AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend- Night Curfew: ಲಾಕ್​ಡೌನ್ ಇರಲಿ ಇಲ್ಲದಿರಲಿ..ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದ್ದೇ ಇದೆ

Karnataka Unlock: ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು,  ಅಗತ್ಯ ವಸ್ತುಗಳ ಖರೀದಿಗೆ ಇದ್ದ ಸಮಯ ವಿಸ್ತರಣೆ ಮಾಡಲಾಗಿದೆ. ಮಧ್ಯಾಹ್ನ 2ರವರೆಗೆ ಬೀದಿ ಬದಿ ವ್ಯಾಪಾರಕ್ಕೆ ಸಹ ಅವಕಾಶ ನೀಡಲಾಗಿದೆ. 

Weekend- Night Curfew: ಲಾಕ್​ಡೌನ್ ಇರಲಿ ಇಲ್ಲದಿರಲಿ..ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದ್ದೇ ಇದೆ
ಕೊರೊನಾ ಕರ್ಫ್ಯೂ (ಪ್ರಾತಿನಿಧಿಕ ಚಿತ್ರ)
TV9 Web
| Updated By: guruganesh bhat|

Updated on: Jun 10, 2021 | 9:22 PM

Share

ಬೆಂಗಳೂರು: ಸೋಮವಾರದಿಂದ (ಜೂನ್ 14) ಕೆಲವು ಜಿಲ್ಲೆಗಳು ಅನ್​ಲಾಕ್ ಆದರೂ, ಪ್ರತಿ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಇಡೀರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಇರುತ್ತದೆ. ಜತೆಗೆ ಇಡೀ ರಾಜ್ಯದಲ್ಲಿ ಪ್ರತಿದಿನ ಸಂಜೆ 5ರಿಂದ ಬೆಳಗ್ಗೆಯವರೆಗೆ ಕೊವಿಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು,  ಅಗತ್ಯ ವಸ್ತುಗಳ ಖರೀದಿಗೆ ಇದ್ದ ಸಮಯ ವಿಸ್ತರಣೆ ಮಾಡಲಾಗಿದೆ. ಮಧ್ಯಾಹ್ನ 2ರವರೆಗೆ ಬೀದಿ ಬದಿ ವ್ಯಾಪಾರಕ್ಕೆ ಸಹ ಅವಕಾಶ ನೀಡಲಾಗಿದೆ.

ಲಾಕ್​ಡೌನ್ ರೂಲ್ಸ್ ಜಾರಿಯಲ್ಲಿದ್ದರೂ ಕೆಲವು ವಲಯಕ್ಕೆ ಜೂನ್ 14ರಿಂದ ಅನ್ವಯವಾಗುವಂತೆ  ರಿಲೀಫ್ ನೀಡಲಾಗಿದೆ. ಅವುಗಳ ವಿವರ ಇಂತಿದೆ:

1). ಅಗತ್ಯ ವಸ್ತು ಖರೀದಿಗೆ ಮ.2ರವರೆಗೂ ಅವಕಾಶ 2).  ಬೀದಿ ಬದಿ ವ್ಯಾಪಾರಕ್ಕೆ ಮ.2 ರವರೆಗೂ ಪರ್ಮಿಷನ್ 3 ). ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲ ಕಾರ್ಖಾನೆ ಓಪನ್ 4 ). ಶೇ.30ರಷ್ಟು ಸಿಬ್ಬಂದಿ ಬಳಸಿ ಗಾರ್ಮೆಂಟ್ಸ್ ಓಪನ್ 5 ). ಎಲ್ಲ ರೀತಿಯ ನಿರ್ಮಾಣ ಚಟುವಟಿಕೆ ಆರಂಭಕ್ಕೆ ಅಸ್ತು 6). ನಿರ್ಮಾಣ ಸಂಬಂಧ ಅಂಗಡಿ ಓಪನ್​ಗೆ ಗ್ರೀನ್​ ಸಿಗ್ನಲ್ 7 ). ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೂ ಪಾರ್ಕ್ ಓಪನ್ 8 ). ಆಟೋ, ಟ್ಯಾಕ್ಸಿಯಲ್ಲಿ ಇಬ್ಬರಿಗೆ ಮಾತ್ರ ಸಂಚಾರಕ್ಕೆ ಸಮ್ಮತಿ 9 ). ಮದ್ಯ ಪಾರ್ಸೆಲ್​ಗೆ ಮಧ್ಯಾಹ್ನ 2ರವರೆಗೆ ಅವಕಾಶ 10 ) ಶೇ.50 ರಷ್ಟು ಸಿಬ್ಬಂದಿ ಬಳಸಿ ಕೆಲ ಸರ್ಕಾರಿ ಕಚೇರಿಗಳು ಓಪನ್

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸೋಮವಾರದಿಂದ ( ಜೂನ್ 14) ಲಾಕ್​ಡೌನ್ ಸಡಿಲಿಕೆಯಾದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಠಿಣ ನಿರ್ಬಂಧ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು. ಜತೆಗೆ ಬೆಂಗಳೂರು ನಗರದಲ್ಲಿ ಮೆಟ್ರೋ ಸಂಚಾರಕ್ಕೂ ಅವಕಾಶವಿಲ್ಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Unlock: 11 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್ ವಿಸ್ತರಣೆ; ಇನ್ನುಳಿದ ಜಿಲ್ಲೆಗಳು 14ರಿಂದ ಅನ್​ಲಾಕ್: ಸಿಎಂ ಯಡಿಯೂರಪ್ಪ ಘೋಷಣೆ

Explainer: ದೇಶದಲ್ಲಿ ಕೊವಿಡ್ ಸಾವಿನ ಸಂಖ್ಯೆ ಏಕಾಏಕಿ ಏರಲು ಕಾರಣವೇನು? (Weekend Curfew and Night Curfew will be continew in Karnataka in all districts says CM Yediyurappa)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್