AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್

ವಿಜಯಪುರದ ರೈತರು ತಮ್ಮ ಭೂಮಿಯನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡಿರುವ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಎಕರೆ ಭೂಮಿ ವಕ್ಫ್ ಹೆಸರಿನಲ್ಲಿ ದಾಖಲಾಗಿದೆ ಎಂದು ಆರೋಪಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಬೆಂಬಲ ಸೂಚಿಸಿದ್ದು, ಧರಣಿಯಲ್ಲಿ ಭಾಗಿಯಾಗಲಿದ್ದಾರೆ.

ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್
ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್
TV9 Web
| Edited By: |

Updated on: Oct 30, 2024 | 9:58 AM

Share

ಹುಬ್ಬಳ್ಳಿ, ಅಕ್ಟೋಬರ್​​ 30: ವಿಜಯಪುರದಲ್ಲಿ ರೈತರು ಸರ್ಕಾರದ ವಿರುದ್ಧ ಬಂಡೆದ್ದಿದಾರೆ. ವಕ್ಫ್‌ ಆಸ್ತಿ (Waqf) ವಿವಾದ ಕುರಿತಂತೆ ರೈತರು ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ರೈತರು ನಡೆಸುತ್ತಿರುವ ಹೋರಾಟಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಾಥ್ ನೀಡಲಿದ್ದಾರೆ.

ವಿಜಯಪುರ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ವಕ್ಫ್ ಮಂಡಳಿ ಹೆಸರಿನಲ್ಲಿ ದಾಖಲಾಗಿರುವುದನ್ನು ಖಂಡಿಸಿ, ರೈತರು ವಿಜಯಪುರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಧರಣಿ ಆರಂಭಿಸಿದ್ದು, ಇಂದು ಧರಣಿ ನಿರತ ರೈತರನ್ನು ಭೇಟಿ ಮಾಡಿ ಬಳಿಕ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ವಿಜಯಪುರ ವಕ್ಫ್​ ಆಸ್ತಿ ವಿವಾದ: ವಿಶೇಷ ಹೋರಾಟಕ್ಕೆ ಸಿದ್ಧವಾದ ರೈತ ಸಂಘಟನೆಗಳು

ರೈತರ ಜಮೀನುಗಳನ್ನು ವಕ್ಫ್ ಆಸ್ತಿಯಾಗಿ ಕಬಳಿಸುವುದರ ಹಿಂದೆ ಕಾಂಗ್ರೆಸ್ ಮತ್ತು ಸಚಿವ ಜಮೀರ್ ಕುಮ್ಮಕ್ಕು ಕೆಲಸ ಮಾಡಿರುವುದು ಸ್ಪಷ್ಟ. ಇವರೆಲ್ಲರೂ ಸೇರಿ, ರೈತರನ್ನು ಭಯಭೀತರನ್ನಾಗಿ ಮಾಡಿ ಅವರ ಜಮೀನನ್ನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಪ್ರಲ್ಹಾದ್​ ಜೋಶಿ ಆರೋಪಿಸಿದ್ದಾರೆ.

ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್ 

ರೈತರ ಜಮೀನು ಖಾತೆಯಿಂದ ವಕ್ಫ್ ಬೋರ್ಡನ ಹೆಸರು ತೆಗೆಸುವವರೆಗೆ ನಮ್ಮ ಹೋರಾಟ ನಡೆಯಲಿದೆ. ವಕ್ಫ್ ಬೋರ್ಡ್ ವಂಚನೆಯಲ್ಲಿ ಸಿಲುಕಿದ ರಾಜ್ಯದ ಪ್ರತಿ ರೈತರಿಗೆ ನ್ಯಾಯ ಸಿಗುವವರೆಗೆ ಹಾಗೂ ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಸಿಗುವವರೆಗೆ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ