AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಆರಂಭ: ಸೋಮವಾರ ಬೆಳಿಗ್ಗೆ 5ರವರೆಗೆ ನಿರ್ಬಂಧ

ಶುಕ್ರವಾರ ರಾತ್ರಿ 7 ಗಂಟೆಗೆ ಆರಂಭವಾಗಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅನಗತ್ಯ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಆರಂಭ: ಸೋಮವಾರ ಬೆಳಿಗ್ಗೆ 5ರವರೆಗೆ ನಿರ್ಬಂಧ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 18, 2021 | 9:05 PM

Share

ಬೆಂಗಳೂರು: ಕೊರೊನಾ ಸೋಂಕಿನ 2ನೇ ಅಲೆ ನಿಯಂತ್ರಣಕ್ಕೆಂದು ರಾಜ್ಯ ಸರ್ಕಾರದ ಸೂಚನೆ ಮೇರೆ ರಾಜ್ಯವ್ಯಾಪಿ ವೀಕೆಂಡ್ ಕರ್ಫ್ಯೂ ಆರಂಭವಾಗಿದೆ. ಶುಕ್ರವಾರ ರಾತ್ರಿ 7 ಗಂಟೆಗೆ ಆರಂಭವಾಗಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅನಗತ್ಯ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶವಿದೆ.

ಲಾಕ್​ಡೌನ್ ತೆರವುಗೊಂಡ ಜಿಲ್ಲೆಗಳಲ್ಲಿ ಯಾವ ಅಂಗಡಿ ತೆರೆಯಬಹುದು? ಅನ್‌ಲಾಕ್‌ ಗೈಡ್‌ಲೈನ್ಸ್‌ನಲ್ಲಿ ಸಿವಿಲ್ ಕೆಲಸಗಳಿಗೆ ಮಾತ್ರ ದುರಸ್ತಿಗೆ ಅನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಉಳಿದ ಯಾವುದೇ ದುರಸ್ತಿ ಕೆಲಸಗಳಿಗೆ ಅವಕಾಶ ಇಲ್ಲ. ಅಂಗಡಿಗಳ ಪೈಕಿ ಸಿಮೆಂಟ್ ಮತ್ತು ಸ್ಟೀಲ್ ಅಂಗಡಿಗಳು ಮಾತ್ರ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಬಹುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಈ ಮೂಲಕ ಜೂನ್ 10ರಂದು ಘೋಷಿಸಿದ್ದ ಮೊದಲ ಹಂತದ ಅನ್​ಲಾಕ್ ನಿಯಮಗಳಲ್ಲಿನ ಗೊಂದಲಕ್ಕೆ ಸರ್ಕಾರವು ಜೂನ್ 12ರಂದು ತೆರೆ ಎಳೆದಿತ್ತು.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಮೊನ್ನೆ (ಜೂನ್ 10) ತಿಳಿಸಿದ್ದಾರೆ.

ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶವಿದೆ. ಗಾರ್ಮೆಂಟ್ಸ್​ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್​, ವೈನ್​ ಸ್ಟೋರ್, ಎಂಎಸ್​ಐಎಲ್​ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್​ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಆರರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಲ್ಲದೇ ನೈಟ್​ ಕರ್ಫ್ಯೂ ಸಹ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

(Weekend Curfew in Karnataka upto monday morning guideline details)

ಇದನ್ನೂ ಓದಿ: Weekend- Night Curfew: ಲಾಕ್​ಡೌನ್ ಇರಲಿ ಇಲ್ಲದಿರಲಿ..ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಇದ್ದೇ ಇದೆ

ಇದನ್ನೂ ಓದಿ: Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ

Published On - 9:04 pm, Fri, 18 June 21

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ