AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ವಾರದೊಳಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಧರಣಿ ಮಾಡ್ತೀವಿ: ತೇಜಸ್ವಿ ಸೂರ್ಯ

ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು ಸಂಕಟಪಡುವ ಸ್ಥಿತಿ ಬಂದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದ್ದಾರೆ. ಇನ್ನೊಂದು ವಾರದೊಳಗೆ ಕ್ರಮಕೈಗೊಳ್ಳದಿದ್ದರೆ ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ವಾರದೊಳಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಧರಣಿ ಮಾಡ್ತೀವಿ: ತೇಜಸ್ವಿ ಸೂರ್ಯ
ಜಲಮಂಡಳಿ ಜೊತೆ ತೇಜಸ್ವಿ ಸೂರ್ಯ ಸಭೆ
TV9 Web
| Edited By: |

Updated on:Mar 06, 2024 | 9:01 PM

Share

ಬೆಂಗಳೂರು, ಮಾರ್ಚ್​​ 06: ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಬುಧವಾರ ಬಿಡಬ್ಲ್ಯೂಎಸ್​ಎಸ್​​ಬಿ ಚೇರ್ಮನ್​​ರನ್ನು ಭೇಟಿ ಮಾಡಿರುವ ಸಂಸದ ತೇಜಸ್ವಿ ಸೂರ್ಯ (Tejasvi Surya) ಚರ್ಚಿಸಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ನೀರಿನ ಅಭಾವ ಬರುತ್ತೆ ಎಂದು ಗೊತ್ತಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಇನ್ನೊಂದು ವಾರದೊಳಗೆ ಸರ್ಕಾರ ತಾತ್ಕಾಲಿಕ ಪರಿಹಾರ ನೀಡಬೇಕು. ವಾರದೊಳಗೆ ಕ್ರಮಕೈಗೊಳ್ಳದಿದ್ದರೆ ವಿಧಾನಸೌಧದ ಎದುರು ಧರಣಿ ಮಾಡುತ್ತೇವೆ ಎಂದು ವಾಗ್ದಾಳಿ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟಿಸುತ್ತೇವೆ ಎಂದು ಹೇಳಿದ್ದಾರೆ.

ಈವರೆಗೂ ಸರ್ಕಾರ ಒಂದು ಏರಿಯಾಗೂ ಒಂದು ಹನಿ ನೀರು ಕೊಟ್ಟಿಲ್ಲ. ಸರ್ಕಾರ ಪರಿಹಾರ ಕೊಡುವ ಬದಲು ಜನರಿಗೆ ಸಮಸ್ಯೆ ಸೃಷ್ಟಿ ಮಾಡುತ್ತಿದೆ. ಈಗ ನೀರಿನ ಟ್ಯಾಂಕರ್​ಗಳನ್ನ ಸುಪರ್ದಿಗೆ ತೆಗೆದುಕೊಳ್ಳುತ್ತೇವೆ ಅಂತಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​

ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು ಸಂಕಟಪಡುವ ಸ್ಥಿತಿ ಬಂದಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bangalore Water Crisis: ಬೆಂಗಳೂರಿನ ಹೌಸಿಂಗ್ ಸೊಸೈಟಿಯಲ್ಲಿ ನೀರು ದುರ್ಬಳಕೆ ತಡೆಯಲು ಭದ್ರತಾ ಸಿಬ್ಬಂದಿ, 5000 ರೂ. ದಂಡ!

ಬೆಂಗಳೂರು ನಗರದ ಬಹುತೇಕ ಭಾಗಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರ ಅವೈಜ್ಞಾನಿಕ ತೀರ್ಮಾನ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕಿದೆ ಎಂದು ಹೇಳಿದ್ದಾರೆ.

ಬಿಡಬ್ಲ್ಯೂಎಸ್​ಎಸ್​​ಬಿಗೆ ಸಂಸದ ತೇಜಸ್ವಿ ಸೂರ್ಯ ಕೊಟ್ಟ ಸಲಹೆ ಏನು?

  1. ಕೈಗಾರಿಕೆಗಳು, ಕಟ್ಟಡ ನಿರ್ಮಾಣಕ್ಕೆ ಕುಡಿಯಲು ಯೋಗ್ಯವಲ್ಲದ ನೀರನ್ನು ಬಳಸಬೇಕು.
  2. ಕುಡಿಯುವ ನೀರನ್ನು ಎಲ್ಲೆಲ್ಲಿ ತೊಂದರೆ ಇದೆಯೋ ಅಲ್ಲಿಗೆ ಸರಬರಾಜು ಮಾಡಬೇಕು.
  3. ಸಂಸ್ಕರಣೆಯ ನೀರಿನ ಪ್ರಮಾಣ 1300 MLD ರಷ್ಟು ಇದ್ದು, ಇದನ್ನು ನೀರಿನ ಮರುಪೂರಣ ಜಾಲಕ್ಕೆ ಬಳಸಬಹುದಾಗಿದೆ.
  4. ಭೂ ವಿಜ್ಞಾನಿಗಳ ಸಲಹೆ ಮೇರೆಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಬೋರ್ ವೆಲ್ ಕೊರೆಸಿ, ನೀರಿನ ವ್ಯವಸ್ಥೆ ಕಲ್ಪಿಸಬೇಕು.
  5. ಕಳೆದ ಕೆಲ ತಿಂಗಳುಗಳಿಂದ ನಿಷ್ಕ್ರಿಯ ಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೊರೆಯಿಸಬೇಕಿದೆ.
  6. ಪ್ರಸ್ತುತ ಚಾಲ್ತಿಯಲ್ಲಿರುವ ಟ್ಯಾಂಕರ್ ವ್ಯವಸ್ಥೆಯನ್ನು ಮುಂದುವರೆಸುವುದು.
  7. ಕಾವೇರಿ 5ನೇ ಹಂತದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ, ನಿಗದಿತ ಸ್ಥಳಗಳಲ್ಲಿ ಬೆಂಗಳೂರಿನ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದು.

ಇವೆಲ್ಲ ಪರಿಹಾರಗಳನ್ನು ಒಂದು ವಾರದಲ್ಲಿ ಬಗೆಹರಿಸಲು ಮನವಿ ಸಲ್ಲಿಸಲಾಗಿದ್ದು, ಇಲ್ಲದಿದ್ದಲ್ಲಿ ವಿಧಾನಸೌಧದ ಮುಂದೆ ಬೆಂಗಳೂರಿನ ಜನತೆಯ ಪರವಾಗಿ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.

ವರದಿ: ಶಾಂತಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:00 pm, Wed, 6 March 24

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ