AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ವಿವಾದ ಬೆನ್ನಲ್ಲೇ ರೈತರ ಪಹಣಿ ಸಿಗದಂತೆ ಸರ್ವರ್ ಡೌನ್: ಸರ್ಕಾರದ ವಿರುದ್ಧ ಯತ್ನಾಳ್​ ಆರೋಪ

ವಿಜಯಪುರದಲ್ಲಿ ರೈತರಿಗೆ ವಕ್ಫ್​​ ಬೋರ್ಡ್​​ ನೋಟಿಸ್​ ಖಂಡಿಸಿ ಮಾಡುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ವಕ್ಫ್​ ಕಾಯ್ದೆ ತೊಲಗಿಸಲು ಈ ಹೋರಾಟ. ರೈತರ ಪಹಣಿ ಸಿಗದಂತೆ ಸರ್ವರ್ ಡೌನ್ ಮಾಡಿದ್ದಾರೆ. ಸರ್ಕಾರವೇ ಡೌನ್ ಆಗಲಿದೆ ಎಂದು ಕಿಡಿಕಾರಿದ್ದಾರೆ.

ವಕ್ಫ್​ ವಿವಾದ ಬೆನ್ನಲ್ಲೇ ರೈತರ ಪಹಣಿ ಸಿಗದಂತೆ ಸರ್ವರ್ ಡೌನ್: ಸರ್ಕಾರದ ವಿರುದ್ಧ ಯತ್ನಾಳ್​ ಆರೋಪ
ವಕ್ಫ್​ ವಿವಾದ ಬೆನ್ನಲ್ಲೇ ರೈತರ ಪಹಣಿ ಸಿಗದಂತೆ ಸರ್ವರ್ ಡೌನ್: ಸರ್ಕಾರದ ವಿರುದ್ಧ ಯತ್ನಾಳ್​ ಆರೋಪ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Nov 04, 2024 | 4:31 PM

Share

ವಿಜಯಪುರ, ನವೆಂಬರ್​ 04: ರೈತರ ಪಹಣಿ ಸಿಗದಂತೆ ಸರ್ವರ್ ಡೌನ್ ಮಾಡಿದ್ದಾರೆ. ಸರ್ಕಾರವೇ ಡೌನ್ ಆಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basanagouda Patil) ಹೇಳಿದ್ದಾರೆ. ನಗರದಲ್ಲಿ ರೈತರಿಗೆ ವಕ್ಫ್​​ ಬೋರ್ಡ್​​ ನೋಟಿಸ್​ ಖಂಡಿಸಿ ಪ್ರತಿಭಟನೆ ವೇಳೆ​ ಭಾಷಣ ಮಾಡಿದ ಅವರು, ಎಲ್ಲರೂ ಗಟ್ಟಿ ಆದರೆ ರೈತರ, ಮಠಗಳ‌ ಜಮೀನು ಉಳಿಯುತ್ತೆ. ಎಷ್ಟು ಅಂತಾ ಮನೆಯಲ್ಲಿ ಕುಳಿತುಕೊಳ್ಳುವುದು. ಮುಂದೆ ಧರ್ಮ‌ಯುದ್ಧ ಆಗೋದೇ ಎಂದಿದ್ದಾರೆ.

ಮುಸ್ಲಿಂ ಮೌಲ್ವಿಗಳಿಂದ ಪ್ರಧಾನಿ ಮೋದಿಗೆ ಎಚ್ಚರಿಕೆ

ವಕ್ಫ್​ ಕಾಯ್ದೆ ತೊಲಗಿಸಲು ಈ ಹೋರಾಟ ಮಾಡಲಾಗುತ್ತಿದೆ. ವಕ್ಫ್​​ ವಿರುದ್ಧ ಹೋರಾಟ ಶುರುವಾಗಿದ್ದೇ ವಿಜಯಪುರದ ಪವಿತ್ರ ಭೂಮಿಯಿಂದ. ಕರಾಳ ಶಾಸನದ ಅನುಭವ ಆಗುತ್ತಿದೆ. ವಕ್ಫ್​ ವಿರುದ್ಧ ದೊಡ್ಡ ಮಟ್ಟದ ಹೋರಾಟದ ಅಗತ್ಯವಿದೆ. ನಿನ್ನೆ ದೆಹಲಿಯಲ್ಲಿ ಮುಸ್ಲಿಂ ಮೌಲ್ವಿಗಳು ಸಭೆ ನಡೆಸಿ ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ. ಮೋದಿ ತರುವ ಕಾಯ್ದೆ ಬೆಂಬಲಿಸದಂತೆ ನಿತೀಶ್​​ ಕುಮಾರ್, ಚಂದ್ರಬಾಬು ನಾಯ್ಡುಗೂ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದರ್, ಧಾರವಾಡ ಜಿಲ್ಲೆಯಲ್ಲಿ ಗ್ರಾಮಗಳು ವಕ್ಫ್​ ಪಾಲು: ಜನ ಕಂಗಾಲು

ಸಿಎಂ ಸಿದ್ದರಾಮಯ್ಯ ಭೇಟಿಗೆ ಹೋದಾಗ ಜಮೀರ್ ಜತೆ ವಾಗ್ವಾದ ಆಯ್ತು. ನಾನು ಜೋರು ‌ಮಾಡಿದೆ. ಖಬರಸ್ಥಾನಗೆ ಹಸಿರು ಬಣ್ಣ ಹಾಕಬೇಕು. ಅದು‌ ಸೈತಾನ್​ಗೆ ಕಾಣಿಸಬೇಕೆಂದು ಜಮೀರ್ ಹೇಳುತ್ತಾರೆ. ಖಾವಿ ಹಾಕಿದವರು ನಾವೇ ಸೈತಾನಗಳಾ? ಆ ಮೂಲಕ ಜನ್ನತ್ ಕುರಿತ ಮುಸ್ಲಿಂ ಮುಖಂಡರ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ನಮಗೆ ದೇಶ ಧರ್ಮ‌ ದೊಡ್ಡದು, ನಂತರ ನಮ್ಮ‌ ಪಾರ್ಟಿ. ದೇಶ ಉಳಿದರೆ ಎಲ್ಲ‌ ಉಳಿದಂತೆ. ದೇಶಕ್ಕಿಂತ ಖುರಾನ್ ದೊಡ್ಡದು ಅಂತಾರೆ ಮುಸ್ಲಿಮರು, ಆದರೆ ಸಂವಿಧಾನ ದೊಡ್ಡದು. ವಕ್ಫ್​ ಬೋರ್ಡ್​ ಹೋಗೋವರೆಗೂ ಹೋರಾಟ ನಿಲ್ಲದು. ಅಹೋರಾತ್ರಿ ಹೋರಾಟ ಮಾಡುತ್ತೇವೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಇದೂ ಸಹ ಚರ್ಚೆಗೆ ಗ್ರಾಸವಾಗಲಿದೆ. ಮುಂದೆ ರಾಜ್ಯದಲ್ಲಿ ನಮ್ಮದೇ ಕಾಂಬಿನೇಷನ್ ನಾಯಕತ್ವ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನ್ನದಾನೇಶ್ವರ ಮಠದ ಆಸ್ತಿಯಲ್ಲೂ ವಕ್ಫ್​ ಹೆಸರು: ಉಗ್ರ ಹೋರಾಟ ಎಚ್ಚರಿಕೆ ನೀಡಿದ ಸ್ವಾಮೀಜಿ

ನಮ್ಮ ಸ್ವಾಮೀಜಿಗಳು ಹೋರಾಟ ಮಾಡುತ್ತಿಲ್ಲ. ಕನ್ಹೇರಿ ಸ್ವಾಮಿಜಿ ಮುಂಚೂಣಿ‌ ವಹಿಸಿಕೊಂಡಿದ್ದರೆ‌ ಇತರೆ ಸ್ವಾಮೀಜಿಗಳು ಕೊಂಕು‌ ಹೇಳುತ್ತಿದ್ದಾರೆ. ಮಠಗಳಿಗೆ ದಾನ‌ ನೀಡುವರು ಹಿಂದೂಗಳು ಮುಸ್ಲಿಂರಲ್ಲ. ಮುಸ್ಲಿಂರು ಸ್ವಾಮೀಜಿಗಳಿಗೆ ನಮಸ್ಕಾರ ಮಾಡಲ್ಲ. ಕೆಲ ಸ್ವಾಮೀಜಿಗಳು ಜ್ಯಾತ್ಯಾತೀತ ಎನ್ನುತ್ತಾರೆ. ಪಾರ್ಟಿಷನ್ ಆಪ್ ಪಾಕಿಸ್ತಾನ ಎಂಬ ಪುಸ್ತಕ ಅಂಬೇಡ್ಕರ್ ಬರೆದಿದ್ದರು ಈಗ ಹೊರ ಬಂದಿದ್ದಾರೆ. ಭಾರತ‌ ಪಾಕಿಸ್ತಾನ ವಿಭಜನೆ ಬೇಡಾ ಎಂದಿದ್ದರು. ವಿಭಜನೆ ಮಾಡಿದರೆ ಪಾಕಿಸ್ತಾನದ ಹಿಂದೂಗಳನ್ನು ಇಲ್ಲಿಗೆ ಇಲ್ಲಿರುವ ಮುಸ್ಲಿಂಮರನ್ನು ಪಾಕಿಸ್ತಾನಕ್ಕೆ ರವಾನೆ ಮಾಡಬೇಕೆಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ