Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದಕ್ಕೆ ಕೇಸ್​ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ದಕ್ಷಿಣ ಕನ್ನಡ ಜಿಲ್ಲೆಯವರಾದ ಶಿವಪ್ರಸಾದ್ ಅವರ ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಗೆ ಮತ ಯಾಚಿಸಿದ್ದಕ್ಕೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆದರೆ, ಆಹ್ವಾನ ಪತ್ರಿಕೆ ನೀತಿ ಸಂಹಿತೆ ಜಾರಿಗೆ ಮೊದಲು ಮುದ್ರಣವಾಗಿದ್ದ ಕಾರಣ ಹೈಕೋರ್ಟ್ ಕೇಸ್‌ಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದಕ್ಕೆ ಕೇಸ್​ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್
ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದಕ್ಕೆ ಕೇಸ್​ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Nov 11, 2024 | 3:18 PM

ಬೆಂಗಳೂರು, ನವೆಂಬರ್​ 11: ವಿವಾಹದ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಮತ ಕೇಳಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ವಿರುದ್ಧ ಚುನಾವಣಾಧಿಕಾರಿ ಕೇಸ್​ ದಾಖಲಿಸಿದ್ದರು. ಫ್ಲೈಯಿಂಗ್ ಸ್ಕ್ವಾಡ್ ದಾಖಲಿಸಿದ್ದ ಕೇಸ್ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ನೀತಿ ಸಂಹಿತೆಗಿಂತ ಮೊದಲು ಆಹ್ವಾನಪತ್ರಿಕೆ ಮುದ್ರಣ ಹಿನ್ನೆಲೆ ಕೇಸ್​​ಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಮದುಮಗ ಶಿವಪ್ರಸಾದ್​ ಅವರು ತಮ್ಮ ವಿವಾಹದ ಆಹ್ವಾನ ಪತ್ರಿಕೆಯಲ್ಲಿ ‘ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್ ನೀಡಿದಂತೆ’ ಎಂದು ಮುದ್ರಿಸಿದ್ದರು. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ವರನ ವಿರುದ್ಧ ಏಪ್ರಿಲ್ 17ರಂದು ಚುನಾವಣಾ ನೋಡಲ್​ ಅಧಿಕಾರಿಗಳಿಗೆ ದೂರು ಬಂದಿತ್ತು. ನಂತರ ಚುನಾವಣಾಧಿಕಾರಿಗಳು ನ್ಯಾಯಾಲಯಕ್ಕೆ ಈ ಬಗ್ಗೆ ವರದಿ ಸಲ್ಲಿಸಿ ಮದುಮಗನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ಮೋದಿ ಗೆಲ್ಲಿಸುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಣ: ವರನ ವಿರುದ್ಧ ದೂರು ದಾಖಲು

ಮದುಮಗ ಪರ ವಕೀಲ ಎಂ.ವಿನೋದ್ ಕುಮಾರ್ ಕೇಸ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಆದರೆ ಚುನಾವಣಾ ನೀತಿಸಂಹಿತೆ ಮಾರ್ಚ್​ 16ರಂದು ಜಾರಿಯಾಗಿದೆ. ಹೀಗಾಗಿ ಕೇಸ್ ರದ್ದು ಮಾಡುವಂತೆ ವಕೀಲ ಎಂ.ವಿನೋದ್ ಕುಮಾರ್ ಮನವಿ ಮಾಡಿದರು. ವಾದವನ್ನು ಆಲಿಸಿದ ಹೈಕೋರ್ಟ್​ ಕೇಸ್​ಗೆ ತಡೆಯಾಜ್ಞೆ ನೀಡಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿತ್ತು.

ಇದನ್ನೂ ಓದಿ: ‘ಉಡುಗೊರೆ ಬೇಡ, ಮೋದಿಗೆ ಮತ ಹಾಕಿ’ ಆಮಂತ್ರಣ ಪತ್ರಿಕೆಯಲ್ಲಿ ವರನ ತಂದೆಯಿಂದ ವಿಶೇಷ ಮನವಿ

ಇನ್ನು ಇಂಥಹದ್ದೇ ಒಂದು ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿತ್ತು. ವರನ ತಂದೆಯೊಬ್ಬರು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋದೊಂದಿಗೆ ‘ಉಡುಗೊರೆ ಬೇಡ, ಅದರ ಬದಲಿಗೆ ಮೋದಿಗೆ ಮತ ಹಾಕಿ’ ಎಂದು ಮನವಿ ಮಾಡಿಕೊಂಡಿದ್ದರು. ಇದು ಸಾಕಷ್ಟು ವೈರಲ್ ಕೂಡ ಆಗಿತ್ತು. ಏಪ್ರಿಲ್ 4 ರಂದು ಮದುವೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:11 pm, Mon, 11 November 24

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್