AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET ಪರೀಕ್ಷೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ಏನು ಹೇಳಿದ್ರು?

ಬೆಂಗಳೂರು: ಕ್ರೂರಿ ಕೊರೊನಾದಿಂದ ನಿಗದಿಯಾಗಿದ್ದ ವಿದ್ಯಾರ್ಥಿಗಳ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸೆಪ್ಟೆಂಬರ್ ಮೊದಲ ವಾರದಿಂದ ಪದವಿ ಕಾಲೇಜು ಆರಂಭಿಸಲಾಗುತ್ತೆ. ಮೇ 31ರೊಳಗೆ ಆನ್​ಲೈನ್ ಮೂಲಕ ಪಾಠ ಮುಗಿಸಬೇಕು. ಈ ಬಗ್ಗೆ ಪದವಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ಸೂಚಿಸಲಾಗಿದೆ. ಪರೀಕ್ಷೆ, ಫಲಿತಾಂಶ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಜುಲೈ 30, 31ರಂದು ಸಿಇಟಿ ಪರೀಕ್ಷೆ: ಜುಲೈ 30, 31ರಂದು ಸಿಇಟಿ ಪರೀಕ್ಷೆ ನಡೆಯುತ್ತೆ. ಸಿಇಟಿ‌ ಪರೀಕ್ಷೆಗೆ ಅಗತ್ಯ ಮುಂಜಾಗ್ರತಾ ಕ್ರಮ […]

CET ಪರೀಕ್ಷೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ಏನು ಹೇಳಿದ್ರು?
ಸಾಧು ಶ್ರೀನಾಥ್​
|

Updated on:May 13, 2020 | 1:43 PM

Share

ಬೆಂಗಳೂರು: ಕ್ರೂರಿ ಕೊರೊನಾದಿಂದ ನಿಗದಿಯಾಗಿದ್ದ ವಿದ್ಯಾರ್ಥಿಗಳ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸೆಪ್ಟೆಂಬರ್ ಮೊದಲ ವಾರದಿಂದ ಪದವಿ ಕಾಲೇಜು ಆರಂಭಿಸಲಾಗುತ್ತೆ. ಮೇ 31ರೊಳಗೆ ಆನ್​ಲೈನ್ ಮೂಲಕ ಪಾಠ ಮುಗಿಸಬೇಕು. ಈ ಬಗ್ಗೆ ಪದವಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ಸೂಚಿಸಲಾಗಿದೆ. ಪರೀಕ್ಷೆ, ಫಲಿತಾಂಶ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಜುಲೈ 30, 31ರಂದು ಸಿಇಟಿ ಪರೀಕ್ಷೆ:

ಜುಲೈ 30, 31ರಂದು ಸಿಇಟಿ ಪರೀಕ್ಷೆ ನಡೆಯುತ್ತೆ. ಸಿಇಟಿ‌ ಪರೀಕ್ಷೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ತೇವೆ. ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್​ ಕಡ್ಡಾಯ. ಕೊಠಡಿಯಲ್ಲಿ ಕಡಿಮೆ ವಿದ್ಯಾರ್ಥಿಗಳನ್ನ ಕೂರಿಸಬೇಕು. ಈ ಬಾರಿ ಸಿಇಟಿಗೆ ಪರೀಕ್ಷಾ ಕೇಂದ್ರಗಳು ಹೆಚ್ಚಾಗಿರುತ್ತವೆ. ಇಂದಿನಿಂದ ಆಫ್ ಲೈನ್​ನಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತೆ.

ಆನ್​ಲೈನ್​ನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ:

ಗೆಟ್ ಸಿಇಟಿ ಗೊ ಹೆಸರಿನಲ್ಲಿ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ಕೋರ್ಸ್ ಪ್ರಾರಂಭಿಸಲಾಗುತ್ತೆ. ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸರ್ಕಾರ ಮುಂದಾಗಿದೆ. ಸಹಾಯವಾಣಿಯನ್ನು ಕೂಡ ಪ್ರಾರಂಭ ಮಾಡಲಾಗಿದೆ.

ಸಿಇಟಿ, ನೀಟ್​ಗೆ ಅನುಕೂಲವಾಗುವ ವಿಡಿಯೋ, ಟೆಸ್ಟ್, ಪಠ್ಯಗಳ ವಿವರ ಕೋರ್ಸ್​ನಲ್ಲಿರುತ್ತೆ. ಈಗಾಗಲೇ ಆನ್​ಲೈನ್​ನಲ್ಲಿ ಕೋರ್ಸ್ ಪ್ರಾರಂಭ ಆಗಿದೆ. 1,60,510 ಜನ ಈವರೆಗೆ ಪೇಜ್ ನೋಡಿದ್ದಾರೆ. 76,913 ವಿದ್ಯಾರ್ಥಿಗಳು ಲಾಗಿನ್ ಆಗಿದ್ದಾರೆ. 38 ಸಾವಿರ ವಿದ್ಯಾರ್ಥಿಗಳು ಆ್ಯಪ್ ಮೂಲಕ ಲಾಗಿನ್ ಆಗಿದ್ದಾರೆ. 38 ಸಾವಿರ ವಿದ್ಯಾರ್ಥಿಗಳು ವೆಬ್ ಪೋರ್ಟಲ್ ಮೂಲಕ ಲಾಗಿನ್ ಆಗಿದ್ದಾರೆ. 51,975 ವಿದ್ಯಾರ್ಥಿಗಳು ಈಗಾಗಲೇ ಟೆಸ್ಟ್ ತೆಗೆದುಕೊಂಡಿದ್ದಾರೆ.

ದ್ವೀತಿಯ PUC ಇಂಗ್ಲಿಷ್ ಪರೀಕ್ಷೆ ಆದಷ್ಟು ಬೇಗ ಮಾಡುತ್ತೇವೆ. ವೇಳಾಪಟ್ಟಿಯನ್ನು ಪಿಯು ಮಂಡಳಿ ಘೋಷಣೆ ಮಾಡುತ್ತೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.

Published On - 1:33 pm, Wed, 13 May 20

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ