AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಠಿಣ ನಿಲುವು ಅನಿವಾರ್ಯ ಎಂದ್ರು ಆರ್.ಅಶೋಕ್​; ಲಾಕ್​ಡೌನ್​ ಬಗ್ಗೆಯೇ ಒಲವು?

ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಹಲವು ಸುತ್ತಿನ ಮಾತುಕತೆ ನಡೆಯುತ್ತಿದೆ. ಜನರ ಸಹಕಾರ ಬೇಕು ಎಂದು ಆರ್​.ಅಶೋಕ್ ಹೇಳಿದ್ದಾರೆ.

ಕಠಿಣ ನಿಲುವು ಅನಿವಾರ್ಯ ಎಂದ್ರು ಆರ್.ಅಶೋಕ್​; ಲಾಕ್​ಡೌನ್​ ಬಗ್ಗೆಯೇ ಒಲವು?
ಆರ್. ಅಶೋಕ್
Lakshmi Hegde
|

Updated on: Apr 20, 2021 | 7:52 PM

Share

ಬೆಂಗಳೂರು: ಸರ್ವಪಕ್ಷಗಳ ಸಭೆಯಲ್ಲಿ ಲಾಕ್​ಡೌನ್ ಬಗ್ಗೆ ಸಲಹೆ ಬಂದಿದೆ. ನಾವು ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದೆ. ಸಿಎಂ ಯಡಿಯೂರಪ್ಪನವರ ಜತೆ ಚರ್ಚಿಸಿ ಮುಂದಿನ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್​ ಹೇಳಿದರು. ಸಭೆಯ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪನವರು ಮುಖ್ಯ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿದ ಬಳಿಕ ಮಾರ್ಗಸೂಚಿ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಹಲವು ಸುತ್ತಿನ ಮಾತುಕತೆ ನಡೆಯುತ್ತಿದೆ. ಜನರ ಸಹಕಾರ ಬೇಕು. ಇಂದಿನ ಸಭೆಯಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಲಾಕ್​ ಡೌನ್ ಸಲಹೆ ನೀಡಿದ್ದಾರೆ. ಇನ್ನು ಲಾಕ್​ಡೌನ್​ ಮಾತ್ರ ಪರಿಹಾರವಲ್ಲ, ತಜ್ಞರ ವರದಿ ಅನುಸರಿಸಿ ಎಂದು ಡಿ.ಕೆ.ಶಿವಕುಮಾರ್​, ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದಕ್ಕೂ ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸುತ್ತೇವೆ ಎಂದು ಸಚಿವರು ತಿಳಿಸಿದರು.

ನಮ್ಮ ನಿಲುವಿಗೆ ಪೂರಕವಾದ ಸಲಹೆ ನೀಡಿದ ವಿಪಕ್ಷ ನಾಯಕರಿಗೆ ಕೃತಜ್ಞತೆಗಳು ಎಂದ ಆರ್​.ಅಶೋಕ್ ಅವರು, ಸ್ಮಶಾನಗಳಲ್ಲಿ ಉಂಟಾಗುತ್ತಿರುವ ಅಡಚಣೆ, ಕ್ಯೂ ತಪ್ಪಿಸಲು ತಾತ್ಕಾಲಿಕ ಚಿತಾಗಾರಗಳ ನಿರ್ಮಾಣ ಮಾಡುವಂತೆ ಎಲ್ಲ ಮಹಾನಗರ ಪಾಲಿಕೆಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಮತ್ತೆ ಲಾಕ್​ಡೌನ್​ ಮಾಡೋದಾದ್ರೆ ಮಾಡಿ ಎಂದ ರಾಜ್ಯಪಾಲರು; ಸಚಿವರ ಜತೆ ಚರ್ಚೆ ಮಾಡ್ತೇವೆ ಎಂದ ಸಿಎಂ ಯಡಿಯೂರಪ್ಪ

ನನ್ನ ಮತ್ತು ಮಿಚೆಲ್​ ಒಬಾಮಾ ಸ್ನೇಹದ ಕುರಿತು ಸಾರ್ವಜನಿಕರ ಅಭಿಪ್ರಾಯ ಕೇಳಿ ಆಶ್ಚರ್ಯವಾಗಿದೆ: ಜಾರ್ಜ್​ ಬುಷ್​

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ