AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಜಮೀನಿನ ಮೇಲೆ ವಕ್ಫ್​​ ಬೋರ್ಡ್ ಕಣ್ಣು: ರಾಯಚೂರು, ಕೋಲಾರ ಜಿಲ್ಲೆಗೂ ವ್ಯಾಪಿಸಿದ ವಿವಾದ

ರಾಯಚೂರು, ಕೋಲಾರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವಕ್ಫ್​​ ಬೋರ್ಡ್ ಭೂಮಿ ವಿವಾದ ತೀವ್ರಗೊಂಡಿದೆ. ಸಾವಿರಾರು ಎಕರೆ ಭೂಮಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಹಣ ನೀಡಿ ಖರೀದಿಸಿದ ಜಮೀನುಗಳು ವಕ್ಫ್ ಆಸ್ತಿ ಎಂದು ಘೋಷಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ರೈತರ ಜಮೀನಿನ ಮೇಲೆ ವಕ್ಫ್​​ ಬೋರ್ಡ್ ಕಣ್ಣು: ರಾಯಚೂರು, ಕೋಲಾರ ಜಿಲ್ಲೆಗೂ ವ್ಯಾಪಿಸಿದ ವಿವಾದ
ರೈತರ ಜಮೀನಿನ ಮೇಲೆ ವಕ್ಫ್​​ ಬೋರ್ಡ್ ಕಣ್ಣು: ರಾಯಚೂರು, ಕೋಲಾರ ಜಿಲ್ಲೆಗೂ ವ್ಯಾಪಿಸಿದ ವಿವಾದ
ಭೀಮೇಶ್​​ ಪೂಜಾರ್
| Edited By: |

Updated on: Nov 02, 2024 | 6:15 PM

Share

ರಾಯಚೂರು, ನವೆಂಬರ್​ 02: ಭೂಮಿ ಕಳೆದುಕೊಳ್ಳೋ ಆತಂಕದಲ್ಲಿದ್ದ ರೈತರು ಪ್ರತಿಭಟನೆ ನಡೆಸಿದ್ದರು. ಸರ್ಕಾರದ ವಿರುದ್ಧ ಸಿಕ್ಕಿದ್ದ ಹೊಸ ಅಸ್ತ್ರ ಹಿಡಿದು ಬಿಜೆಪಿ ಹೋರಾಟಕ್ಕೆ ಇಳಿದಿತ್ತು. ಜಿಲ್ಲೆ ಜಿಲ್ಲೆಗೂ ಹರಡಿದ್ದ ವಕ್ಫ್‌ ವಿವಾದ (Waqf Board) ಇದೀಗ ರಾಯಚೂರು ಜಿಲ್ಲೆಗೂ ಕಾಲಿಟ್ಟಿದೆ. ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖಿಸಿದ್ದನ್ನು ನೋಡಿ ರೈತರು ಶಾಕ್‌ ಆಗಿದ್ದಾರೆ.

ಜಿಲ್ಲೆಯ ಸಿಂಧನೂರು ತಾಲೂಕು ವ್ಯಾಪ್ತಿಯ 40ಕ್ಕೂ ಹೆಚ್ಚು ಗ್ರಾಮಗಳ ರೈತರ ಸುಮಾರು ಎರಡು ಸಾವಿರ ಎಕರೆ ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿಯೆಂದು ನಮೂದಿಸಿ ಈಗಾಗಲೇ ಹಲವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ವಕ್ಫ್ ಜಮೀನನ್ನು ವಾಪಸ್ಸು ಪಡೆಯುವ ಬಗ್ಗೆ ಬೊಮ್ಮಾಯಿ ಮಾತಾಡಿದ ವಿಡಿಯೋ ತೋರಿಸಿದ ಜಮೀರ್

ಮಾಧ್ಯಮಗಳಲ್ಲಿ ವರದಿ ನೋಡಿ ಹಲವು ರೈತರು ಪಹಣಿ ಪರಿಶೀಲಿಸಿದ್ದು, ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖಿಸಿದ್ದನ್ನು ನೋಡಿ ಶಾಕ್‌ ಆಗಿದ್ದಾರೆ. ಹಣ ನೀಡಿ ಖರೀದಿಸಿದ್ದ ಜಮೀನಿನ ಪಹಣಿಯಲ್ಲೂ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ. ಕೂಡಲೇ ವಕ್ಫ್‌ ಆಸ್ತಿ ಅನ್ನೋದನ್ನು ತೆಗೆದು ಹಾಕುವಂತೆ ರೈತರು ಆಗ್ರಹಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲೂ ವಕ್ಫ್‌ ಆಸ್ತಿಯೆಂದು ಪಹಣಿಯಲ್ಲಿ ನಮೂದು

ಅದೇ ರೀತಿಯಾಗಿ ಕೋಲಾರ ಜಿಲ್ಲೆಯಲ್ಲೂ ವಕ್ಫ್‌ ಆಸ್ತಿಯೆಂದು ಪಹಣಿಯಲ್ಲಿ ನಮೂದಿಸಿರುವುದು ಬೆಳಕಿಗೆ ಬಂದಿದೆ. ಕೋಲಾರ ತಾಲೂಕಿನ ದೊಡ್ಡಹಸಾಳ ಗ್ರಾಮದ ಅಮೀರ್ ಸಾಬ್ ಎಂಬುವರಿಗೆ ಮಂಜೂರಾಗಿದ್ದ ಫರೀರ್ ಇನಾಂತಿ 5 ಎಕರೆ 34 ಗುಂಟೆ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ.

ದೊಡ್ಡಹಸಾಳ ಗ್ರಾಮದ ಸರ್ವೆ ನಂಬರ್​ 57ರಲ್ಲಿರುವ ಜಮೀನು. ಸದ್ಯ ಅಮೀರ್ ಸಾಬ್ ಕುಟುಂಬಸ್ಥರು ಆಸ್ತಿ ಪಾಲು ಮಾಡಿಕೊಳ್ಳಲಾಗದೆ ಪರದಾಡುವಂತಾಗಿದೆ. ಕೋರ್ಟ್​ಗೆ ಹಲವು ದಿನಗಳಿಂದ ಅಲೆದಾಡುತ್ತಿದ್ದಾರೆ. ಪಹಣಿಯಲ್ಲಿ ಹಾಗೂ ಮ್ಯುಟೇಷನ್​ನಲ್ಲಿ ನಮೂದಾಗಿರುವ ವಕ್ಫ್​ ಬೋರ್ಡ್​ ಆಸ್ತಿ ತೆಗೆದುಕೊಡುಂತೆ ಅಧಿಕಾರಿಗಳ ಬಳಿ ಕುಟುಂಬ ಅಲೆಯುತ್ತಿದೆ.

ಇದನ್ನೂ ಓದಿ: ವಕ್ಫ್ ವಿವಾದ: ಸಿಎಂ ಕೇವಲ ನೋಟಿಸ್ ವಾಪಸ್ ಪಡೆದರೆ ಸಮಸ್ಯೆ ಬಗೆಹರಿಯಲ್ಲ ಎಂದ ತೇಜಸ್ವಿ ಸೂರ್ಯ

ಇನ್ನು​ ಬಳ್ಳಾರಿ ಜಿಲ್ಲೆಯಲ್ಲೂ ರೈತರಿಗೆ ವಕ್ಫ್​ ಬೋರ್ಡ್​ ನೋಟಿಸ್ ಜಾರಿ ಮಾಡಲಾಗಿದೆ. ಬಳ್ಳಾರಿ ತಾಲೂಕಿನ ಬೊಮ್ಮನಹಾಳದ ಒಂದೇ ಗ್ರಾಮದ 10ಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡಲಾಗಿದೆ. ವಕ್ಫ್ ನೀಡಿದ​ ನೋಟಿಸ್​ಗೆ​​​​ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಪಿತ್ರಾರ್ಜಿತ 8 ಎಕರೆ ಜಮೀನಿಗೆ ವಕ್ಫ್ ಆಸ್ತಿ‌ ಅಂತಾ ನೋಟಿಸ್ ನೀಡಿದ್ದು, ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ