AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ಆಸ್ತಿ ಅವರ ಅಪ್ಪನ ಆಸ್ತಿಯಲ್ಲ: ಶಾಸಕ ಯತ್ನಾಳ್​ ವಿರುದ್ಧ​ ಸಚಿವ ಜಮೀರ್ ವಾಗ್ದಾಳಿ

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮದ್ ಖಾನ್, ಶಾಸಕ ಯತ್ನಾಳ್​ ಆಸ್ತಿಯೋ ಅಥವಾ ನಮ್ಮಪ್ಪನ ಆಸ್ತಿಯೋ ಇದ್ದಿದ್ದರೆ ನಾವು ಯಾರಿಗಾದರೂ ಹಂಚಬಹುದಿತ್ತು. ಇದು ಯಾರ ಅಪ್ಪನ ಆಸ್ತಿಯೂ ಅಲ್ಲ, ಇದು ವಕ್ಪ್ ಆಸ್ತಿ ಎಂದು ಯತ್ನಾಳ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ದಾನಿಗಳು ಮುಸ್ಲಿಂ ಸಮಾಜಕ್ಕೆ ಒಳ್ಳೆಯದಾಗಲಿ ಎಂದು ದಾನ ನೀಡಿದ್ದಾರೆ. 

ವಕ್ಫ್ ಆಸ್ತಿ ಅವರ ಅಪ್ಪನ ಆಸ್ತಿಯಲ್ಲ: ಶಾಸಕ ಯತ್ನಾಳ್​ ವಿರುದ್ಧ​ ಸಚಿವ ಜಮೀರ್ ವಾಗ್ದಾಳಿ
ವಕ್ಫ್ ಆಸ್ತಿ ಅವರ ಅಪ್ಪನ ಆಸ್ತಿಯಲ್ಲ: ಶಾಸಕ ಯತ್ನಾಳ್​ ವಿರುದ್ಧ​ ಸಚಿವ ಜಮೀರ್ ವಾಗ್ದಾಳಿ
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 22, 2024 | 7:19 PM

Share

ವಿಜಯಪುರ, ಜೂನ್​ 22: ವಕ್ಫ್ ಆಸ್ತಿ 12 ಲಕ್ಷ ಎಕರೆಯಲ್ಲ 34 ಸಾವಿರ ಎಕರೆ ಇದೆ. ಅದು ಶಾಸಕ ಯತ್ನಾಳ್​ (Basangouda Patil Yatnal) ಅವರ ಅಪ್ಪನ ಆಸ್ತಿಯಲ್ಲ. ಬಡವರಿಗೆ ಅದನ್ನು ಎತ್ತಿ ಕೊಡುವುದಕ್ಕೆ ಎಂದು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan)​ ವಾಗ್ದಾಳಿ ಮಾಡಿದ್ದಾರೆ. ದೇಶದಲ್ಲಿ ಸುಮಾರು 12 ಲಕ್ಷ ಎಕರೆ ಜಮೀನು ವಕ್ಫ್ ಆಸ್ತಿಯಿದೆ. ಅದನ್ನು ಬಡವರ ಕೆಲಸಕ್ಕೆ ಉಪಯೋಗಿಸಬೇಕು ಎಂಬ ಯತ್ನಾಳ್​ ಹೇಳಿಕೆ ಜಮೀರ್ ಟಾಂಗ್​ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್​, ಯತ್ನಾಳ್​ ಆಸ್ತಿಯೋ, ನಮ್ಮಪ್ಪನ ಆಸ್ತಿಯೋ ಇದ್ದಿದ್ದರೆ ನಾವು ಯಾರಿಗಾದರೂ ಹಂಚಬಹುದಿತ್ತು. ಇದು ಯಾರ ಅಪ್ಪನ ಆಸ್ತಿಯೂ ಅಲ್ಲ, ಇದು ವಕ್ಪ್ ಆಸ್ತಿ ಎಂದು ಕಿಡಿಕಾದ್ದಾರೆ.

ಇದನ್ನೂ ಓದಿ: ದರ್ಶನ್ ಪ್ರಕರಣದಲ್ಲಿ ಸಚಿವ ಜಮೀರ್ ಅಹಮದ್ ನೀಡಿದರು ಸ್ಪಷ್ಟನೆ, ಏನವರ ಅನಿಸಿಕೆ?

ವಕ್ಫ್​ಗೆ ಆಸ್ತಿ ಕೊಟ್ಟಿರುವುದು ಯಾರು? ದಾನಿಗಳು ಕೊಟ್ಟಿದ್ದು. ನಮ್ಮಪ್ಪನ ಆಸ್ತಿ ಇದ್ದರೆ ಅದನ್ನ ಯಾರಿಗಾದರೂ ಕೊಡಬಹುದು. ಆದರೆ ಅದು ನನ್ನ ಆಸ್ತಿಯಲ್ಲ ಬಡವರಿಗೆ ಎತ್ತಿ ಕೊಡುವುದಕ್ಕೆ. ನಾಳೆ ಅವರ ಅಪ್ಪನ ಆಸ್ತಿಯಿದ್ದರೆ ಅದನ್ನು ಯಾರಿಗಾದರೂ ಕೊಡಬಹುದು ಎಂದಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಹೆಚ್ಚಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನರನ್ನು ವಂಚಿಸಿದೆ: ವಿ ಸೋಮಣ್ಣ, ಕೇಂದ್ರ ಸಚಿವ

ದಾನಿಗಳು ಮುಸ್ಲಿಂ ಸಮಾಜಕ್ಕೆ ಒಳ್ಳೆಯದಾಗಲಿ ಎಂದು ದಾನ ನೀಡಿದ್ದಾರೆ. ದಾನ ಮಾಡಿದವರು ಯಾವುದಕ್ಕೆ ಉಪಯೋಗ ಮಾಡಬೇಕೆಂಬುದನ್ನು ಕೂಡ ತಿಳಿಸಿರುತ್ತಾರೆ. ಶಿಕ್ಷಣ, ಸ್ಮಶಾನ, ಈದ್ಗಾ, ಮಸೀದಿ ಕಟ್ಟಲು ಉಪಯೋಗಿಸಬೇಕೆಂದು ದಾನ ಮಾಡಿರುತ್ತಾರೆ ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲ್ಲ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಗ್ಯಾರಂಟಿ ಯೋಜನೆಗಳಿಗಾಗಿ ಎಂದು ವಿರೋಧ ಪಕ್ಷಗಳ ವಾಗ್ದಾಳಿ ವಿಚಾರವಾಗಿ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳನ್ನ ರಾಜಕೀಯ ಲಾಭಕ್ಕೆ ಕೊಟ್ಟಿಲ್ಲ  ಎಂದು ನಮ್ಮ ಸಿಎಂ ಅವರೇ ಹೇಳಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೆ ಬಡವರಿಗೆ ಸಹಾಯ ಆಗಲಿ ಎಂದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವ ಪ್ರಶ್ನೆಯೇ ಬರಲ್ಲ ಎಂದಿದ್ದಾರೆ.

ಡಿಸಿಎಂ ಸ್ಥಾನ ಕೇಳುವುದರಲ್ಲಿ ತಪ್ಪೇನು?

ಡಿಸಿಎಂ ವಿಚಾರವಾಗಿ ಮಾತನಾಡಿದ್ದು, ಡಿಸಿಎಂ ಸ್ಥಾನ ಕೇಳುವುದರಲ್ಲಿ ತಪ್ಪೇನು. ಎಲ್ಲ ಸಮಾಜದವರಿಗೂ ಉಪಮುಖ್ಯಂಮತ್ರಿ ಸ್ಥಾನ ಕೊಡಬೇಕೆಂಬ ಬೇಡಿಕೆ ಇದೆ. ಈ ವಿಚಾರದಲ್ಲಿ ಯಾವುದೇ ಆಂತರಿಕ ಅಸಮಾಧಾನವಿಲ್ಲ. ಅದನ್ನು ಕೊಡುವವರು ನಮ್ಮ ಹೈಕಮಾಂಡ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!