AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್

ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ವಿಚಾರವಾಗಿ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ನಮಗೆ ಭರವಸೆ ಇದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ. ಅವರು ಆರೋಪಮುಕ್ತರಾಗಿ ಹೊರ ಬರುತ್ತಾರೆ ಎಂದು ಸಿದ್ದರಾಮಯ್ಯ ಬೆನ್ನಿಗೆ ನಿಂತುಕೊಂಡಿದ್ದಾರೆ. ತನಿಖೆ ಆದ ಮೇಲೆ ಎಲ್ಲ ಗೊತ್ತಾಗುತ್ತೆ ಎಂದಿದ್ದಾರೆ.

ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್
ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ ಕೋರ್ಟ್​: ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಶಿವಕುಮಾರ್
Anil Kalkere
| Edited By: |

Updated on: Sep 25, 2024 | 6:16 PM

Share

ಬೆಂಗಳೂರು, ಸೆಪ್ಟೆಂಬರ್​ 25: ಮುಡಾ ಪ್ರಕರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿರಬಹುದು. ತನಿಖೆ ಆದ ಮೇಲೆ ಎಲ್ಲ ಗೊತ್ತಾಗುತ್ತೆ. ಆದರೆ ನಮಗೆ ಭರವಸೆ ಇದೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನಿಖೆಗೆ ಕೋರ್ಟ್ ಆದೇಶ ಕೊಟ್ಟಿದೆ, ತನಿಖೆಯಾಗಲಿ. ಸಿಎಂ ಸಿದ್ದರಾಮಯ್ಯ ಆರೋಪಮುಕ್ತರಾಗಿ ಹೊರ ಬರುತ್ತಾರೆ ಎಂದಿದ್ದಾರೆ.

ಯಾವ ಬ್ಲ್ಯಾಕ್​ಮಾರ್ಕ್ ಸಹ ಆಗಿಲ್ಲ. ಮಾರ್ಕೇ ಆಗಿಲ್ಲ, ಬ್ಲ್ಯಾಕ್​ಮಾರ್ಕ್​ ಎಲ್ಲಿಂದ‌ ಬರುತ್ತೆ. ಚುನಾವಣಾ ಪ್ರಚಾರ ವೇಳೆ ಪ್ರಧಾನಿ ನರೇಂದ್ರ ಮೋದಿ ಮುಡಾ ಪ್ರಸ್ತಾಪ ವಿಚಾರವಾಗಿ ಮಾತನಾಡಿದ್ದು, ರಾಜಕಾರಣ ಮಾಡುವವರು ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ಮುಂದಿನ ಹೋರಾಟದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು

ಸಿಎಂ ರಾಜೀನಾಮೆಗೆ ಬಿಜೆಪಿ ಒತ್ತಡ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಕೇಂದ್ರ‌ ಸಚಿವರೆಲ್ಲಾ ಅಧಿಕಾರದಲ್ಲಿ ಮುಂದು ಬರುತ್ತಿದ್ದಾರೆ. ಯಾರು ಅಂತ ಮುಂದೆ ಪಟ್ಟಿ ಹೇಳುತ್ತೇನೆ ಎಂದಿದ್ದಾರೆ.

ನಿನ್ನೆ ನಮಗೆ ಒಂದು ತರ ಜಯ ಸಿಕ್ಕಿದೆ ಎಂದ ಜಮೀರ್​

ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ವಿಚಾರವಾಗಿ ವಿಧಾನಸೌಧದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ನಿನ್ನೆ ನಮಗೆ ಒಂದು ತರ ಜಯ ಸಿಕ್ಕಿದೆ. ಪ್ರಾಸಿಕ್ಯೂಷನ್ ಅನುಮತಿ ರದ್ದು ಮಾಡಿ ಎಂದು ಕೇಳಿದ್ದೆವು. ಗವರ್ನರ್ ಪ್ರಾಸಿಕ್ಯೂಷನ್​ಗೆ ಕೊಟ್ಟಿಲ್ಲ ಎಂದು ಬಂದಿದೆ. ತನಿಖೆ ಆಗಲಿ, ಸತ್ಯಾಂಶ ಹೊರಗೆ ಬರುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಅರೆಸ್ಟ್ ಕೂಡಾ ಮಾಡಬಹುದು: ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ

ಬಿಜೆಪಿಗೆ ಸಿದ್ದರಾಮಯ್ಯನವರ ಜನಪ್ರಿಯತೆ ಸಹಿಸಲಾಗುತ್ತಿಲ್ಲ. ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ. 5 ವರ್ಷ ಸಿದ್ದರಾಮಯ್ಯರನ್ನು ಅಲ್ಲಾಡಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ಮೊದಲು ಹೆಚ್​ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿಸಲಿ: ಎಂ.ಬಿ.ಪಾಟೀಲ್

ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ನ್ಯಾಯಾಲಯ ಆದೇಶದ ಪ್ರತಿ ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಮುಖ್ಯಮಂತ್ರಿ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ ವಿಚಾರವಾಗಿ ಮಾತನಾಡಿದ್ದು, ಮೊದಲು ಹೆಚ್​ಡಿ ಕುಮಾರಸ್ವಾಮಿ ರಾಜೀನಾಮೆ ಕೊಡಿಸಲಿ ಆಮೇಲೆ ನೋಡೋಣ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್