AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ನಳಿನ್ ಕುಮಾರ್ ಕಟೀಲ್, ಪ್ರತಾಪ್​ ಸಿಂಹ ಹೇಳಿದ್ದೇನು?

ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಪ್ರತಾಪ್‌ ಸಿಂಹಗೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಈ ಸಾರಿ ಟಿಕೆಟ್ ಮಿಸ್​ ಆಗಿದೆ. ಇತ್ತ ಟಿಕೆಟ್​ ಘೋಷಣೆಯಾಗುತ್ತಿದ್ದಂತೆ ಟ್ವೀಟ್​ ಮಾಡಿರುವ ಸಂಸದ ಪ್ರತಾಪ್​ ಸಿಂಹ ಯದುವೀರ ಒಡೆಯರ್​ಗೆ ಅಭಿನಂದನೆ ತಿಳಿಸಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ಕೂಡ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಟ್ ಚೌಟಾಗೆ ಅಭಿನಂದಿಸಿದ್ದಾರೆ.

ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ನಳಿನ್ ಕುಮಾರ್ ಕಟೀಲ್, ಪ್ರತಾಪ್​ ಸಿಂಹ ಹೇಳಿದ್ದೇನು?
ಪ್ರತಾಪ್​ ಸಿಂಹ, ನಳಿನ್ ಕುಮಾರ್ ಕಟೀಲ್
ದಿಲೀಪ್​, ಚೌಡಹಳ್ಳಿ
| Edited By: |

Updated on: Mar 13, 2024 | 8:27 PM

Share

ಬೆಂಗಳೂರು, ಮಾರ್ಚ್​​ 13: ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ (BJP) ಎರಡನೇ ಪಟ್ಟಿ ಬುಧವಾರ ಬಿಡುಗಡೆ  ಆಗಿದೆ. ಬಿಡುಗಡೆ ಆಗಿರುವ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಮಂದಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಬಾರಿ ಹಾಲಿ ಸಂಸದರಿಗೆ ಶಾಕ್​ ಉಂಟಾಗಿದ್ದು ಹೊಸಬರಿಗೆ ಲಕ್ ಖುಲಾಯಿಸಿದೆ. 2ನೇ ಸಾರಿ ಗೆದ್ದು ಹ್ಯಾಟ್ರಿಕ್‌ ಗೆಲುವಿ ಕನಸು ಕಂಡಿದ್ದ ಪ್ರತಾಪ್‌ ಸಿಂಹಗೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಈ ಸಾರಿ ಟಿಕೆಟ್ ಕೈತಪ್ಪಿದೆ. ಬದಲಾಗಿ ಮೈಸೂರು ರಾಜಮನೆತನದ ಯದುವೀರ್ ಕೃಷ್ಣರಾಜ ಒಡೆಯರ್‌ಗೆ ಸಿಕ್ಕಿದೆ.

ಇತ್ತ ಟಿಕೆಟ್​ ಘೋಷಣೆಯಾಗುತ್ತಿದ್ದಂತೆ ಟ್ವೀಟ್​ ಮಾಡಿರುವ ಸಂಸದ ಪ್ರತಾಪ್​ ಸಿಂಹ ಯದುವೀರ ಒಡೆಯರ್​ಗೆ ಅಭಿನಂದನೆ ತಿಳಿಸಿದ್ದಾರೆ. ಕೂಡಲೇ ಚುನಾವಣೆ ತಯಾರಿ ಆರಂಭಿಸೋಣ, ಪ್ರಚಾರಕ್ಕಿಳಿಯೋಣ ದೇಶಕ್ಕಾಗಿ, ಮೋದಿಗಾಗಿ ಎಂದು ಟ್ವೀಟ್‌ ಮಾಡಿದ್ದಾರೆ.

ಪಕ್ಷ ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದ ನಳಿನ್ ಕುಮಾರ್ ಕಟೀಲು

ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದು, ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಟ್ ಚೌಟಾಗೆ ಅಭಿನಂದಿಸುವೆ. ಕಳೆದ 15 ವರ್ಷಗಳಿಂದ ಪಕ್ಷ ನನಗೆ ಅವಕಾಶವನ್ನ ಕೊಟ್ಟಿದೆ. ಮತದಾರರು 15 ವರ್ಷಗಳಿಂದ ಆಶೀರ್ವಾದ ಮಾಡಿದ್ದಾರೆ. ರಾಜಕಾರಣಕ್ಕೆ ಯುವಕರು ಬರಬೇಕು. ಪಕ್ಷ ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ, ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಕಟ್

ರಾಜ್ಯ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುವ ಅವಕಾಶ ಕೊಟ್ಟಿದೆ. ಪಕ್ಷದ ರಾಜ್ಯಾಧ್ಯಕ್ಷನಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಪಕ್ಷ ಏನು ಹೇಳುತ್ತೋ ಅದನ್ನ ಮಾಡುವವನು ನಾನು. ನನಗೆ ಕೊಟ್ಟ ಸಹಕಾರ ಕ್ಯಾ.ಬ್ರಿಜೇಶ್​ ಚೌಟಾಗೆ ಕೊಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ನಳಿನ್ ಕುಮಾರ್ ಕಟೀಲು ಮನವಿ ಮಾಡಿದ್ದಾರೆ.

ಮೋದಿ ಅವರ ಕೈ ಬಲಪಡಿಸಬೇಕಿದೆ: ಬಿ.ವೈ ರಾಘವೇಂದ್ರ

ಶಿವಮೊಗ್ಗ ಲೋಕಸಭೆ ಟಿಕೆಟ್ ಸಿಕ್ಕ ಹಿನ್ನಲೆ ಬಿ.ವೈ ರಾಘವೇಂದ್ರ ಟಿವಿ 9ಗೆ ಪ್ರತಿಕ್ರಿಯಿಸಿದ್ದು, ಮತ್ತೊಮ್ಮೆ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ. ನನಗೆ ಈಗ ಜವಾಬ್ದಾರಿ ಹೆಚ್ಚಾಗಿದೆ. ಒಂದು ತಿಂಗಳ ಸಮಯ ಇದೆ. ಮತ್ತೆ ಕ್ಷೇತ್ರ ಗೆಲ್ಲಬೇಕು. ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದರು.

ಮೋದಿ ಮತ್ತೆ ಪ್ರಧಾನಿ ಆಗುತ್ತಾರೆಂದು ಸಂಪೂರ್ಣ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಟಿವಿ9ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಮೋದಿ ಮತ್ತೆ ಪ್ರಧಾನಿ ಆಗುತ್ತಾರೆಂದು ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?