ಕೊವಿಡ್-19 ಪಿಡುಗಿನ ಎರಡನೇ ಅಲೆ ಕೊನೆಗೊಂಡ ನಂತರ ಮೂರನೇ ಅಲೆ ಎದುರಿಸಲು ಸಿದ್ಧರಾಗಿರಬೇಕು: ಡಾ ವಿವೇಕ್ ಜವಳಿ

ಸುಮಾರು 4 ತಿಂಗಳ ಕಾಲ (120 ದಿನ) ಕಾಡಲಿರುವ ಎರಡನೇ ಅಲೆಯು ಮೊದಲ ಅಲೆಗಿಂತ ವೇಗವಾಗಿ ತನ್ನ ಕದಂಬ ಬಾಹುಗಳನ್ನು ಚಾಚಿದೆ. ಕೊರೊನಾ ರೂಪಾಂತರಿ ವೈರಸ್​ ಭಾರತದಲ್ಲಿ ಮೊದಲು ಪ್ರವೇಶವಾಗಿದ್ದು ಮುಂಬೈ ಮಹಾನಗರಿಯಲ್ಲಿ ಎಂದು ಹೇಳಿರುವ ಡಾ ಜವಳಿ ಮುಂದಿನ 20-25 ದಿನಗಳಲ್ಲಿ ಇದರ ತೀವ್ರತೆ ಇಳಿಮುಖಗೊಳ್ಳುವ ನಿರೀಕ್ಷೆ ಇಟ್ಟುಕೊಳ್ಳಬಹುದು ಎನ್ನುತ್ತಾರೆ.

ಕೊವಿಡ್-19 ಪಿಡುಗಿನ ಎರಡನೇ ಅಲೆ ಕೊನೆಗೊಂಡ ನಂತರ ಮೂರನೇ ಅಲೆ ಎದುರಿಸಲು ಸಿದ್ಧರಾಗಿರಬೇಕು: ಡಾ ವಿವೇಕ್ ಜವಳಿ
ಡಾ ವಿವೇಕ್ ಜವಳಿ
Follow us
|

Updated on:Apr 23, 2021 | 11:05 PM

ಬೆಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ ವಿವೇಕ್ ಜವಳಿ ಅವರು ಮೂರನೇ ಅಲೆ ಬಗ್ಗೆ ಎಚ್ಚರಿಸಿದ್ದು ಜನರು ಎರಡನೇ ಅಲೆಯ ತೀವ್ರತೆ ಕೊನೆಗೊಂಡ ನಂತರ ಯಾವ ಕಾರಣಕ್ಕೂ ಯಾಮಾರಬಾರದೆಂದು ಹೇಳಿದ್ದಾರೆ. ಫೇಸ್​ಬುಕ್​ನಲ್ಲಿ ಅವರು ಒಂದು ಪೋಸ್ಟ್ ಮೂಲಕ ಮೂರನೇ ಅಲೆಯ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಎರಡನೇ ಅಲೆ ಭಾರತವನ್ನು ತಲ್ಲಣಿಸುವಂತೆ ಮಾಡಿದೆ ಎಂದು ಹೇಳಿರುವ ಅವರು, ದೇಶದ ಎಲ್ಲಾ ಮೂಲೆಗಳಲ್ಲಿ ಜನರು ಭೀತಿಗೊಳಗಾಗಿದ್ದಾರೆ ಎಂದಿದ್ದಾರೆ.

ಸುಮಾರು 4 ತಿಂಗಳ ಕಾಲ (120 ದಿನ) ಕಾಡಲಿರುವ ಎರಡನೇ ಅಲೆಯು ಮೊದಲ ಅಲೆಗಿಂತ ವೇಗವಾಗಿ ತನ್ನ ಕದಂಬ ಬಾಹುಗಳನ್ನು ಚಾಚಿದೆ. ಕೊರೊನಾ ರೂಪಾಂತರಿ ವೈರಸ್​ ಭಾರತದಲ್ಲಿ ಮೊದಲು ಪ್ರವೇಶವಾಗಿದ್ದು ಮುಂಬೈ ಮಹಾನಗರಿಯಲ್ಲಿ ಎಂದು ಹೇಳಿರುವ ಡಾ ಜವಳಿ ಮುಂದಿನ 20-25 ದಿನಗಳಲ್ಲಿ ಇದರ ತೀವ್ರತೆ ಇಳಿಮುಖಗೊಳ್ಳುವ ನಿರೀಕ್ಷೆ ಇಟ್ಟುಕೊಳ್ಳಬಹುದು ಎನ್ನುತ್ತಾರೆ.

ಮೂರನೇ ಅಲೆ ಬಗ್ಗೆ ಪ್ರಪಂಚದ ಎಲ್ಲ ಜನರಿಗೆ ಗೊತ್ತಿದೆ ಅದು ಎರಡನೆ ಅಲೆ ತಗ್ಗಿದ ಸುಮಾರು 100 ದಿಗಳ ನಂತರ ಆರಂಭವಾಗಲಿದೆ. ಹೀಗಾಗಿ ಅದನ್ನು ಎದುರಿಸಲು ನಾವು ಸನ್ನದ್ಧರಾಗಿರಬೇಕು, ಯಾವ ಕಾರಣಕ್ಕೂ ಪೀಡೆ ತೊಲಗಿತು ಎಂಬ ನಿರಾಳ ಭಾವ ತಾಳಬಾರದೆಂದು ಡಾ ಜವಳಿ ಹೇಳುತ್ತಾರೆ. ಮೂರನೇ ಅಲೆ ವಿರುದ್ಧ ನಾವು ಜಯಿಸಬೇಕಾದರೆ, ಮುಂದಿನ ಮೂರು ತಿಂಗಳ ಅವಧಿಯಲ್ಲಿ ಎಲ್ಲ ಭಾರತೀಯರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಕೊವಿಡ್-19 ಪಿಡುಗಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿ ಅವು ಅನೂಚಾನಾಗಿ ಜಾರಿಗೊಳ್ಳವುದನ್ನು ಖಾತ್ರಿ ಮಾಡಿಕೊಳ್ಳಬೇಕು. ಮೂರನೆ ಅಲೆಯ ಸಂದರ್ಭದಲ್ಲಿ ಜನರು ವರ್ತನೆ ಹೇಗಿಬೇಕೆನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಜನರಿಗೆ ರವಾನೆಯಾಗಬೇಕು ಎಂದು ಡಾ ಜವಳಿ ಹೇಳಿದ್ದಾರೆ. ಎರಡನೇ ಮತ್ತು ಮೂರನೇ ಅಲೆಗಳ ನಡುವಿನ ಸಮಯವನ್ನು ಸೋಂಕನ್ನು ಎದುರಿಸುವ ತಯಾರಿಗೋಸ್ಕರ ಬಳಸಿಕೊಳ್ಳುವ ಗಂಭೀರ ಪ್ರಯತ್ನ ಮಾಡಬೇಕು ಎಂದು ಅವರು ಹೇಳುತ್ತಾರೆ.

ಕೊವಿಡ್ ವಿರುದ್ಧ ನಾವೆಲ್ಲ ಸಮರದಲ್ಲಿ ಭಾಗಿಯಾಗಿದ್ದೇವೆ, ಹಾಗಾಗಿ ಈ ಹೋರಾಟದಲ್ಲಿ ಚಿಲ್ಲರೆ ರಾಜಕಾರಣಕ್ಕೆ, ದೋಷಾರೋಪಣೆಗಳಿಗೆ ಆಸ್ಪದ ನೀಡದೆ, ಎಲ್ಲರೂ ಒಗ್ಗಟ್ಟಿನಿಂದ, ಒಂದೇ ಮನಸ್ಸಿನಿಂದ ಹೋರಾಡಿದಲ್ಲಿ ಮಾತ್ರ ಅದು ಮಾಡಬಹುದಾದ ಹಾನಿಯನ್ನು ಕಡಿಮೆ ಮಾಡಬಹುದು ಎಂದು ಡಾ ಜವಳಿ ಹೇಳಿದ್ದಾರೆ. ಹಿಂದೆ ಆಗಬೇಕಿದ್ದೆಲ್ಲ ಆಗಿ ಹೋಗಿದೆ, ಮಾಡಬೇಕಾಗಿದ್ದನ್ನು ಮಾಡಿಯಾಗಿದೆ. ಆದರೆ ಆಗ ಕಲಿತಿರುವ ಪಾಠಗಳನ್ನು ನಾವು ಯಾವತ್ತೂ ಮರೆಯಬಾರದು ಎಂದು ಹೇಳುತ್ತಾ ಡಾ ವಿವೇಕ್ ಜವಳಿ ಅವರ ಸೈನ್ ಆಫ್​ ಮಾಡಿದ್ದಾರೆ.

ಇದನ್ನೂ ಓದಿ: Karnataka Weekend Lockdown: ವೀಕೆಂಡ್​ ಲಾಕ್​ಡೌನ್- ಏನಿರುತ್ತೆ ಮತ್ತು ಏನಿರಲ್ಲ, ಯಾರೆಲ್ಲ ಆಚೆ ಬರಬಹುದು, ಆಸ್ಪತ್ರೆಗಳಿಗೆ ಹೋಗಬಹುದಾ? ಇಲ್ಲಿದೆ ಮಾಹಿತಿ

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Published On - 10:40 pm, Fri, 23 April 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ