ವಿಜಯೇಂದ್ರನಂಥ ಬೇಜವಾಬ್ದಾರಿ ವ್ಯಕ್ತಿ ಬಿಜೆಪಿ ರಾಜ್ಯಾಧ್ಯಕ್ಷನಾಗಿರೋದು ಬೇಕಿಲ್ಲ: ರಮೇಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Dec 02, 2024 | 3:19 PM

ರಾಜ್ಯದ ಅಸೆಂಬ್ಲಿ ಉಪ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನೂ ಸೋತಿದ್ದು ನಾಚಿಗ್ಗೇಡು, ಯತ್ನಾಳ್ ತಂಡದಿಂದಾಗೇ ಸೋಲುಂಟಾಯಿತು ಎಂದು ವಿಜಯೇಂದ್ರ ಹೇಳುತ್ತಾರೆ, ಮತ್ತೊಂದು ಕಡೆ ಅವರು ಉಪ ಚುನಾವಣೆಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿರಲಿಲ್ಲ ಎನ್ನುತ್ತಾರೆ, ಇದಕ್ಕಿಂತ ಬೇಜವಾಬ್ದಾರಿ ಹೇಳಿಕೆ ಬೇಕಾ? ಎಂದು ರಮೇಶ್ ಜಾರಕಿಹೊಳಿ ಕುಟುಕಿದರು

ಬೆಳಗಾವಿ: ವಿಜಯೇಂದ್ರನಂಥ ಒಬ್ಬ ಬೇಜವಾಬ್ದಾರಿ ವ್ಯಕ್ತಿ ಬಿಜೆಪಿ ರಾಜ್ಯಾಧ್ಯಕ್ಷನಾಗಿರೋದು ಬೇಕಿಲ್ಲ, ವಕ್ಫ್ ಬೋರ್ಡ್ ಮಾಡುತ್ತಿರುವ ಭೂಕಬಳಿಕೆ ಕೇವಲ ರಾಜ್ಯವಲ್ಲ ಇಡೀ ದೇಶಕ್ಕೆ ಮಾರಕವಾಗಿದೆ, ವಿಜಯೆಂದ್ರ ಎರಡು ಸಲ ವಕ್ಫ್ ವಿರುದ್ಧ ಹೋರಾಟಕ್ಕೆ ಕರೆ ನೀಡಿ ಬೇರೆಲ್ಲೋ ಹೋಗಿ ಕುಳಿತರು, ಯಡಿಯೂರಪ್ಪ ಒಬ್ಬ ಹುಟ್ಟು ಹೋರಾಟಗಾರ, ಆದರೆ ವಿಜಯೇಂದ್ರ ನೀಟಾಗಿ ಬಟ್ಟೆ ಧರಿಸಿ ಶೋಕಿ ಮಾಡಲು ಲಾಯಕ್ಕಾದ ಮನುಷ್ಯ, ಪಕ್ಷದ ಅಧ್ಯಕ್ಷನಾಗಲು ಅವರಿಗೆ ಪರಿಪಕ್ವವಾದ ಸಮಯ ಇದಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  2028ರ ವಿಧಾನಸಭಾ ಚುನಾವಣೆ ವೇಳೆಗೆ ಬಂಡಾಯ ಏಳುತ್ತೇನೆಂದ ರಮೇಶ್ ಜಾರಕಿಹೊಳಿ: ಕಾರಣ ಇಲ್ಲಿದೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.