AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರು ನವೆಂಬರ್ ತಿಂಗಳಿನಿಂದ ಪೂರೈಕೆ: ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀಡುವುದಾಗಿ ಭರವಸೆ ನೀಡಿದ್ದರು. ಮುಖ್ಯಮಂತ್ರಿಗಳು ನೀಡಿದ ಭರವಸೆ ನವೆಂಬರ್​​ನಲ್ಲಿ ಜಾರಿಗೆ ಬರಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.​

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರು ನವೆಂಬರ್ ತಿಂಗಳಿನಿಂದ ಪೂರೈಕೆ: ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Feb 06, 2024 | 11:35 AM

Share

ಮೈಸೂರು, ಫೆಬ್ರವರಿ 06: ಸರ್ಕಾರಿ ಶಾಲೆಗಳಿಗೆ (Government School) ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು (Free Electricity and water) ನವೆಂಬರ್​ನಿಂದ ಪೂರೈಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ (Madhu Bangarappa) ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ (Mysore) ಸುದ್ದಿಗೋಷ್ಠಿ ಮಾತನಾಡಿದ ಅವರು, ಇದರಿಂದ ಶಾಲೆಗಳಲ್ಲಿ ಮುಕ್ತವಾಗಿ ಎಲ್ಲಾ ವ್ಯವಸ್ಥೆ ಬಳಸಿಕೊಳ್ಳಬಹುದು. ಎಷ್ಟೋ ಶಾಲೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಉಚಿತವಾಗಿ ವಿದ್ಯುತ್​ ಹಾಗೂ ನೀರು ನೀಡಿದರೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಲಿದೆ. ಎಷ್ಟೋ ಶಾಲೆಗಳು ವಿದ್ಯುತ್ ಬಿಲ್‌ಗೆ ಹೆದರಿ ಕಂಪ್ಯೂಟರ್ ಬಳಸುತ್ತಿಲ್ಲ. ಇದೀಗ ಇದೆಲ್ಲಕ್ಕೂ ಸಹಾಯವಾಗಲಿದೆ. ಇನ್ನು ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಕೊಡುತ್ತೇವೆ. ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಹಾಕಿ ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ಟೆಸ್ಟ್ ಮಾಡಿಸುತ್ತಿದ್ದೇವೆ. ಮಕ್ಕಳ ಪೌಷ್ಟಿಕಾಂಶ ಜಾಸ್ತಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ನನ್ನ ಇಲಾಖೆ ತುಂಬಾ ದೊಡ್ಡದು. ಮುಖ್ಯಮಂತ್ರಿಗಳು ನನಗೆ ಬೇರೆ ಖಾತೆ ನಿಗದಿ ಮಾಡಿದ್ದರು. ಆದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಟಫ್ ಇಲಾಖೆ ಕೊಡಿ ಅಂತ ಹೇಳಿದರು. ಇದಕ್ಕೆ ರಣದೀಪ್​ ಸಿಂಗ್​ ಸುರ್ಜೇವಾಲ ಅವರೂ ಒಪ್ಪಿದರು. ಡಿಕೆ ಶಿವಕುಮಾರ್​ ಅವರು ನಮ್ಮ ತಂದೆಯವರಿಗೆ ಆತ್ಮೀಯರು. ನನ್ನ ಇಲಾಖೆ ಸವಾಲಿನ ಇಲಾಖೆ, ಸಮಸ್ಯೆಗಳೂ ಇವೆ ಎಂದರು.

ಇದನ್ನೂ ಓದಿ: ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋದ ಸರ್ಕಾರಿ ಶಾಲೆಯ ಹೆಡ್​ ಮಾಸ್ಟರ್, ವಿಡಿಯೋ ವೈರಲ್​​

ರಾಜ್ಯದಲ್ಲಿ ಸರ್ಕಾರಿ ಶಾಲೆಗಳೇ 58,000 ಶಾಲೆಗಳಿವೆ. ಒಟ್ಟು 1.20 ಕೋಟಿ ವಿದ್ಯಾರ್ಥಿಗಳು ಇದ್ದಾರೆ. ಶಿಕ್ಷಣದಲ್ಲಿ ಅವಕಾಶ ಬಹಳ ಮುಖ್ಯ. ಮೂರು ಪರೀಕ್ಷೆಗಳನ್ನು ಜಾರಿಗೆ ತಂದಿದ್ದೇವೆ. ಇದರಿಂದ ದ್ವಿತೀಯ ಪಿಯುಸಿಯಲ್ಲಿ ಮೂರನೇ ಪರೀಕ್ಷೆಗೆ 1.20 ಲಕ್ಷ ವಿದ್ಯಾರ್ಥಿಗಳು ಹಾಜರಾದರು. ಈ ಪೈಕಿ 42,000 ವಿದ್ಯಾರ್ಥಿಗಳು ಪಾಸಾದರು. ಎಸ್‌ಎಸ್‌ಎಲ್‌‌ಸಿಗೂ ಇದೇ ವ್ಯವಸ್ಥೆ ಜಾರಿಗೆ ತಂದಿದ್ದೇವೆ ಮಾರ್ಕ್ಸ್ ಕಾರ್ಡ್‌ನಲ್ಲಿ ಸಪ್ಲಿಮೆಂಟರಿ ಅನ್ನುವ ಪದ ಬಳಕೆ ನಿಷೇಧಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಫೆ.06) ಮೈಸೂರಿನಲ್ಲಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ‌ ಚಾಲನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತ್​ ಆವರಣದಲ್ಲಿ ಕಾರ್ಯಕ್ರಮ ನಡೆದಿದೆ.

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ​& ನೀರು ಘೋಷಿಸಿದ್ದ ಸಿದ್ದರಾಮಯ್ಯ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀಡುವುದಾಗಿ ಭರವಸೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆ ಬರುವ ನವೆಂಬರ್​ಗೆ ಈಡೇರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ