AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ

ಕರ್ನಾಟಕದಾದ್ಯಂತ ಚುರುಕು ಪಡೆದ ಮುಂಗಾರು ಮಳೆ ಇನ್ನು ಕೆಲವು ದಿನಗಳ ಕಾಲ ಇದೇ ರೀತಿ ಮುಂದುವರಿಯಲಿದೆ. ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ರಾಜ್ಯದ ಯಾವೆಲ್ಲಾ ಭಾಗದಲ್ಲಿ ಮಳೆಯಾಗಲಿದೆ ಎನ್ನುವ ಹವಾಮಾನ ವರದಿ ಇಲ್ಲಿದೆ.

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ
Karnataka Weather
ರಮೇಶ್ ಬಿ. ಜವಳಗೇರಾ
|

Updated on: Jun 14, 2026 | 6:38 PM

Share

ಬೆಂಗಳೂರು, (ಜೂನ್ 14): ಕರ್ನಾಟಕದಲ್ಲಿ (Karnataka) ಮುಂದಿನ ಇಂದಿನಿಂದ ಅಂದರೆ ಜೂನ್ 14ರಿಂದ ಐದು ದಿನಗಳವರೆಗೆ ಕೆಲವೆಡೆ ವರುಣಾರ್ಭಟ (Monson Rain)) ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಹೌದು…ಉತ್ತರ ಒಳನಾಡಿನಲ್ಲಿ ಪ್ರಸ್ತುತ ಒಣ ಹವೆ ಇದ್ದರೂ, ಮುಂದಿನ ದಿನಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಉತ್ತರ ಒಳನಾಡಲ್ಲಿ ಜೂನ್ 14 ರಿಂದ 18 ರವರೆಗೆ ಕೆಲವು ಕಡೆಗಳಲ್ಲಿ ಶೇ 50 ರಷ್ಟು ಕಡೆ, ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ಕೊಪ್ಪಳ, ಯಾದಗಿರಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ದಾರವಾಡ, ಗದಗ, ಹಾವೇರಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ. ಉಳಿದಂತೆ ಮೈಸೂರು, ಕೊಡಗು, ಹಾಸನಕ್ಕೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿಯ 2 ಜಿಲ್ಲೆಗಳಲ್ಲಿ ಮಾತ್ರ ಶುಕ್ರವಾರದವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಬೆಂಗಳೂರು ಹವಾಮಾನ ವರದಿ

ಇನ್ನು ಮುಂದಿನ 3 ದಿನಗಳ ಬೆಂಗಳೂರಿನ ಹವಾಮಾನ ವರದಿಯನ್ನು ನೋಡುವುದಾರೆ, ಜೂನ್ 15 (ಸೋಮವಾರ): ಭಾಗಶಃ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 32°C (90°F) ಆಸುಪಾಸಿನಲ್ಲಿರಲಿದೆ.ಜೂನ್ 16 (ಮಂಗಳವಾರ): ಮೋಡ ಮತ್ತು ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ತುಂತುರು ಮಳೆಯಾಗುವ 61% ಸಂಭವವಿದೆ. ಇನ್ನು ಜೂನ್ 17 (ಬುಧವಾರ): ಗರಿಷ್ಠ ತಾಪಮಾನ 31°C (87°F) ಇರಲಿದ್ದು, ಸಂಜೆ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More