AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ವಕ್ಫ್​ ಆಸ್ತಿ ವಿವಾದ: ವಿಶೇಷ ಹೋರಾಟಕ್ಕೆ ಸಿದ್ಧವಾದ ರೈತ ಸಂಘಟನೆಗಳು

ವಿಜಯಪುರದಲ್ಲಿ ವಕ್ಫ್ ಬೋರ್ಡ್ ಭೂಮಿ ನೋಂದಣಿಯಿಂದ ರೈತರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಇಂದು ಅಖಂಡ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆಯಿಂದ ಹೋರಾಟ ಮಾಡಲಾಗುತ್ತಿದೆ. ಡಿಸಿ ಕಚೇರಿ ಆವರಣದಲ್ಲೇ ದೀಪಾವಳಿ ಆಚರಣೆಗೆ ನಿರ್ಧರಿಸಿದ್ದು, ಅಹೋರಾತ್ರಿ ಹೋರಾಟ ಮಾಡಲಿದ್ದಾರೆ.

ವಿಜಯಪುರ ವಕ್ಫ್​ ಆಸ್ತಿ ವಿವಾದ: ವಿಶೇಷ ಹೋರಾಟಕ್ಕೆ ಸಿದ್ಧವಾದ ರೈತ ಸಂಘಟನೆಗಳು
ವಿಜಯಪುರ ವಕ್ಫ್​ ಆಸ್ತಿ ವಿವಾದ: ವಿಶೇಷ ಹೋರಾಟಕ್ಕೆ ಸಿದ್ಧವಾದ ರೈತ ಸಂಘಟನೆಗಳು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 29, 2024 | 7:03 PM

Share

ವಿಜಯಪುರ, ಅಕ್ಟೋಬರ್​ 29: ವಿಜಯಪುರದಲ್ಲಿ ಹೊತ್ತಿಕೊಂಡ ವಕ್ಫ್ (Waqf) ಬೆಂಕಿ ಆರುವ ಲಕ್ಷಣಗಳು ಕಾಣುತ್ತಿಲ್ಲ. ಇತ್ತ ಅನ್ನದಾತರಿಗೆ ಆಧಾರವಾಗಿರುವ ಭೂಮಿ ಕೈತಪ್ಪಿ ಹೋಗುತ್ತೆ ಎನ್ನುವ ಆತಂಕ ಮನೆ ಮಾಡಿದೆ. ಹೀಗಾಗಿ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದ್ದು, ಅಖಂಡ ಕರ್ನಾಟಕ ರೈತ ಸಂಘ, ಹಸಿರು ಸೇನೆಯಿಂದ ಅಹೋರಾತ್ರಿ ಹೋರಾಟ ಮಾಡಲು ನಿರ್ಧರಿಸಿದೆ.

ಡಿಸಿ ಕಚೇರಿ ಆವರಣದಲ್ಲೇ ದೀಪಾವಳಿ ಆಚರಣೆಗೆ ನಿರ್ಧಾರ

ಕರಾಳ ಕತ್ತಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದೀಪಾವಳಿ ಆಚರಣೆಗೆ ರೈತ ಸಂಘದ ನಿರ್ಧಾರ ಮಾಡಿದ್ದು, ಇದೀಗ ವಿಜಯಪುರ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಲಾಗಿದೆ. ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮೂಲಕ ಡಿಸಿ ಕಚೇರಿವರೆಗೂ ರೈತರ ಪ್ರತಭಟನಾ ಮೆರವಣಿಗೆ ಸಾಗಲಿದೆ.

ಇದನ್ನೂ ಓದಿ: ವಕ್ಫ್​ ವಿವಾದ: ಬಿಜೆಪಿ ತಂಡದ ಮುಂದೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ವಿಜಯಪುರ ಜಿಲ್ಲಾಧಿಕಾರಿ

ಮೆರವಣಿಗೆಯಲ್ಲಿ ಸರ್ಕಾರದ ವಿರುದ್ಧ, ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಭಾವಚಿತ್ರ ಪ್ರದರ್ಶನ ಮಾಡಿ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ವಿಜಯಪುರ-ಅಥಣಿ ರಸ್ತೆ ಕೆಲ‌ಕಾಲ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದು, ಪೊಲೀಸರ ಮನವೊಲಿಕೆಗೆ ಬಗ್ಗದೇ ಪ್ರತಿಭಟಿಸಿದ್ದಾರೆ.

ಸರ್ಕಾರದ ಹುನ್ನಾರದಿಂದ ರೈತರಿಗೆ ದೀಪಾವಳಿ ಕರಾಳವಾಗಿದೆ. ರೈತರು ದೀಪಾವಳಿ ಆಚರಣೆ ಮಾಡಲ್ಲ. ರೈತ ಕುಟುಂಬಗಳು ಬೀದಿಗೆ ಬಿದ್ದಿವೆ. ವಕ್ಫ್ ಬೋರ್ಡ್ ನಮೂದು ಮಾಡಿದ್ದನ್ನು ತೆಗೆಯಬೇಕು. ಭವಿಷ್ಯದಲ್ಲಿ ರೈತರಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆ ವೇಳೆ ಅವಾಚ್ಯವಾಗಿ ನಿಂದಿಸಿದ ವ್ಯಕ್ತಿಗೆ ಪ್ರತಿಭಟನಾನಿರತ ರೈತರಿಂದ ಥಳಿತ

ಇನ್ನು ನಗರದಲ್ಲಿ ರೈತರಿಂದ ಪ್ರತಿಭಟನಾ ಮೆರವಣಿಗೆ ಬಗ್ಗೆ ಮದ್ಯ ಸೇವಿಸಿದ್ದ ವ್ಯಕ್ತಿಯಿಂದ ನಿಂದಿಸಿ, ಅವಾಚ್ಯವಾಗಿ ಬೈಯ್ದ ವ್ಯಕ್ತಿಗೆ ಪ್ರತಿಭಟನಾನಿರತ ರೈತರಿಂದ ಥಳಿಸಿದ್ದಾರೆ. ರೈತರ ಪ್ರತಿಭಟನೆ ಕುರಿತು ವ್ಯಕ್ತಿ ಅವಾಚ್ಯವಾಗಿ ಮಾತನಾಡಿದ್ದ. ಹೀಗಾಗಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ರೈತರು ಒಪ್ಪಿಸಿದ್ದಾರೆ. ಬಳಿಕ ರೈತರಿಂದ ಪ್ರತಿಭಟನೆ ಮುಂದುವರೆಯಿತು.

ವಿಜಯಪುರದಲ್ಲಿ ಹೊತ್ತಿದ್ದ ಕಿಚ್ಚು ಇದೀಗ, ಧಾರವಾಡ, ಯಾದಗಿರಿ, ರಾಯಚೂರು, ಕೋಲಾರ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ವ್ಯಾಪಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:02 pm, Tue, 29 October 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು