AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ: ಡಿಕೆ ಸುರೇಶ್

ಇವತ್ತು ಬೆಳಗ್ಗೆಯಿಂದ ಸಹೋದರ ಡಿ ಕೆ ಶಿವಕುಮಾರ್, ಮತ್ತು ತಮ್ಮ ನಿವಾಸ ಸೇರಿ 14 ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಒಂದು ರಾಜಕೀಯ ಷಡ್ಯಂತ್ರ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಟ್ವೀಟ್ ಮೂಲಕ ಹೇಳಿದ್ದಾರೆ. ‘‘ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ,’’ ಎಂದು ಸುರೇಶ್ ಟ್ವೀಟ್ ಮಾಡಿದ್ದಾರೆ. ಯಾವುದೇ […]

ಇಂಥ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ: ಡಿಕೆ ಸುರೇಶ್
ಅರುಣ್​ ಕುಮಾರ್​ ಬೆಳ್ಳಿ
|

Updated on:Oct 05, 2020 | 5:37 PM

Share

ಇವತ್ತು ಬೆಳಗ್ಗೆಯಿಂದ ಸಹೋದರ ಡಿ ಕೆ ಶಿವಕುಮಾರ್, ಮತ್ತು ತಮ್ಮ ನಿವಾಸ ಸೇರಿ 14 ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಒಂದು ರಾಜಕೀಯ ಷಡ್ಯಂತ್ರ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಟ್ವೀಟ್ ಮೂಲಕ ಹೇಳಿದ್ದಾರೆ.

‘‘ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ,’’ ಎಂದು ಸುರೇಶ್ ಟ್ವೀಟ್ ಮಾಡಿದ್ದಾರೆ.

ಯಾವುದೇ ರಾಜಕೀಯ ಸಂಕಷ್ಟವನ್ನು ರಾಜಕೀಯವಾಗಿ ಎದುರಿಸಲು ತಾವು ಸಿದ್ಧರಿರುವುದಾಗಿ ಸುರೇಶ್ ತಮ್ಮ ಎರಡನೇ ಟ್ವೀಟ್​ನಲ್ಲಿ ಹೇಳಿದ್ದಾರೆ.

‘‘ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ. ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ,’’ ಎಂದು ಸುರೇಶ್ ಟ್ವೀಟ್ ಮಾಡಿದ್ದಾರೆ.

ತಮ್ಮ ಮೂರನೇ ಟ್ವೀಟ್​ನಲ್ಲಿ ಸುರೇಶ್, ತಮ್ಮ ಬೆಂಬಲಿಗರಿಗೆ ವಿಚಲಿತರಾಗದಂತೆ ಮನವಿ ಮಾಡಿದ್ದಾರೆ. ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೆಯೇ ಇರಲಿ, ಎಂದಿದ್ದಾರೆ.

Published On - 5:35 pm, Mon, 5 October 20

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ