Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಠಿಣ ನಿಲುವು ಅನಿವಾರ್ಯ ಎಂದ್ರು ಆರ್.ಅಶೋಕ್​; ಲಾಕ್​ಡೌನ್​ ಬಗ್ಗೆಯೇ ಒಲವು?

ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಹಲವು ಸುತ್ತಿನ ಮಾತುಕತೆ ನಡೆಯುತ್ತಿದೆ. ಜನರ ಸಹಕಾರ ಬೇಕು ಎಂದು ಆರ್​.ಅಶೋಕ್ ಹೇಳಿದ್ದಾರೆ.

ಕಠಿಣ ನಿಲುವು ಅನಿವಾರ್ಯ ಎಂದ್ರು ಆರ್.ಅಶೋಕ್​; ಲಾಕ್​ಡೌನ್​ ಬಗ್ಗೆಯೇ ಒಲವು?
ಆರ್. ಅಶೋಕ್
Follow us
Lakshmi Hegde
|

Updated on: Apr 20, 2021 | 7:52 PM

ಬೆಂಗಳೂರು: ಸರ್ವಪಕ್ಷಗಳ ಸಭೆಯಲ್ಲಿ ಲಾಕ್​ಡೌನ್ ಬಗ್ಗೆ ಸಲಹೆ ಬಂದಿದೆ. ನಾವು ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ. ಸಿಎಂ ಯಡಿಯೂರಪ್ಪನವರ ಜತೆ ಚರ್ಚಿಸಿ ಮುಂದಿನ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್​ ಹೇಳಿದರು. ಸಭೆಯ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪನವರು ಮುಖ್ಯ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿದ ಬಳಿಕ ಮಾರ್ಗಸೂಚಿ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಹಲವು ಸುತ್ತಿನ ಮಾತುಕತೆ ನಡೆಯುತ್ತಿದೆ. ಜನರ ಸಹಕಾರ ಬೇಕು. ಇಂದಿನ ಸಭೆಯಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಲಾಕ್​ ಡೌನ್ ಸಲಹೆ ನೀಡಿದ್ದಾರೆ. ಇನ್ನು ಲಾಕ್​ಡೌನ್​ ಮಾತ್ರ ಪರಿಹಾರವಲ್ಲ, ತಜ್ಞರ ವರದಿ ಅನುಸರಿಸಿ ಎಂದು ಡಿ.ಕೆ.ಶಿವಕುಮಾರ್​, ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದಕ್ಕೂ ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸುತ್ತೇವೆ ಎಂದು ಸಚಿವರು ತಿಳಿಸಿದರು.

ನಮ್ಮ ನಿಲುವಿಗೆ ಪೂರಕವಾದ ಸಲಹೆ ನೀಡಿದ ವಿಪಕ್ಷ ನಾಯಕರಿಗೆ ಕೃತಜ್ಞತೆಗಳು ಎಂದ ಆರ್​.ಅಶೋಕ್ ಅವರು, ಸ್ಮಶಾನಗಳಲ್ಲಿ ಉಂಟಾಗುತ್ತಿರುವ ಅಡಚಣೆ, ಕ್ಯೂ ತಪ್ಪಿಸಲು ತಾತ್ಕಾಲಿಕ ಚಿತಾಗಾರಗಳ ನಿರ್ಮಾಣ ಮಾಡುವಂತೆ ಎಲ್ಲ ಮಹಾನಗರ ಪಾಲಿಕೆಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಮತ್ತೆ ಲಾಕ್​ಡೌನ್​ ಮಾಡೋದಾದ್ರೆ ಮಾಡಿ ಎಂದ ರಾಜ್ಯಪಾಲರು; ಸಚಿವರ ಜತೆ ಚರ್ಚೆ ಮಾಡ್ತೇವೆ ಎಂದ ಸಿಎಂ ಯಡಿಯೂರಪ್ಪ

ನನ್ನ ಮತ್ತು ಮಿಚೆಲ್​ ಒಬಾಮಾ ಸ್ನೇಹದ ಕುರಿತು ಸಾರ್ವಜನಿಕರ ಅಭಿಪ್ರಾಯ ಕೇಳಿ ಆಶ್ಚರ್ಯವಾಗಿದೆ: ಜಾರ್ಜ್​ ಬುಷ್​

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!