AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಕರ್ನಾಟಕದಲ್ಲಿ ಹಿಂಗಾರಿನ ಅಬ್ಬರ; ನಾಳೆಯಿಂದ ವ್ಯಾಪಕ ಮಳೆ

Karnataka Rain Updates: ಕೆಲವು ರಾಜ್ಯಗಳಲ್ಲಿ ಅ. 21ರಿಂದಲೇ ಹಿಂಗಾರು ಮಳೆಯ ಪ್ರವೇಶವಾಗಿದೆ. ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತವೂ ಎದ್ದಿರುವುದರಿಂದ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ.

Weather Today: ಕರ್ನಾಟಕದಲ್ಲಿ ಹಿಂಗಾರಿನ ಅಬ್ಬರ; ನಾಳೆಯಿಂದ ವ್ಯಾಪಕ ಮಳೆ
ಮಳೆImage Credit source: iStock
ಸುಷ್ಮಾ ಚಕ್ರೆ
|

Updated on: Oct 28, 2023 | 6:37 AM

Share

ಬೆಂಗಳೂರು: ದಕ್ಷಿಣ ಭಾರತದಲ್ಲಿ ಹಿಂಗಾರು ಮಳೆ ಮತ್ತು ಚಂಡಮಾರುತ ಅಬ್ಬರದಿಂದ ಮತ್ತೊಮ್ಮೆ ಮಳೆ ಹೆಚ್ಚಾಗಿದೆ. ನಾಳೆಯಿಂದ (ಅ. 29) ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಕೆಲವು ರಾಜ್ಯಗಳಲ್ಲಿ ಅ. 21ರಿಂದಲೇ ಹಿಂಗಾರು ಮಳೆಯ ಪ್ರವೇಶವಾಗಿದೆ. ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತವೂ ಎದ್ದಿರುವುದರಿಂದ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ. ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ತಮಿಳುನಾಡಿನ 12 ಜಿಲ್ಲೆಗಳಲ್ಲಿ ಅ. 29ರಿಂದ ಈಶಾನ್ಯ ಮಾನ್ಸೂನ್ ಅಬ್ಬರ

ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳ ರಾಜ್ಯಗಳಲ್ಲೂ ಭಾನುವಾರದಿಂದ ಮಳೆ ತೀವ್ರಗೊಳ್ಳಲಿದೆ. ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಅಕ್ಟೋಬರ್‌ 30ರವರೆಗೆ ಪಥನಾಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಮುಂದುವರಿಯಲಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಲ್ಲಿ ಭಾನುವಾರದಿಂದ ಮಳೆ ಹೆಚ್ಚಳ; ಕರಾವಳಿಯಲ್ಲಿ ಹಳದಿ ಅಲರ್ಟ್

ಹಾಗೇ, ಇಂದು ಕೇರಳದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?