AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ಆಸ್ತಿ ವಿವಾದ: ರೈತರಿಗೆ ನೀಡಿದ ನೋಟಿಸ್​ ಸಮರ್ಥಿಸಿಕೊಂಡ ಸಚಿವ ಜಮೀರ್

ರೈತರ ಭೂಮಿಯನ್ನ ವಕ್ಫ್​ ಬೋರ್ಡ್​ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ. ಬಿಜೆಪಿ ಇದನ್ನೇ ಅಸ್ತ್ರ ಮಾಡಿಕೊಂಡು ಸರ್ಕಾರದ ವಿರುದ್ಧ ಹರಿಹಾಯ್ತಿದ್ರೆ. ಅತ್ತ ಕಾಂಗ್ರೆಸ್ ಕೂಡಾ ಬಿಜೆಪಿ ಅವಧಿಯಲ್ಲಿ ರೈತರಿಗೆ ನೀಡಿದ್ದ ನೋಟಿಸ್ ದಾಖಲೆಯನ್ನ ಬಿಟ್ಟು ತಿರುಗೇಟು ಕೊಟ್ಟಿದೆ. ಈ ಮಧ್ಯೆ ಖುದ್ದು ಸಿಎಂ ಸಿದ್ದರಾಮಯ್ಯ ರೈತರಿಗೆ ಅಭಯ ನೀಡಿದ್ದಾರೆ. ಇನ್ನು ವಿಜಯಪುರದಲ್ಲಿ ರೈತರಿಗೆ ನೋಟಿಸ್ ನೀಡಿರುವುದನ್ನ ಸಚಿವ ಜಮೀರ್ ಅಹಮ್ಮದ್ ಖಾನ್ ಸಮರ್ಥಿಸಿಕೊಂಡಿದ್ದಾರೆ. ಅಲ್ಲದೇ ಮೊದಲು ತಾವೊಬ್ಬ ಹಿಂದೂಸ್ಥಾನಿ ಎಂದು ಗುಡುಗಿದ್ದಾರೆ.

ವಕ್ಫ್​ ಆಸ್ತಿ ವಿವಾದ: ರೈತರಿಗೆ ನೀಡಿದ ನೋಟಿಸ್​ ಸಮರ್ಥಿಸಿಕೊಂಡ ಸಚಿವ ಜಮೀರ್
ಜಮೀರ್ ಅಹಮ್ಮದ್ ಖಾನ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 29, 2024 | 10:51 PM

Share

ಹಾವೇರಿ, (ಅಕ್ಟೋಬರ್ 29): ರೈತರ ಭೂಮಿಯನ್ನ ವಕ್ಫ್​ ಬೋರ್ಡ್​ ಕಬಳಿಸುತ್ತಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದೇ ವಿಚಾರವಾಗಿ ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ನೋಟಿಸ್ ನೀಡಲಾಗಿದೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ರೈತರು ಸಿಡಿದೆದ್ದಿದ್ದಾರೆ. ಇದರಿಂದ ಎಚ್ಚೆತ್ತುಕೊಂಡು ಸಿಎಂ ಸಿದ್ದರಾಮಯ್ಯ, ರೈತರಿಗೆ ಏನು ಆಗುವುದಿಲ್ಲ. ಈಗಾಗಲೇ ನೀಡಿರುವ ನೋಟಿಸ್ ವಾಪಸ್ ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಆದ್ರೆ, ಇತ್ತ​ ನಮ್ಮ ಆಸ್ತಿಗೆ ನಾವು ನೋಟಿಸ್ ಕೊಟ್ಟಿದ್ದೇವೆ ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮ್ಮದ್ ಖಾನ್ ಮಾತ್ರ ನೋಟಿಸ್​ ನೀಡಿರುವುದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮ್ಮದ್ ಖಾನ್, ಬಿಜೆಪಿಯವರು ಈ ತರಹ ರಾಜಕಾರಣ ಮಾಡಬಾರದು. ವಿಜಯಪುರ ಜಿಲ್ಲೆಯಲ್ಲಿ 1200 ಎಕರೆ ಇಲ್ಲವೇ ಇಲ್ಲ. ಕೇವಲ ಇರೋದು ಕೇವಲ 12 ಎಕರೆ. ಅಲ್ಲಿ 11 ಎಕರೆ ಸ್ಮಶಾನ ಇದೆ. ನಾವು ಒಂದಿಂಚೂ ಜಾಗ ತಗೆದುಕೊಂಡಿಲ್ಲ. ನಮ್ಮ ಆಸ್ತಿಗೆ ನಾವು ನೋಟಿಸ್ ಕೊಟ್ಟಿದ್ದೇವೆ. ಬೇರೆಯವರು ಆಸ್ತಿ ತೆಗೆದುಕೊಳ್ಳುವುದಕ್ಕೆ ನಾವು ಯಾರು? ರೈತರ ಆಸ್ತಿ ಮುಟ್ಟೋಕೆ ಸಾಧ್ಯ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: ವಕ್ಫ್​ ವಿವಾದ: ಸಚಿವ ಜಮೀರ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ಡಿಸಿ

ನಮಗೆ ಒಂದು ಲಕ್ಷ 12 ಸಾವಿರ ಎಕರೆ ದಾನ ಮಾಡಿದ್ದಾರೆ. ನಾನು 11 ಜಿಲ್ಲೆಯಲ್ಲಿ ವಕ್ಫ್​ ಅದಾಲತ್ ಮಾಡಿದ್ದೇನೆ. ಅಧಿಕಾರಿಗಳ ಸಭೆ ಮಾಡಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಸಭೆ ಮಾಡಿದಾಗ ಯತ್ನಾಳ್​ಗೆ ಅಹ್ವಾನ‌ ಕೊಟ್ಟಿದ್ವಿ. ರೈತರಿಗೆ ಅನ್ಯಾಯ ಆದ್ರೆ ಯತ್ನಾಳ್ ಯಾಕೆ ಸಭೆಗೆ ಬರಲಿಲ್ಲ? ರೈತರ ಆಸ್ತಿ ತಗೋಳೊಕೆ ಸಾಧ್ಯನಾ..? ಅಧಿಕಾರಿ ಅಷ್ಟು ಸುಲಭವಾಗಿ ಮಾಡ್ತಾರಾ.? ರೈತರ ಆಸ್ತಿಯನ್ನು ಮುಟ್ಟೋಕೆ ಆಗಲ್ಲ, ಇದೊಂದು ರಾಜಕೀಯ ಪಿತೂರಿ ಎಂದರು.

ಬೇರೆಯವರು ಆಸ್ತಿ ತಗೋಳೋಕೆ ನಾವು ಯಾರು? ರೈತರ ಆಸ್ತಿ ಮುಟ್ಟೋಕೆ ಸಾಧ್ಯ ಇಲ್ಲ. ರೈತರು ಅನ್ನದಾತರು. ನಾವು ಅವರ ಆಸ್ತಿ ಮುಟ್ಟಿಸೋಕೆ ಸಾಧ್ಯನಾ.? ವಕ್ಫ್​ ಆಸ್ತಿ ಒಂದು ಲಕ್ಷ 12 ಸಾವಿರ ಎಕರೆ ಇದೆ. ನಮ್ಮ ಬಳಿ ದಾಖಲೆ ಇದೆ. ನಮ್ಮ ಆಸ್ತಿಗೆ ನಾವು ನೋಟಿಸ್ ಕೊಟ್ಟಿದ್ದೇವೆ. ಮುಜರಾಯಿ, ವಕ್ಫ್​ ಎರಡು ಒಂದೇ. ನಾವು ಅಲ್ಲ ಅಂತೀವಿ,ನೀವು ದೇವರ ಅಂತೀರಿ. ಅಲ್ಲ ನಮ್ಮ ನಂಬಿಕೆ. ಜೋಶಿ ಏನಾದರೂ ಹೇಳಲಿ. ನಾನು ಮೊದಲು ಹಿಂದೂಸ್ತಾನಿ. ಆಮೇಲೆ ಮುಸ್ಲಿಂ ಎಂದು ಟಾಂಗ್ ಕೊಟ್ಟರು.

ಇದು ಬಿಜೆಪಿಯ ಹುನ್ನಾರ

ರಾಜಕೀಯಕ್ಕೆ ಬಂದು ಜಾತಿ ಮಾಡಿದ್ರೆ, ಅವರು ನಾಲಾಯಕ್. ನಾವು ಜಾತಿ ನೋಡಿದ್ರೆ ನಿರ್ನಾಮ ಆಗುತ್ತೇವೆ. ಯಾವಾಗ ಯಾವಾಗ ಚುನಾವಣೆ ಆಗತ್ತೆ ಅವಾಗ ನಾವು ಸಾಧನೆ ಹೇಳತೀವಿ. ಬಿಜೆಪಿಯವರದು ಬರೀ ಹಿಂದೂ ಮುಸ್ಲಿಂ. ಸಾಧನೆ ಸೊನ್ನೆ. ರಾಜಕೀಯ ಬೇಳೆ ಬೇಯಸೋಕೆ ಇವರು ಮಾತಾಡುತ್ತಿದ್ದಾರೆ. ನಾವು ಯಾವ ರೈತರಿಗೂ ಕಾನೂನು ಬಾಹಿರವಾಗಿ ನೋಟಿಸ್ ಕೊಟ್ಟಿದ್ರೆ‌ ನಿಲ್ಲುಸುತ್ತೇನೆ. ಅಲ್ಲದೇ ನೋಟಿಸ್ ಕೊಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇನೆ. ಬಿಜೆಪಿಯವರ ಬೆಕ್ಕಿನ ತರ. ಹಾಲು ಕುಡಿಯೋಕೆ ಬೆಕ್ಕು ಕಾಯುತಿರತ್ತೆ..ಅದೇ ರೀತಿ ಬಿಜೆಪಿಯವರು ಕಾಯುತ್ತಿದ್ದಾರೆ. ಇದು ಬಿಜೆಪಿಯ ಹುನ್ನಾರ. ಬಿಜೆಪಿಯವರ ಕಾಲದಲ್ಲಿ ನೋಟಿಸ್ ಕೊಟ್ಟಿದ್ದಾರೆ. ನಾನು ದಾಖಲೆ ಕೊಡುತ್ತೇನೆ ಎಂದು ಗುಡುಗಿದರು.

ಮುಜರಾಯಿ ಇಲಾಖೆ ಅಸ್ತಿ ಕೂಡಾ ಒತ್ತುವರಿ ಆಗಿದೆ. ಅದನ್ನು ಉಳಸೋಣ ನಡೆಯಿರಿ. ಇದಕ್ಕೆ ಮಾನ್ಯ ಯತ್ನಾಳ್ ಏನು ಹೇಳುತ್ತಾರೆ. ನನಗೆ ಹಿಂದೂ ಬ್ರದರ್ಸ್ ವೋಟ್ ಕೊಟ್ಟಿದ್ದಾರೆ. ನನಗೆ ಎಲ್ಲ ಸಮಾಜ ಒಂದೇ. ಎಲ್ಲ ಸಮಾಜ ಜೊತೆ ತಗೆದುಕೊಂಡು ಹೋಗೋರೆ ರಾಜಕಾರಣಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:45 pm, Tue, 29 October 24

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ