ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಜನಕ್ಕೂ ಒಳ್ಳೆಯದು ನಮಗೂ ಒಳ್ಳೆಯದು: ಕೃಷ್ಣ ಭೈರೇಗೌಡ

ತನ್ನ ಕೆಲಸ ಬಿಟ್ಟು ಬೇರೆ ಯಾವುದೇ ವಿಷಯದ ಬಗ್ಗೆ ತಾನು ಮಾತಾಡಲ್ಲ ಎಂದ ಸಚಿವ ಕೃಷ್ಣ ಭೈರೇಗೌಡ, ಮಾಡಲು ಬೇಕಾದಷ್ಟು ಕೆಲಸವಿದೆ, ಜನರ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಶೇಕಡ 5ರಷ್ಟನ್ನು ಬಗೆಹರಿಸಿದರೂ ಕೆಲಸ ಮಾಡಿದ ಸಂತೃಪ್ತಿ ಸಿಗುತ್ತದೆ ಬದುಕು ಸಾರ್ಥಕ ಅನಿಸುತ್ತದೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಜನಕ್ಕೂ ಒಳ್ಳೆಯದು ನಮಗೂ ಒಳ್ಳೆಯದು: ಕೃಷ್ಣ ಭೈರೇಗೌಡ
|

Updated on: Jul 02, 2024 | 7:40 PM

ಮೈಸೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು ಮೈಸೂರಲ್ಲಿದ್ದರು. ಸಭೆಯೊಂದರಲ್ಲಿ ಭಾಗವಹಿಸುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ, ವಿನಾಕಾರಣ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸುತ್ತಿರುವ ಮತ್ತು ವಿರೋಧ ಪಕ್ಷದ ನಾಯಕರಿಗೆ ಟೀಕಿಸುವ ಅವಕಾಶ ಕಲ್ಪಿಸುತ್ತಿರುವ ತಮ್ಮ ಪಕ್ಷದ ನಾಯಕರಿಗೆ ಸಲಹೆ ಮತ್ತು ಕಿವಿಮಾತು ಹೇಳಿದರು. ಸರ್ಕಾರದ ಭಾಗವಾಗಿರುವವರೆಲ್ಲ ವೃಥಾ ಹೇಳಿಕೆಗಳನ್ನು ನೀಡದೆ ತಮಗಿರುವ ಜವಾಬ್ದಾರಿಗಳನ್ನು ನಿಭಾಯಿಸುತ್ತಾ ಜನಸೇವೆಯಲ್ಲಿ ತೊಡಗಿದರೆ ಅದು ತಮಗೂ ಒಳ್ಳೆಯದು ಮತ್ತು ಸರ್ಕಾರಕ್ಕೂ ಒಳ್ಳೆಯದು ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷ ಎಚ್ಚರಿಕೆ ನೀಡಿದ ನಂತರವೂ ಮಂತ್ರಿಗಳು ಮಾತಾಡುವುದನ್ನು ಮುಂದುವರಿಸಿದ್ದಾರಲ್ಲ? ಅಂತ ಕೇಳಿದ ಪ್ರಶ್ನೆಗೆ ಅವರು, ಪಕ್ಷದ ವರಿಷ್ಠರು ಎಲ್ಲವನ್ನು ಗಮನಿಸುತ್ತಿದ್ದಾರೆ, ಅವರು ತಾಳ್ಮೆಯಿಂದ ಎಲ್ಲ ಸಂಗತಿಗಳನ್ನು ಅವಲೋಕಿಸುತ್ತಿದ್ದಾರೆ, ಒಮ್ಮೆ ಅವರು ಕ್ರಮ ಜರುಗಿಸಲು ಅರಂಭಿಸಿದರೆ ಸುಖಾಸುಮ್ಮನೆ ಹೇಳಿಕೆಗಳನ್ನು ನೀಡುವವರು ಸಮಸ್ಯೆಗೀಡಾಗಲಿದ್ದಾರೆ ಎಂದು ಕೃಷ್ಣ ಭೈರೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬರ ಪರಿಹಾರ ನಿಧಿ ಬಿಡುಗಡೆ ವಿಳಂಬ; ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೀಡಿದ ಸೂಚನೆ ಬಗ್ಗೆ ಕೃಷ್ಣ ಭೈರೇಗೌಡ ವಿವರಣೆ   

Follow us
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ