AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನದಲ್ಲಿ ಕನ್ನಡ ಧ್ವಜ ಹಾರಿಸುತ್ತೇವೆ, ಈದ್ಗಾ ಮೈದಾನ ಬಗ್ಗೆ ಮಾತಾಡಲು SDPI ಯಾರು? -ಸಚಿವ ಆರ್. ಅಶೋಕ್

ಈದ್ಗಾ ಮೈದಾನದ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ನಮ್ಮದು ಸಂವಿಧಾನದ ಅಡಿಯಲ್ಲಿ ಬಂದ ಸರ್ಕಾರ. ಯಾಕೆ 75 ವರ್ಷ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ. ನಾಚಿಕೆ ಅಗಾಲ್ವ. ಕನ್ನಡದ ಧ್ವಜ ಕೂಡ ಹಾರಿಸುತ್ತೇವೆ ಎಂದರು.

ಈದ್ಗಾ ಮೈದಾನದಲ್ಲಿ ಕನ್ನಡ ಧ್ವಜ ಹಾರಿಸುತ್ತೇವೆ, ಈದ್ಗಾ ಮೈದಾನ ಬಗ್ಗೆ ಮಾತಾಡಲು SDPI ಯಾರು? -ಸಚಿವ ಆರ್. ಅಶೋಕ್
ಸಚಿವ ಆರ್ ಅಶೋಕ
TV9 Web
| Edited By: ಆಯೇಷಾ ಬಾನು|

Updated on:Aug 29, 2022 | 8:30 PM

Share

ರಾಮನಗರ: ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಈದ್ಗಾ ಮೈದಾನದಲ್ಲಿ ಕನ್ನಡದ ಧ್ವಜವನ್ನು(Kannada Flag) ಕೂಡ ಹಾರಿಸುತ್ತೇವೆ ಎಂದು ರಾಮನಗರದಲ್ಲಿ ಕಂದಾಯ ಸಚಿವ ಆರ್​.ಅಶೋಕ್(R Ashok) ಹೇಳಿಕೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಬೆಂಗಳೂರಿನ ಈದ್ಗಾ ಮೈದಾನ ಕಂದಾಯ ಇಲಾಖೆಯದ್ದು ಕೋರ್ಟ್ ಕೂಡ ಸೂಚನೆ ಕೊಟ್ಟಿದ್ದೆ. ಅರ್ಜಿ ಹಾಕಿರುವವರ ಜೊತೆ ಮೀಟಿಂಗ್ ಮಾಡಲಾಗಿದೆ. ನಮಾಜ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲಿ ಅರಳಿಮರ, ಶೌಚಾಲಯ‌ ಇದೆ. ಚಾಮರಾಜಪೇಟೆಯ ಈದ್ಗಾ ಮೈದಾನ 7 ಕೋಟಿ ಕನ್ನಡಿಗರ ಸ್ವತ್ತು. ಈದ್ಗಾ ಮೈದಾನ ಬಗ್ಗೆ ಮಾತಾಡಲು ಎಸ್​ಡಿಪಿಐನವರು ಯಾರು? ಆಗಸ್ಟ್ 31ರೊಳಗೆ ರಾಜ್ಯ ಸರ್ಕಾರದ ನಿಲುವು ತಿಳಿಸಲಾಗುವುದು. ಈದ್ಗಾ ಮೈದಾನದಲ್ಲಿ ಕನ್ನಡದ ಧ್ವಜವನ್ನು ಕೂಡ ಹಾರಿಸುತ್ತೇವೆ ಎಂದು ರಾಮನಗರದಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಗುಡುಗಿದ್ದಾರೆ.

ಈದ್ಗಾ ಮೈದಾನದ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ನಮ್ಮದು ಸಂವಿಧಾನದ ಅಡಿಯಲ್ಲಿ ಬಂದ ಸರ್ಕಾರ. ಯಾಕೆ 75 ವರ್ಷ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ. ನಾಚಿಕೆ ಅಗಾಲ್ವ. ಕನ್ನಡದ ಧ್ವಜ ಕೂಡ ಹಾರಿಸುತ್ತೇವೆ ಎಂದರು.

ರಾಜ್ಯದಲ್ಲಿ ಹಿಂದೂಗಳಾಗಲಿ, ಮುಸ್ಲಿಮುರಾಗಲಿ ತೀರ್ಪು ಗೌರವಿಸಬೇಕು

ಇನ್ನು ಇದೇ ವಿಚಾರವಾಗಿ ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಕ್ಸೂದ್ ಇಮ್ರಾನ್ ಮಾತನಾಡಿದ್ದಾರೆ. ಈದ್ಗಾ ಮೈದಾನ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್​ ತೀರ್ಪು ಬರಲಿದೆ. ಸುಪ್ರೀಂಕೋರ್ಟ್​ನಿಂದ ತೀರ್ಪು ಏನೇ ಬಂದರೂ ಸ್ವಾಗತಿಸೋಣ. ಈದ್ಗಾ ಮೈದಾನ ವಿವಾದ ನೂರಾರು ವರ್ಷಗಳಿಂದಲೂ ಇದೆ. ಈದ್ಗಾ ಮೈದಾನದ ಬಗ್ಗೆ ಸುಪ್ರೀಂಕೋರ್ಟ್​ನಿಂದ ನಾಳೆ ತೀರ್ಪು ಬರಲಿದೆ. ರಾಜ್ಯದಲ್ಲಿ ಹಿಂದೂಗಳಾಗಲಿ, ಮುಸ್ಲಿಮರಾಗಲಿ ತೀರ್ಪು ಗೌರವಿಸಬೇಕು. ಈ ಹಿಂದೆ ಸುಪ್ರೀಂಕೋರ್ಟ್​ ಈದ್ಗಾ ಮೈದಾನವೆಂದು ತೀರ್ಪು ನೀಡಿತ್ತು. ಆದ್ದರಿಂದ ಕಂದಾಯ ಸಚಿವರಿಗೆ ಮತ್ತೊಮ್ಮೆ ಮನವಿ ಮಾಡುತ್ತಿದ್ದೇವೆ. ಸುಪ್ರೀಂಕೋರ್ಟ್​ ಮೊದಲು ನೀಡಿದ್ದ ತೀರ್ಪನ್ನು ಗೌರವಿಸಿ ಎಂದು ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಕ್ಸೂದ್ ಇಮ್ರಾನ್​ ಮನವಿ ಮಾಡಿದ್ದಾರೆ.

Published On - 8:20 pm, Mon, 29 August 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ