AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನದಲ್ಲಿ ಕನ್ನಡ ಧ್ವಜ ಹಾರಿಸುತ್ತೇವೆ, ಈದ್ಗಾ ಮೈದಾನ ಬಗ್ಗೆ ಮಾತಾಡಲು SDPI ಯಾರು? -ಸಚಿವ ಆರ್. ಅಶೋಕ್

ಈದ್ಗಾ ಮೈದಾನದ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ನಮ್ಮದು ಸಂವಿಧಾನದ ಅಡಿಯಲ್ಲಿ ಬಂದ ಸರ್ಕಾರ. ಯಾಕೆ 75 ವರ್ಷ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ. ನಾಚಿಕೆ ಅಗಾಲ್ವ. ಕನ್ನಡದ ಧ್ವಜ ಕೂಡ ಹಾರಿಸುತ್ತೇವೆ ಎಂದರು.

ಈದ್ಗಾ ಮೈದಾನದಲ್ಲಿ ಕನ್ನಡ ಧ್ವಜ ಹಾರಿಸುತ್ತೇವೆ, ಈದ್ಗಾ ಮೈದಾನ ಬಗ್ಗೆ ಮಾತಾಡಲು SDPI ಯಾರು? -ಸಚಿವ ಆರ್. ಅಶೋಕ್
ಸಚಿವ ಆರ್ ಅಶೋಕ
TV9 Web
| Edited By: |

Updated on:Aug 29, 2022 | 8:30 PM

Share

ರಾಮನಗರ: ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಈದ್ಗಾ ಮೈದಾನದಲ್ಲಿ ಕನ್ನಡದ ಧ್ವಜವನ್ನು(Kannada Flag) ಕೂಡ ಹಾರಿಸುತ್ತೇವೆ ಎಂದು ರಾಮನಗರದಲ್ಲಿ ಕಂದಾಯ ಸಚಿವ ಆರ್​.ಅಶೋಕ್(R Ashok) ಹೇಳಿಕೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಬೆಂಗಳೂರಿನ ಈದ್ಗಾ ಮೈದಾನ ಕಂದಾಯ ಇಲಾಖೆಯದ್ದು ಕೋರ್ಟ್ ಕೂಡ ಸೂಚನೆ ಕೊಟ್ಟಿದ್ದೆ. ಅರ್ಜಿ ಹಾಕಿರುವವರ ಜೊತೆ ಮೀಟಿಂಗ್ ಮಾಡಲಾಗಿದೆ. ನಮಾಜ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲಿ ಅರಳಿಮರ, ಶೌಚಾಲಯ‌ ಇದೆ. ಚಾಮರಾಜಪೇಟೆಯ ಈದ್ಗಾ ಮೈದಾನ 7 ಕೋಟಿ ಕನ್ನಡಿಗರ ಸ್ವತ್ತು. ಈದ್ಗಾ ಮೈದಾನ ಬಗ್ಗೆ ಮಾತಾಡಲು ಎಸ್​ಡಿಪಿಐನವರು ಯಾರು? ಆಗಸ್ಟ್ 31ರೊಳಗೆ ರಾಜ್ಯ ಸರ್ಕಾರದ ನಿಲುವು ತಿಳಿಸಲಾಗುವುದು. ಈದ್ಗಾ ಮೈದಾನದಲ್ಲಿ ಕನ್ನಡದ ಧ್ವಜವನ್ನು ಕೂಡ ಹಾರಿಸುತ್ತೇವೆ ಎಂದು ರಾಮನಗರದಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಗುಡುಗಿದ್ದಾರೆ.

ಈದ್ಗಾ ಮೈದಾನದ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ನಮ್ಮದು ಸಂವಿಧಾನದ ಅಡಿಯಲ್ಲಿ ಬಂದ ಸರ್ಕಾರ. ಯಾಕೆ 75 ವರ್ಷ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ. ನಾಚಿಕೆ ಅಗಾಲ್ವ. ಕನ್ನಡದ ಧ್ವಜ ಕೂಡ ಹಾರಿಸುತ್ತೇವೆ ಎಂದರು.

ರಾಜ್ಯದಲ್ಲಿ ಹಿಂದೂಗಳಾಗಲಿ, ಮುಸ್ಲಿಮುರಾಗಲಿ ತೀರ್ಪು ಗೌರವಿಸಬೇಕು

ಇನ್ನು ಇದೇ ವಿಚಾರವಾಗಿ ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಕ್ಸೂದ್ ಇಮ್ರಾನ್ ಮಾತನಾಡಿದ್ದಾರೆ. ಈದ್ಗಾ ಮೈದಾನ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್​ ತೀರ್ಪು ಬರಲಿದೆ. ಸುಪ್ರೀಂಕೋರ್ಟ್​ನಿಂದ ತೀರ್ಪು ಏನೇ ಬಂದರೂ ಸ್ವಾಗತಿಸೋಣ. ಈದ್ಗಾ ಮೈದಾನ ವಿವಾದ ನೂರಾರು ವರ್ಷಗಳಿಂದಲೂ ಇದೆ. ಈದ್ಗಾ ಮೈದಾನದ ಬಗ್ಗೆ ಸುಪ್ರೀಂಕೋರ್ಟ್​ನಿಂದ ನಾಳೆ ತೀರ್ಪು ಬರಲಿದೆ. ರಾಜ್ಯದಲ್ಲಿ ಹಿಂದೂಗಳಾಗಲಿ, ಮುಸ್ಲಿಮರಾಗಲಿ ತೀರ್ಪು ಗೌರವಿಸಬೇಕು. ಈ ಹಿಂದೆ ಸುಪ್ರೀಂಕೋರ್ಟ್​ ಈದ್ಗಾ ಮೈದಾನವೆಂದು ತೀರ್ಪು ನೀಡಿತ್ತು. ಆದ್ದರಿಂದ ಕಂದಾಯ ಸಚಿವರಿಗೆ ಮತ್ತೊಮ್ಮೆ ಮನವಿ ಮಾಡುತ್ತಿದ್ದೇವೆ. ಸುಪ್ರೀಂಕೋರ್ಟ್​ ಮೊದಲು ನೀಡಿದ್ದ ತೀರ್ಪನ್ನು ಗೌರವಿಸಿ ಎಂದು ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಕ್ಸೂದ್ ಇಮ್ರಾನ್​ ಮನವಿ ಮಾಡಿದ್ದಾರೆ.

Published On - 8:20 pm, Mon, 29 August 22

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?