳ್​ಗೆ ಸ್ಥಾನ
ಯತ್ನಾಳ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 28, 2024 | 9:18 PM

ಬೆಂಗಳೂರು, (ಅಕ್ಟೋಬರ್ 28): ವಕ್ಫ್ ಕಾಯಿದೆಯಿಂದ ವಿಜಯಪುರ ಜಿಲ್ಲೆಯ ರೈತರಿಗೆ ತೊಂದರೆ ಉಂಟಾಗಿರುವ ಬಗ್ಗೆಆರೋಪ ಕೇಳಿಬಂದಿದೆ. ವಕ್ಫ್ ಬೋರ್ಡ್ ಕಡೆಯಿಂದ ರೈತರಿಗೆ ನೊಟೀಸ್ ಜಾರಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ದೊಡ್ಡ ಚರ್ಚೆಯಾಗುತ್ತಿದ್ದು, ಇದರ ಪರಿಶೀಲನೆಗೆಂದು ರಾಜ್ಯ ಬಿಜೆಪಿ ತಂಡವನ್ನು ರಚನೆ ಮಾಡಿದೆ. ಆದ್ರೆ, ವಿಜಯಪುರದಲ್ಲಿ ವಕ್ಫ್​ ವಿರುದ್ಧ ಧ್ವನಿ ಎತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್​ ಅವರನ್ನೇ ತಂಡದಿಂದ ದೂರ ಇಡಲಾಗಿತ್ತು. ಬಳಿಕ ಯತ್ನಾಳ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ​ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇಂದು(ಅಕ್ಟೋಬರ್ 28) ತಂಡವನ್ನು ಪುನಾರಚನೆ ಮಾಡಿದ್ದು, ಈ ತಂಡದಲ್ಲಿ ಯತ್ನಾಳ್​ ಅವರನ್ನು ಸೇರಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರು ಬಿಜೆಪಿ ಪರಿಶೀಲನಾ ತಂಡವನ್ನು ರಚನೆ ಮಾಡಿದ್ದರು. ಆದ್ರೆ, ಯತ್ನಾಳ್​ ತಂಡದಲ್ಲಿರಲಿಲ್ಲ. ಬಳಿಕ ಯತ್ನಾಳ್​, ಬಿಜೆಪಿ ತಂಡ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದಕ್ಕೆ ಮಣಿದ ವಿಜಯೇಂದ್ರ , ವಿಜಯಪುರ ಪ್ರವಾಸಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ಪರಿಶೀಲನಾ ತಂಡವನ್ನು ಪುನಾರಚನೆ ಮಾಡಿದ್ದಾರೆ. ನಾಳೆ ವಿಜಯಪುರ ಜಿಲ್ಲೆಗೆ ತೆರಳುವ ಕಾರಜೋಳ ನೇತೃತ್ವದ ತಂಡಕ್ಕೆ ಇಂದು ಹೊಸದಾಗಿ ರಮೇಶ್​ ಜಿಗಜಿಣಗಿ, ಶಾಸಕ ಯತ್ನಾಳ್ ಹಾಗೂ ಮಾಜಿ ಜಿಲ್ಲಾಧ್ಯಕ್ಷ ಎಂ.ಬಿ.ಜಿರಲಿ ಅವರನ್ನು ಸೇರ್ಪಡೆ ಮಾಡಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ

ನಿನ್ನೆ ಸಂಸದ ಕಾರಜೋಳ ನೇತೃತ್ವದಲ್ಲಿ ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮಾಜಿ ಎಂಎಲ್​ಸಿ ಅರುಣ್ ಶಹಾಪುರ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.

ಮಂಗಳವಾರ ವಿಜಯಪುರಕ್ಕೆ ತಂಡ ಭೇಟಿ

ವಿಜಯಪುರ ಜಿಲ್ಲೆಯ ರೈತರ ಅಹವಾಲು ಆಲಿಸಿ ಸಮಸ್ಯೆಯ ಕುರಿತ ಸಮಗ್ರ ವರದಿ ನೀಡುವಂತೆ ವಿಜಯೇಂದ್ರ ಸೂಚಿಸಿದ್ದಾರೆ. ಅದರಂತೆ ಈ ಮುಖಂಡರ ತಂಡ ಮಂಗಳವಾರ(ಅ.29) ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದೆ. ಆದ್ರೆ, ಒಂದು ದಿನ ಬಾಕಿ ಇರುವಾಗಲಷ್ಟೇ ತಮ್ಮ ಹೆಸರು ಸೇರಿಸಿದ್ದಕ್ಕೆ ಯತ್ನಾಳ್​, ತಂಡದ ಜೊತೆ ಹೆಜ್ಜೆ ಹಾಕುತ್ತಾರಾ ? ಅಥವಾ ಬಂಡಾಯದ ಬಾವುಟ ಹಾರಿಸುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:15 pm, Mon, 28 October 24

ಕಷ್ಟಪಟ್ಟು ನಡೆದು ಬಂದ ದರ್ಶನ್; ಈ ಬೆನ್ನು ನೋವು ಯಾರಿಗೂ ಬೇಡ
ಕಷ್ಟಪಟ್ಟು ನಡೆದು ಬಂದ ದರ್ಶನ್; ಈ ಬೆನ್ನು ನೋವು ಯಾರಿಗೂ ಬೇಡ
ಧೈರ್ಯಂ ಸರ್ವತ್ರ ಸಾಧನಂ; ಎರಡು ಹುಲಿಗಳನ್ನು ಹೆದರಿಸಿ ಓಡಿಸಿದ ಕರಡಿ
ಧೈರ್ಯಂ ಸರ್ವತ್ರ ಸಾಧನಂ; ಎರಡು ಹುಲಿಗಳನ್ನು ಹೆದರಿಸಿ ಓಡಿಸಿದ ಕರಡಿ
ಬಿಗ್ ಬಾಸ್ ಮನೆಯಲ್ಲಿ ಧನರಾಜ್​ಗೆ ಹಾಡಿನ ಮೂಲಕ ಬುದ್ಧಿ ಹೇಳಿದ ಹನುಮಂತ
ಬಿಗ್ ಬಾಸ್ ಮನೆಯಲ್ಲಿ ಧನರಾಜ್​ಗೆ ಹಾಡಿನ ಮೂಲಕ ಬುದ್ಧಿ ಹೇಳಿದ ಹನುಮಂತ
ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ
ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ