AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್

ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ವಿಚಾರವಾಗಿ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ನಮಗೆ ಭರವಸೆ ಇದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ. ಅವರು ಆರೋಪಮುಕ್ತರಾಗಿ ಹೊರ ಬರುತ್ತಾರೆ ಎಂದು ಸಿದ್ದರಾಮಯ್ಯ ಬೆನ್ನಿಗೆ ನಿಂತುಕೊಂಡಿದ್ದಾರೆ. ತನಿಖೆ ಆದ ಮೇಲೆ ಎಲ್ಲ ಗೊತ್ತಾಗುತ್ತೆ ಎಂದಿದ್ದಾರೆ.

ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್
ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್
Anil Kalkere
| Edited By: |

Updated on: Sep 25, 2024 | 6:16 PM

Share

ಬೆಂಗಳೂರು, ಸೆಪ್ಟೆಂಬರ್​ 25: ಮುಡಾ ಪ್ರಕರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿರಬಹುದು. ತನಿಖೆ ಆದ ಮೇಲೆ ಎಲ್ಲ ಗೊತ್ತಾಗುತ್ತೆ. ಆದರೆ ನಮಗೆ ಭರವಸೆ ಇದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನಿಖೆಗೆ ಕೋರ್ಟ್ ಆದೇಶ ಕೊಟ್ಟಿದೆ, ತನಿಖೆಯಾಗಲಿ. ಸಿಎಂ ಸಿದ್ದರಾಮಯ್ಯ ಆರೋಪಮುಕ್ತರಾಗಿ ಹೊರ ಬರುತ್ತಾರೆ ಎಂದಿದ್ದಾರೆ.

ಯಾವ ಬ್ಲ್ಯಾಕ್​ಮಾರ್ಕ್ ಸಹ ಆಗಿಲ್ಲ. ಮಾರ್ಕೇ ಆಗಿಲ್ಲ, ಬ್ಲ್ಯಾಕ್​ಮಾರ್ಕ್​ ಎಲ್ಲಿಂದ‌ ಬರುತ್ತೆ. ಚುನಾವಣಾ ಪ್ರಚಾರ ವೇಳೆ ಪ್ರಧಾನಿ ನರೇಂದ್ರ ಮೋದಿ ಮುಡಾ ಪ್ರಸ್ತಾಪ ವಿಚಾರವಾಗಿ ಮಾತನಾಡಿದ್ದು, ರಾಜಕಾರಣ ಮಾಡುವವರು ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ಮುಂದಿನ ಹೋರಾಟದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು

ಸಿಎಂ ರಾಜೀನಾಮೆಗೆ ಬಿಜೆಪಿ ಒತ್ತಡ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಕೇಂದ್ರ‌ ಸಚಿವರೆಲ್ಲಾ ಅಧಿಕಾರದಲ್ಲಿ ಮುಂದು ಬರುತ್ತಿದ್ದಾರೆ. ಯಾರು ಅಂತ ಮುಂದೆ ಪಟ್ಟಿ ಹೇಳುತ್ತೇನೆ ಎಂದಿದ್ದಾರೆ.

ನಿನ್ನೆ ನಮಗೆ ಒಂದು ತರ ಜಯ ಸಿಕ್ಕಿದೆ ಎಂದ ಜಮೀರ್​

ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ವಿಚಾರವಾಗಿ ವಿಧಾನಸೌಧದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ನಿನ್ನೆ ನಮಗೆ ಒಂದು ತರ ಜಯ ಸಿಕ್ಕಿದೆ. ಪ್ರಾಸಿಕ್ಯೂಷನ್ ಅನುಮತಿ ರದ್ದು ಮಾಡಿ ಎಂದು ಕೇಳಿದ್ದೆವು. ಗವರ್ನರ್ ಪ್ರಾಸಿಕ್ಯೂಷನ್​ಗೆ ಕೊಟ್ಟಿಲ್ಲ ಎಂದು ಬಂದಿದೆ. ತನಿಖೆ ಆಗಲಿ, ಸತ್ಯಾಂಶ ಹೊರಗೆ ಬರುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಅರೆಸ್ಟ್ ಕೂಡಾ ಮಾಡಬಹುದು: ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ

ಬಿಜೆಪಿಗೆ ಸಿದ್ದರಾಮಯ್ಯನವರ ಜನಪ್ರಿಯತೆ ಸಹಿಸಲಾಗುತ್ತಿಲ್ಲ. ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ. 5 ವರ್ಷ ಸಿದ್ದರಾಮಯ್ಯರನ್ನು ಅಲ್ಲಾಡಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ಮೊದಲು ಹೆಚ್​ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿಸಲಿ: ಎಂ.ಬಿ.ಪಾಟೀಲ್

ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ನ್ಯಾಯಾಲಯ ಆದೇಶದ ಪ್ರತಿ ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಮುಖ್ಯಮಂತ್ರಿ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ ವಿಚಾರವಾಗಿ ಮಾತನಾಡಿದ್ದು, ಮೊದಲು ಹೆಚ್​ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿಸಲಿ ಆಮೇಲೆ ನೋಡೋಣ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು