ವಿಜಯೇಂದ್ರನಂಥ ಬೇಜವಾಬ್ದಾರಿ ವ್ಯಕ್ತಿ ಬಿಜೆಪಿ ರಾಜ್ಯಾಧ್ಯಕ್ಷನಾಗಿರೋದು ಬೇಕಿಲ್ಲ: ರಮೇಶ್ ಜಾರಕಿಹೊಳಿ
ರಾಜ್ಯದ ಅಸೆಂಬ್ಲಿ ಉಪ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನೂ ಸೋತಿದ್ದು ನಾಚಿಗ್ಗೇಡು, ಯತ್ನಾಳ್ ತಂಡದಿಂದಾಗೇ ಸೋಲುಂಟಾಯಿತು ಎಂದು ವಿಜಯೇಂದ್ರ ಹೇಳುತ್ತಾರೆ, ಮತ್ತೊಂದು ಕಡೆ ಅವರು ಉಪ ಚುನಾವಣೆಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿರಲಿಲ್ಲ ಎನ್ನುತ್ತಾರೆ, ಇದಕ್ಕಿಂತ ಬೇಜವಾಬ್ದಾರಿ ಹೇಳಿಕೆ ಬೇಕಾ? ಎಂದು ರಮೇಶ್ ಜಾರಕಿಹೊಳಿ ಕುಟುಕಿದರು
ಬೆಳಗಾವಿ: ವಿಜಯೇಂದ್ರನಂಥ ಒಬ್ಬ ಬೇಜವಾಬ್ದಾರಿ ವ್ಯಕ್ತಿ ಬಿಜೆಪಿ ರಾಜ್ಯಾಧ್ಯಕ್ಷನಾಗಿರೋದು ಬೇಕಿಲ್ಲ, ವಕ್ಫ್ ಬೋರ್ಡ್ ಮಾಡುತ್ತಿರುವ ಭೂಕಬಳಿಕೆ ಕೇವಲ ರಾಜ್ಯವಲ್ಲ ಇಡೀ ದೇಶಕ್ಕೆ ಮಾರಕವಾಗಿದೆ, ವಿಜಯೆಂದ್ರ ಎರಡು ಸಲ ವಕ್ಫ್ ವಿರುದ್ಧ ಹೋರಾಟಕ್ಕೆ ಕರೆ ನೀಡಿ ಬೇರೆಲ್ಲೋ ಹೋಗಿ ಕುಳಿತರು, ಯಡಿಯೂರಪ್ಪ ಒಬ್ಬ ಹುಟ್ಟು ಹೋರಾಟಗಾರ, ಆದರೆ ವಿಜಯೇಂದ್ರ ನೀಟಾಗಿ ಬಟ್ಟೆ ಧರಿಸಿ ಶೋಕಿ ಮಾಡಲು ಲಾಯಕ್ಕಾದ ಮನುಷ್ಯ, ಪಕ್ಷದ ಅಧ್ಯಕ್ಷನಾಗಲು ಅವರಿಗೆ ಪರಿಪಕ್ವವಾದ ಸಮಯ ಇದಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: 2028ರ ವಿಧಾನಸಭಾ ಚುನಾವಣೆ ವೇಳೆಗೆ ಬಂಡಾಯ ಏಳುತ್ತೇನೆಂದ ರಮೇಶ್ ಜಾರಕಿಹೊಳಿ: ಕಾರಣ ಇಲ್ಲಿದೆ
Follow Us
Latest Videos
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು

