AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರ್ನಾಟಕದಲ್ಲಿ ಇಂದು ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ

Karnataka weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಅಕ್ಟೋಬರ್ 17ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.

Karnataka Weather Today: ಕರ್ನಾಟಕದಲ್ಲಿ ಇಂದು ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 16, 2021 | 9:50 AM

Share

ಬೆಂಗಳೂರು: ನಗರದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಳೆ ತುಸು ಕಡಿಮೆಯಾಗಿದೆ. ಹವಾಮಾನ ವರದಿಯ ಪ್ರಕಾರ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 17ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೋಲಾರ, ತುಮಕೂರು ಸೇರಿದಂತೆ ರಾಜ್ಯದ ದಕ್ಷಿಣ ಭಾಗದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಮಧ್ಯಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚನೆ ನಿಡಿದೆ. ರಾಜ್ಯದ ಉತ್ತರ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ. ಇಂದು ರಾಜ್ಯದಲ್ಲಿ ವಾತಾವರಣವು ಸುಮಾರು 19 ಡಿಗ್ರಿಯಿಂದ 30 ಡಿಗ್ರಿ ನಡುವೆ ಇರಲಿದೆ ಎಂದು ಅಂದಾಜಿಸಲಾಗಿದೆ.

ಜವಾದ್ ಚಂಡಮಾರುತ ಏಳುವ ಸಾಧ್ಯತೆ ಇರುವುದರಿಂದ ದಕ್ಷಿಣ ಭಾರತದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 17ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕಳೆದ ತಿಂಗಳ ಅಂತ್ಯದಿಂದಲೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 17ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಮಹಾರಾಷ್ಟ್ರದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:

Gold Price Today: ಮತ್ತೆ ಹೆಚ್ಚಾಯ್ತು ಚಿನ್ನ, ಬೆಳಿ ದರ! ಬೆಂಗಳೂರಿನಲ್ಲಿ ಎಷ್ಟಿದೆ ನೋಡಿ

Petrol Price Today: ಇಂದು ಪೆಟ್ರೋಲ್ ಹಾಗೂ ಡೀಸೆಲ್​ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್