AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCD Recruitment 2026: ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಸಂಪೂರ್ಣ ವಿವರ ಇಲ್ಲಿದೆ

ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ (WCD) 3 ಒಪ್ಪಂದ ಆಧಾರಿತ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿ/ಪಿಜಿ ವಿದ್ಯಾರ್ಹತೆ ಇರುವವರು ಆಗಸ್ಟ್ 25 ರೊಳಗೆ ಅರ್ಜಿ ಸಲ್ಲಿಸಬಹುದು. ಯಾದಗಿರಿಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶ.

WCD Recruitment 2026: ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಸಂಪೂರ್ಣ ವಿವರ ಇಲ್ಲಿದೆ
ಸರ್ಕಾರಿ ಉದ್ಯೋಗ
ಅಕ್ಷತಾ ವರ್ಕಾಡಿ
|

Updated on:Aug 21, 2026 | 3:27 PM

Share

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ (WCD Yadgir) ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಹಂಬಲಿಸುತ್ತಿರುವ  ಅರ್ಹ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಒಟ್ಟು 3 ಒಪ್ಪಂದ ಆಧಾರಿತ ಹುದ್ದೆಗಳಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳು ಮತ್ತು ವೇತನ ಶ್ರೇಣಿ:

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ 1 ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್ (District Project Assistant) ಹುದ್ದೆ ಲಭ್ಯವಿದ್ದು, ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 18,000 ರೂ. ವೇತನ ಸಿಗಲಿದೆ. ಅದೇ ರೀತಿ 2 ಬ್ಲಾಕ್ ಕೋಆರ್ಡಿನೇಟರ್ (Block Coordinator) ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 20,000 ರೂ. ವೇತನವನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ವಿವರಗಳು:

ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ (Graduation/Degree) ಅಥವಾ ಪಿಜಿ ಡಿಪ್ಲೊಮಾ (PG Diploma) ಪೂರ್ಣಗೊಳಿಸಿರಬೇಕು. ಬ್ಲಾಕ್ ಕೋಆರ್ಡಿನೇಟರ್ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ (Graduation) ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. 01-09-2026 ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಇರಬೇಕು. ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದ್ದು, ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 07 ರಿಂದ ಆರಂಭವಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 25 ಕೊನೆಯ ದಿನಾಂಕವಾಗಿದೆ. ನಿಗದಿತ ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸರಳ ವಿಧಾನ:

ಆಸಕ್ತ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್ (yadgir.nic.in) ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬೇಕು. ನಂತರ ಅರ್ಜಿಯಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ಅಂಕಪಟ್ಟಿಗಳು, ಪದವಿ ಪ್ರಮಾಣಪತ್ರ, ಗುರುತಿನ ಚೀಟಿ (ಆಧಾರ್/ವೋಟರ್ ಐಡಿ), ಜನ್ಮ ದಿನಾಂಕ ಪ್ರಮಾಣಪತ್ರ ಹಾಗೂ ಇತ್ತೀಚಿನ ಭಾವಚಿತ್ರದ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು (Self-Attested Documents) ಲಗತ್ತಿಸಬೇಕು.

ಅರ್ಜಿ ತಲುಪಿಸಬೇಕಾದ ವಿಳಾಸ:

ಪೂರ್ಣಗೊಳಿಸಿದ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳನ್ನು ನೋಂದಾಯಿತ ಅಂಚೆ (Registered Post) ಅಥವಾ ಸ್ಪೀಡ್ ಪೋಸ್ಟ್ (Speed Post) ಮೂಲಕ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: C-17, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ ಸಂಕೀರ್ಣ, ಚಿತ್ತಾಪುರ ರಸ್ತೆ, ಯಾದಗಿರಿ – 585202, ಕರ್ನಾಟಕ ಈ ವಿಳಾಸಕ್ಕೆ ಆಗಸ್ಟ್ 25 ರ ಒಳಗಾಗಿ ತಲುಪಿಸಬೇಕಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:27 pm, Fri, 21 August 26

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ