AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ವಾರದೊಳಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಧರಣಿ ಮಾಡ್ತೀವಿ: ತೇಜಸ್ವಿ ಸೂರ್ಯ

ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು ಸಂಕಟಪಡುವ ಸ್ಥಿತಿ ಬಂದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದ್ದಾರೆ. ಇನ್ನೊಂದು ವಾರದೊಳಗೆ ಕ್ರಮಕೈಗೊಳ್ಳದಿದ್ದರೆ ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ವಾರದೊಳಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಧರಣಿ ಮಾಡ್ತೀವಿ: ತೇಜಸ್ವಿ ಸೂರ್ಯ
ಜಲಮಂಡಳಿ ಜೊತೆ ತೇಜಸ್ವಿ ಸೂರ್ಯ ಸಭೆ
TV9 Web
| Edited By: |

Updated on:Mar 06, 2024 | 9:01 PM

Share

ಬೆಂಗಳೂರು, ಮಾರ್ಚ್​​ 06: ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಬುಧವಾರ ಬಿಡಬ್ಲ್ಯೂಎಸ್​ಎಸ್​​ಬಿ ಚೇರ್ಮನ್​​ರನ್ನು ಭೇಟಿ ಮಾಡಿರುವ ಸಂಸದ ತೇಜಸ್ವಿ ಸೂರ್ಯ (Tejasvi Surya) ಚರ್ಚಿಸಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ನೀರಿನ ಅಭಾವ ಬರುತ್ತೆ ಎಂದು ಗೊತ್ತಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಇನ್ನೊಂದು ವಾರದೊಳಗೆ ಸರ್ಕಾರ ತಾತ್ಕಾಲಿಕ ಪರಿಹಾರ ನೀಡಬೇಕು. ವಾರದೊಳಗೆ ಕ್ರಮಕೈಗೊಳ್ಳದಿದ್ದರೆ ವಿಧಾನಸೌಧದ ಎದುರು ಧರಣಿ ಮಾಡುತ್ತೇವೆ ಎಂದು ವಾಗ್ದಾಳಿ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟಿಸುತ್ತೇವೆ ಎಂದು ಹೇಳಿದ್ದಾರೆ.

ಈವರೆಗೂ ಸರ್ಕಾರ ಒಂದು ಏರಿಯಾಗೂ ಒಂದು ಹನಿ ನೀರು ಕೊಟ್ಟಿಲ್ಲ. ಸರ್ಕಾರ ಪರಿಹಾರ ಕೊಡುವ ಬದಲು ಜನರಿಗೆ ಸಮಸ್ಯೆ ಸೃಷ್ಟಿ ಮಾಡುತ್ತಿದೆ. ಈಗ ನೀರಿನ ಟ್ಯಾಂಕರ್​ಗಳನ್ನ ಸುಪರ್ದಿಗೆ ತೆಗೆದುಕೊಳ್ಳುತ್ತೇವೆ ಅಂತಾರೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​

ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆ ಉದ್ಭವವಾಗಬಹುದು ಎಂಬ ಮುನ್ಸೂಚನೆಯ ಅರಿವು ಇದ್ದರೂ ಕೂಡ ರಾಜ್ಯ ಸರ್ಕಾರವು ಬೇಜವಾಬ್ದಾರಿತನದಿಂದ ವರ್ತಿಸಿರುವ ಪರಿಣಾಮ ಬೆಂಗಳೂರಿನ ಜನತೆ ಇಂದು ಸಂಕಟಪಡುವ ಸ್ಥಿತಿ ಬಂದಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bangalore Water Crisis: ಬೆಂಗಳೂರಿನ ಹೌಸಿಂಗ್ ಸೊಸೈಟಿಯಲ್ಲಿ ನೀರು ದುರ್ಬಳಕೆ ತಡೆಯಲು ಭದ್ರತಾ ಸಿಬ್ಬಂದಿ, 5000 ರೂ. ದಂಡ!

ಬೆಂಗಳೂರು ನಗರದ ಬಹುತೇಕ ಭಾಗಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸರ್ಕಾರ ಅವೈಜ್ಞಾನಿಕ ತೀರ್ಮಾನ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕಿದೆ ಎಂದು ಹೇಳಿದ್ದಾರೆ.

ಬಿಡಬ್ಲ್ಯೂಎಸ್​ಎಸ್​​ಬಿಗೆ ಸಂಸದ ತೇಜಸ್ವಿ ಸೂರ್ಯ ಕೊಟ್ಟ ಸಲಹೆ ಏನು?

  1. ಕೈಗಾರಿಕೆಗಳು, ಕಟ್ಟಡ ನಿರ್ಮಾಣಕ್ಕೆ ಕುಡಿಯಲು ಯೋಗ್ಯವಲ್ಲದ ನೀರನ್ನು ಬಳಸಬೇಕು.
  2. ಕುಡಿಯುವ ನೀರನ್ನು ಎಲ್ಲೆಲ್ಲಿ ತೊಂದರೆ ಇದೆಯೋ ಅಲ್ಲಿಗೆ ಸರಬರಾಜು ಮಾಡಬೇಕು.
  3. ಸಂಸ್ಕರಣೆಯ ನೀರಿನ ಪ್ರಮಾಣ 1300 MLD ರಷ್ಟು ಇದ್ದು, ಇದನ್ನು ನೀರಿನ ಮರುಪೂರಣ ಜಾಲಕ್ಕೆ ಬಳಸಬಹುದಾಗಿದೆ.
  4. ಭೂ ವಿಜ್ಞಾನಿಗಳ ಸಲಹೆ ಮೇರೆಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಬೋರ್ ವೆಲ್ ಕೊರೆಸಿ, ನೀರಿನ ವ್ಯವಸ್ಥೆ ಕಲ್ಪಿಸಬೇಕು.
  5. ಕಳೆದ ಕೆಲ ತಿಂಗಳುಗಳಿಂದ ನಿಷ್ಕ್ರಿಯ ಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೊರೆಯಿಸಬೇಕಿದೆ.
  6. ಪ್ರಸ್ತುತ ಚಾಲ್ತಿಯಲ್ಲಿರುವ ಟ್ಯಾಂಕರ್ ವ್ಯವಸ್ಥೆಯನ್ನು ಮುಂದುವರೆಸುವುದು.
  7. ಕಾವೇರಿ 5ನೇ ಹಂತದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ, ನಿಗದಿತ ಸ್ಥಳಗಳಲ್ಲಿ ಬೆಂಗಳೂರಿನ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದು.

ಇವೆಲ್ಲ ಪರಿಹಾರಗಳನ್ನು ಒಂದು ವಾರದಲ್ಲಿ ಬಗೆಹರಿಸಲು ಮನವಿ ಸಲ್ಲಿಸಲಾಗಿದ್ದು, ಇಲ್ಲದಿದ್ದಲ್ಲಿ ವಿಧಾನಸೌಧದ ಮುಂದೆ ಬೆಂಗಳೂರಿನ ಜನತೆಯ ಪರವಾಗಿ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.

ವರದಿ: ಶಾಂತಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:00 pm, Wed, 6 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್