AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮೈಕೊರೆಯುವ ಚಳಿ ವಾತಾವರಣ.. ಕೂಲ್ ವೆದರ್ ಬಗ್ಗೆ ನಿರ್ಲಕ್ಷ್ಯ ಮಾಡಿದ್ರೆ ಡೇಂಜರ್, ಹವಾಮಾನ ಇಲಾಖೆ ಎಚ್ಚರಿಕೆ

ಸಿಲಿಕಾನ್ ಸಿಟಿಯಲ್ಲಿ ಮೈಕೊರೆಯೋ ಚಳಿ ಶುರುವಾಗಿದೆ. ಬೆಳಗ್ಗೆ ಬಿಸಿಲಿದ್ರೂ ಚಳಿಯ ವಾತಾವರಣ. ಕೊರೊನಾ ಅಟ್ಟಹಾಸದ ನಡುವೆ ಚಳಿಯ ಸಮರ ಶುರುವಾಗಿದೆ. ಬೆಂಗಳೂರಿನ ಜನ ಈ ಚಳಿ ಬಗ್ಗೆ ನಿರ್ಲಕ್ಷ್ಯ ಮಾಡಿದ್ರೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಅಂತಿದೆ ಹವಾಮಾನ ಇಲಾಖೆ.

ಬೆಂಗಳೂರಲ್ಲಿ ಮೈಕೊರೆಯುವ ಚಳಿ ವಾತಾವರಣ.. ಕೂಲ್ ವೆದರ್ ಬಗ್ಗೆ ನಿರ್ಲಕ್ಷ್ಯ ಮಾಡಿದ್ರೆ ಡೇಂಜರ್, ಹವಾಮಾನ ಇಲಾಖೆ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Jan 05, 2021 | 6:33 AM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನಗಳಿಂದ ಕ್ಲೈಮೆಟ್ ಚೇಂಜ್ ಆಗಿದೆ. ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನೇ ದಿನೇ ಹೆಚ್ಚಾಗ್ತಿದೆ. ಬೆಂಗಳೂರು ಸೇರಿದಂತೆ ಬೀದರ್, ಕಲಬುರ್ಗಿ, ರಾಯಚೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲೂ 10 ಡಿಗ್ರಿ ಕನಿಷ್ಟ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಅಂತಿದ್ದಾರೆ ಹವಾಮಾನ ಇಲಾಖೆ ಅಧಿಕಾರಿಗಳು.

ಅಂದಹಾಗೆ ಕಳೆದ 20 ದಿನದಿಂದ ರಾತ್ರಿ ವೇಳೆ ಅತಿಯಾದ ಚಳಿಯಾಗ್ತಿದ್ದು, ಬೆಳಗ್ಗೆ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗ್ತಿದೆ. ಇದಕ್ಕೆಲ್ಲಾ ಕಾರಣ ಮಹಾರಾಷ್ಟ್ರದಲ್ಲಿ ಬೀಸುತ್ತಿರುವ ಗಾಳಿಯ ಪ್ರಭಾವ ಅಂತಿದೆ ಹವಾಮಾನ ಇಲಾಖೆ.

ಕಳೆದ‌ ವರ್ಷ ಹೇಳಿಕೊಳ್ಳುವಷ್ಟು ಚಳಿ ಇರಲಿಲ್ಲ. ಆದರೆ ಈ ಬಾರಿ ಲ್ಯಾಬಿನೋ ಕಂಡೀಷನ್‌ನಿಂದಾಗಿ ಅತಿ ಹೆಚ್ಚಿನ ಚಳಿಯಾಗುತ್ತಿದೆ. ಫೆಸಿಫಿಕ್ ಮಹಾಸಾಗರ ಮೇಲ್ಮೈ ನೀರು ತಂಪಾಗುವಿಕೆ ಚಳಿಗೆ ಪ್ರಮುಖ ಕಾರಣವಾಗಿದೆ.‌ ಉತ್ತರ ಹಾಗೂ ಈಶಾನ್ಯದಿಂದ ಬರುವ ಒಣಹವೆಯಿಂದಾಗಿ ಚಳಿ ಪ್ರಮಾಣ ಹೆಚ್ಚಾಗ್ತಿದೆ. ಸಂಕ್ರಾಂತಿ ಮುಗಿಯುವವರೆಗೂ ಹೆಚ್ಚಿನ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೆಚ್ಚುತ್ತಿರುವ ಚಳಿಯಿಂದಾಗಿ ಮಕ್ಕಳು, ಬಾಣಂತಿಯರು, ವೃದ್ಧರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕೇರ್ ತಗೋಬೇಕು. ಬೆಚ್ಚಗಿನ ಉಡುಗೆ ತೊಡುವುದರಿಂದ ಸಾಧ್ಯವಾದಷ್ಟು ಚಳಿಯಿಂದ ರಕ್ಷಣೆ ಪಡೆಯಬಹುದು. ಆರೋಗ್ಯ ಕಾಪಾಡಿಕೊಳ್ಳಬಹುದು ಅಂತಾರೆ ವೈದ್ಯರು

‘ಹೆಚ್ಚು ಎಚ್ಚರಿಕೆ ಇರಲಿ’ ಈ ಬಾರಿ ಹೆಚ್ಚು ಚಳಿ ಇದೆ. ಚಳಿ ಮಧ್ಯೆ ರೂಪಾಂತರಿ ಕೊರೊನಾದ ಆರ್ಭಟ ಇದೆ. ಹೀಗಾಗಿ ಎಲ್ರೂ ಆದಷ್ಟು ಎಚ್ಚರಿಕೆಯಿಂದ ಇರಬೇಕು. ಬೆಚ್ಚಗಿನ ಉಡುಗೆ ಕಡ್ಡಾಯವಾಗಿ ಧರಿಸಿ. ಎಲ್ಲದಕ್ಕಿಂತ ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆ ಇರೋ ರೋಗಿಗಳು ಹೆಚ್ಚು ಎಚ್ಚರಿಕೆಯಿಂದ ಇರೋದು ಸೂಕ್ತ.

ಒಟ್ನಲ್ಲಿ ಸಂಕ್ರಾಂತಿವರೆಗೆ ಚಳಿ ಹೀಗೆ ಮುಂದುವರಿಯಲಿದೆ. ಸಿಲಿಕಾನ್ ಸಿಟಿ ಮಂದಿ ಆದಷ್ಟು ಕೇರ್ ಫುಲ್ಲಾಗಿರಿ. ಉಲ್ಲನ್ ಮಿಶ್ರಿತ ಉಡುಗೆಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಮಕ್ಕಳು ಹಾಗೂ ಹಿರಿಯರ ಬಗ್ಗೆ ಹೆಚ್ಚು ಕಾಳಜಿ ವಹಿಸೋದನ್ನ ಮರಿಬೇಡಿ.

ಬೆಂಗಳೂರು ಕೂಲ್​ಕೂಲು, ನಾಳೆ-ನಾಡಿದ್ದು ಹೇಗಿರುತ್ತೆ ಹವಾಮಾನ

Published On - 6:32 am, Tue, 5 January 21

ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?