AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandi Hills ವೀಕೆಂಡ್ ಕರ್ಫ್ಯೂ ಎಫೆಕ್ಟ್; ನಂದಿಹಿಲ್ಸ್​ನಲ್ಲಿ ಬೆರಳೆಣಿಕೆಯಷ್ಟು ಜನ..

ಮಹಾಮಾರಿ ಕೊರೊನಾದಿಂದಾಗಿ ಎಲ್ಲಾ ಪ್ರವಾಸಿ ಕ್ಷೇತ್ರಗಳು ಬಂದಾಗಿದ್ದವು. ಸದ್ಯ ಕೊರೊನಾ ಕಡಿಮೆಯಾದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಅನ್ಲಾಕ್ ಮಾಡಲಾಗುತ್ತಿದೆ. ಎರಡು ತಿಂಗಳಿಂದ ಬಂದ್ ಆಗಿದ್ದ ವಿಶ್ವವಿಖ್ಯಾತ ನಂದಿಗಿರಿಧಾಮ ಸದ್ಯ ಓಪನ್ ಆಗಿದೆ. ಆದರೆ ಈ ಪ್ರವಾಸಿ ತಾಣಕ್ಕೆ ವೀಕೆಂಡ್ ಕರ್ಪ್ಯೂ ಎಫೆಕ್ಟ್ ಹೊಡೆದಿದೆ.

Nandi Hills ವೀಕೆಂಡ್ ಕರ್ಫ್ಯೂ ಎಫೆಕ್ಟ್; ನಂದಿಹಿಲ್ಸ್​ನಲ್ಲಿ ಬೆರಳೆಣಿಕೆಯಷ್ಟು ಜನ..
ನಂದಿಹಿಲ್ಸ್
TV9 Web
| Edited By: |

Updated on:Jun 27, 2021 | 11:06 AM

Share

ಚಿಕ್ಕಬಳ್ಳಾಫುರ: ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ನಂದಿಹಿಲ್ಸ್‌ ಹೇಳಿ ಕೇಳಿ ಪ್ರಕೃತಿ ಸೌಂದರ್ಯದ ಖಣಿ. ಅದ್ರಲ್ಲೂ ಪ್ರೇಮಿಗಳಿಗೆ ಅಚ್ಚು ಮೆಚ್ಚಿನ ತಾಣ. ಪ್ರಕೃತಿ ಸೌಂದರ್ಯದ ಅದ್ಬುತವನ್ನೆ ಸೃಷ್ಟಿಸಿರುವ ಈ ಪ್ರವಾಸಿತಾಣಕ್ಕೆ ಸಾವಿರಾರು ಜನರು ಬರುತ್ತಾರೆ. ಬಂದವರು ಇಲ್ಲಿನ ಈ ಪ್ರಕೃತಿ ಸೌಂದರ್ಯ ನೋಡಿ ರೊಮಾಂಚನಗೊಳ್ಳುತ್ತಾರೆ. ಆದ್ರೆ ಕೊರೊನಾ ವೀಕೆಂಡ್ ಕರ್ಫ್ಯೂನಿಂದಾಗಿ ನಂದಿ ಹಿಲ್ಸ್ ಮಂಕಾಗಿದೆ.

ಮಹಾಮಾರಿ ಕೊರೊನಾದಿಂದಾಗಿ ಎಲ್ಲಾ ಪ್ರವಾಸಿ ಕ್ಷೇತ್ರಗಳು ಬಂದಾಗಿದ್ದವು. ಸದ್ಯ ಕೊರೊನಾ ಕಡಿಮೆಯಾದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಅನ್ಲಾಕ್ ಮಾಡಲಾಗುತ್ತಿದೆ. ಎರಡು ತಿಂಗಳಿಂದ ಬಂದ್ ಆಗಿದ್ದ ವಿಶ್ವವಿಖ್ಯಾತ ನಂದಿಗಿರಿಧಾಮ ಸದ್ಯ ಓಪನ್ ಆಗಿದೆ. ಆದರೆ ಈ ಪ್ರವಾಸಿ ತಾಣಕ್ಕೆ ವೀಕೆಂಡ್ ಕರ್ಪ್ಯೂ ಎಫೆಕ್ಟ್ ಹೊಡೆದಿದೆ. ನಂದಿಗಿರಿಧಾಮ ಓಪನ್ ಆಗಿದ್ರೂ ಪ್ರವಾಸಿಗರು ಮಾತ್ರ ಇತ್ತ ಸುಳಿಯುತ್ತಿಲ್ಲ. ಕೊರೊನಾ ಸೋಂಕಿನ ಭೀತಿಯಿಂದಾಗಿ ಪ್ರವಾಸಿಗರು ಗಿರಿಧಾಮದತ್ತ ಮುಖ ಮಾಡುತ್ತಿಲ್ಲ.

ಭಾನುವಾರ ರಜೆ ದಿನವಾಗಿದ್ರೂ ಬೆರಳೆಣಿಕೆಯಷ್ಟು ಜನ ಮಾತ್ರ ನಂದಿ ಹಿಲ್ಸ್ಗೆ ಆಗಮಿಸುತ್ತಿದ್ದಾರೆ. ಸಾಮಾನ್ಯ ದಿನಗಳಲ್ಲಿ ಸಾವಿರಾರು ಜನ ಪ್ರವಾಸಿಗರು ಗಿರಿಧಾಮಕ್ಕೆ ಆಗಮಿಸುತ್ತಿದ್ರು. ಆದರೆ ಈಗ ಚಿತ್ರಣ ಬದಲಾಗಿದೆ. ಸದ್ಯ 36 ಕಾರುಗಳು, 30 ಬೈಕ್ಗಳಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಆದರೆ ಇಲ್ಲೂ ಕೂಡ ಕೊರೊನಾ ಮಾರ್ಗಸೂಚಿ ಪಾಲಿಸುತ್ತಿಲ್ಲ. ಗಿರಿಧಾಮಕ್ಕೆ ಬಂದವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದಾರೆ. ಸ್ವರ್ಗ ನೋಡಲು ಬಂದ ಪ್ರವಾಸಿಗರು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿ ಸರ್ಕಾರ ನೀಡಿರುವ ಅವಕಾಶವನ್ನು ಒಳಸಿಕೊಳ್ಳಬೇಕಿದೆ.

ಮತ್ತೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ಬಂದ್ ಇನ್ನು ನಿಯಮ ಉಲ್ಲಂಘಿಸಿ ನಂದಿ ಗಿರಿಧಾಮಕ್ಕೆ ಭೇಟಿ ಹಿನ್ನೆಲೆಯಲ್ಲಿ ಮತ್ತೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ಬಂದ್ ಮಾಡಲಾಗಿದೆ. ಪೊಲೀಸರು ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ. ಗಿರಿಧಾಮದ ಪ್ರವೇಶದ್ವಾರದಿಂದಲೇ ಪ್ರವಾಸಿಗರು ವಾಪಸ್ ಆಗುತ್ತಿದ್ದಾರೆ. 1 ವಾರದಿಂದ ಗಿರಿಧಾಮ ಓಪನ್ ಮಾಡಲಾಗಿತ್ತು. ಕೊವಿಡ್ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಮತ್ತೆ ಬಂದ್ ಮಾಡಲಾಗಿದೆ.

ಇದನ್ನೂ ಓದಿ: ಲಾಕ್​ಡೌನ್​ ಎಫೆಕ್ಟ್; ನಂದಿಗಿರಿಧಾಮದಲ್ಲಿ ಆಹಾರವಿಲ್ಲದೆ ಪ್ರಾಣಿ-ಪಕ್ಷಿಗಳ ಪರದಾಟ

Published On - 9:57 am, Sun, 27 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!