AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಜಮೀನಿನ ಮೇಲೆ ವಕ್ಫ್​​ ಬೋರ್ಡ್ ಕಣ್ಣು: ರಾಯಚೂರು, ಕೋಲಾರ ಜಿಲ್ಲೆಗೂ ವ್ಯಾಪಿಸಿದ ವಿವಾದ

ರಾಯಚೂರು, ಕೋಲಾರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವಕ್ಫ್​​ ಬೋರ್ಡ್ ಭೂಮಿ ವಿವಾದ ತೀವ್ರಗೊಂಡಿದೆ. ಸಾವಿರಾರು ಎಕರೆ ಭೂಮಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಹಣ ನೀಡಿ ಖರೀದಿಸಿದ ಜಮೀನುಗಳು ವಕ್ಫ್ ಆಸ್ತಿ ಎಂದು ಘೋಷಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ರೈತರ ಜಮೀನಿನ ಮೇಲೆ ವಕ್ಫ್​​ ಬೋರ್ಡ್ ಕಣ್ಣು: ರಾಯಚೂರು, ಕೋಲಾರ ಜಿಲ್ಲೆಗೂ ವ್ಯಾಪಿಸಿದ ವಿವಾದ
ರೈತರ ಜಮೀನಿನ ಮೇಲೆ ವಕ್ಫ್​​ ಬೋರ್ಡ್ ಕಣ್ಣು: ರಾಯಚೂರು, ಕೋಲಾರ ಜಿಲ್ಲೆಗೂ ವ್ಯಾಪಿಸಿದ ವಿವಾದ
ಭೀಮೇಶ್​​ ಪೂಜಾರ್
| Edited By: |

Updated on: Nov 02, 2024 | 6:15 PM

Share

ರಾಯಚೂರು, ನವೆಂಬರ್​ 02: ಭೂಮಿ ಕಳೆದುಕೊಳ್ಳೋ ಆತಂಕದಲ್ಲಿದ್ದ ರೈತರು ಪ್ರತಿಭಟನೆ ನಡೆಸಿದ್ದರು. ಸರ್ಕಾರದ ವಿರುದ್ಧ ಸಿಕ್ಕಿದ್ದ ಹೊಸ ಅಸ್ತ್ರ ಹಿಡಿದು ಬಿಜೆಪಿ ಹೋರಾಟಕ್ಕೆ ಇಳಿದಿತ್ತು. ಜಿಲ್ಲೆ ಜಿಲ್ಲೆಗೂ ಹರಡಿದ್ದ ವಕ್ಫ್‌ ವಿವಾದ (Waqf Board) ಇದೀಗ ರಾಯಚೂರು ಜಿಲ್ಲೆಗೂ ಕಾಲಿಟ್ಟಿದೆ. ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖಿಸಿದ್ದನ್ನು ನೋಡಿ ರೈತರು ಶಾಕ್‌ ಆಗಿದ್ದಾರೆ.

ಜಿಲ್ಲೆಯ ಸಿಂಧನೂರು ತಾಲೂಕು ವ್ಯಾಪ್ತಿಯ 40ಕ್ಕೂ ಹೆಚ್ಚು ಗ್ರಾಮಗಳ ರೈತರ ಸುಮಾರು ಎರಡು ಸಾವಿರ ಎಕರೆ ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿಯೆಂದು ನಮೂದಿಸಿ ಈಗಾಗಲೇ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ವಕ್ಫ್ ಜಮೀನನ್ನು ವಾಪಸ್ಸು ಪಡೆಯುವ ಬಗ್ಗೆ ಬೊಮ್ಮಾಯಿ ಮಾತಾಡಿದ ವಿಡಿಯೋ ತೋರಿಸಿದ ಜಮೀರ್

ಮಾಧ್ಯಮಗಳಲ್ಲಿ ವರದಿ ನೋಡಿ ಹಲವು ರೈತರು ಪಹಣಿ ಪರಿಶೀಲಿಸಿದ್ದು, ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖಿಸಿದ್ದನ್ನು ನೋಡಿ ಶಾಕ್‌ ಆಗಿದ್ದಾರೆ. ಹಣ ನೀಡಿ ಖರೀದಿಸಿದ್ದ ಜಮೀನಿನ ಪಹಣಿಯಲ್ಲೂ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ. ಕೂಡಲೇ ವಕ್ಫ್‌ ಆಸ್ತಿ ಅನ್ನೋದನ್ನು ತೆಗೆದು ಹಾಕುವಂತೆ ರೈತರು ಆಗ್ರಹಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲೂ ವಕ್ಫ್‌ ಆಸ್ತಿಯೆಂದು ಪಹಣಿಯಲ್ಲಿ ನಮೂದು

ಅದೇ ರೀತಿಯಾಗಿ ಕೋಲಾರ ಜಿಲ್ಲೆಯಲ್ಲೂ ವಕ್ಫ್‌ ಆಸ್ತಿಯೆಂದು ಪಹಣಿಯಲ್ಲಿ ನಮೂದಿಸಿರುವುದು ಬೆಳಕಿಗೆ ಬಂದಿದೆ. ಕೋಲಾರ ತಾಲೂಕಿನ ದೊಡ್ಡಹಸಾಳ ಗ್ರಾಮದ ಅಮೀರ್ ಸಾಬ್ ಎಂಬುವರಿಗೆ ಮಂಜೂರಾಗಿದ್ದ ಫರೀರ್ ಇನಾಂತಿ 5 ಎಕರೆ 34 ಗುಂಟೆ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ.

ದೊಡ್ಡಹಸಾಳ ಗ್ರಾಮದ ಸರ್ವೆ ನಂಬರ್​ 57ರಲ್ಲಿರುವ ಜಮೀನು. ಸದ್ಯ ಅಮೀರ್ ಸಾಬ್ ಕುಟುಂಬಸ್ಥರು ಆಸ್ತಿ ಪಾಲು ಮಾಡಿಕೊಳ್ಳಲಾಗದೆ ಪರದಾಡುವಂತಾಗಿದೆ. ಕೋರ್ಟ್​ಗೆ ಹಲವು ದಿನಗಳಿಂದ ಅಲೆದಾಡುತ್ತಿದ್ದಾರೆ. ಪಹಣಿಯಲ್ಲಿ ಹಾಗೂ ಮ್ಯುಟೇಷನ್​ನಲ್ಲಿ ನಮೂದಾಗಿರುವ ವಕ್ಫ್​ ಬೋರ್ಡ್​ ಆಸ್ತಿ ತೆಗೆದುಕೊಡುಂತೆ ಅಧಿಕಾರಿಗಳ ಬಳಿ ಕುಟುಂಬ ಅಲೆಯುತ್ತಿದೆ.

ಇದನ್ನೂ ಓದಿ: ವಕ್ಫ್ ವಿವಾದ: ಸಿಎಂ ಕೇವಲ ನೋಟಿಸ್ ವಾಪಸ್ ಪಡೆದರೆ ಸಮಸ್ಯೆ ಬಗೆಹರಿಯಲ್ಲ ಎಂದ ತೇಜಸ್ವಿ ಸೂರ್ಯ

ಇನ್ನು​ ಬಳ್ಳಾರಿ ಜಿಲ್ಲೆಯಲ್ಲೂ ರೈತರಿಗೆ ವಕ್ಫ್​ ಬೋರ್ಡ್​ ನೋಟಿಸ್ ಜಾರಿ ಮಾಡಲಾಗಿದೆ. ಬಳ್ಳಾರಿ ತಾಲೂಕಿನ ಬೊಮ್ಮನಹಾಳದ ಒಂದೇ ಗ್ರಾಮದ 10ಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡಲಾಗಿದೆ. ವಕ್ಫ್ ನೀಡಿದ​ ನೋಟಿಸ್​ಗೆ​​​​ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಪಿತ್ರಾರ್ಜಿತ 8 ಎಕರೆ ಜಮೀನಿಗೆ ವಕ್ಫ್ ಆಸ್ತಿ‌ ಅಂತಾ ನೋಟಿಸ್ ನೀಡಿದ್ದು, ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು