AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಇಂದು ಹಗುರ ಮಳೆ ಸಾಧ್ಯತೆ

Rain Updates: ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

Weather Today: ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಇಂದು ಹಗುರ ಮಳೆ ಸಾಧ್ಯತೆ
ಮಳೆ
TV9 Web
| Edited By: |

Updated on: Jan 28, 2022 | 6:09 AM

Share

ಬೆಂಗಳೂರು: ಕರ್ನಾಟಕದ (Karnataka Rain) ಬಯಲು ಸೀಮೆಯ ಕೆಲವು ಜಿಲ್ಲೆಗಳಲ್ಲಿ ಇನ್ನೂ ಹಗುರ ಮಳೆಯಾಗುತ್ತಿದೆ. ಗುರುವಾರ ಕೋಲಾರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅಕಾಲಿಕವಾಗಿ ತುಂತುರು ಮಳೆಯಾಗಿತ್ತು. ಕೋಲಾರ, ಮಾಲೂರು, ಬಂಗಾರಪೇಟೆ ತಾಲೂಕಿನಲ್ಲಿ ತುಂತುರು ಮಳೆಯಾದರೆ, ಮುಳಬಾಗಲು, ಶ್ರೀನಿವಾಸಪುರ, ಕೆಜಿಎಫ್ ತಾಲೂಕಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಹಾಗೇ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಮೈಸೂರಿನಲ್ಲಿ ಹಗುರ ಮಳೆಯಾಗಿತ್ತು.

ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಶೀತ ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಇಂದು (ಶುಕ್ರವಾರ) ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಮಳೆಯಾಗುತ್ತದೆ. ಈಶಾನ್ಯ ಭಾರತದಲ್ಲಿ ಇಂದು ಚದುರಿದ ಮಧ್ಯಮ ಮಳೆಯಾಗಲಿದೆ. ನಂತರ ಒಣ ಹವಾಮಾನ ಇರುತ್ತದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ 2 ದಿನಗಳ ಕಾಲ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮೆ, ಕೇರಳ, ಮಾಹೆಯಲ್ಲಿ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್​ನಲ್ಲಿ ಮಳೆಯಾಗಲಿದೆ. ಜನವರಿ 29ರಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ ರಾಜ್ಯದಲ್ಲಿ ಇಂದು ಮಳೆಯಾಗಲಿದ್ದು, ಜನವರಿ 30ರಿಂದ ಮಳೆ ಕಡಿಮೆಯಾಗುತ್ತದೆ.

ಇಂದು ವಿದರ್ಭ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಗುಜರಾತ್ ರಾಜ್ಯದಲ್ಲಿ ಶೀತ ಅಲೆಯ ನಿರ್ಮಾಣವಾಗಲಿದೆ. ಮುಂದಿನ 2-3 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಾದ್ಯಂತ ಮಳೆಯಾಗಲಿದೆ.

ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ಪಂಜಾಬ್, ರಾಜಸ್ಥಾನ, ದೆಹಲಿಯಲ್ಲಿ ಆರೆಂಜ್​ ಅಲರ್ಟ್ ಘೋಷಣೆ

Bengaluru Rain: ಹೊಸವರ್ಷ ಆಚರಣೆಗೆ ವರುಣನ ಅಡ್ಡಿ; ಗಾಯದ ಮೇಲೆ ಬರೆ ಎಳೆದ ಮಳೆರಾಯ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ