AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET ಪರೀಕ್ಷೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ಏನು ಹೇಳಿದ್ರು?

ಬೆಂಗಳೂರು: ಕ್ರೂರಿ ಕೊರೊನಾದಿಂದ ನಿಗದಿಯಾಗಿದ್ದ ವಿದ್ಯಾರ್ಥಿಗಳ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸೆಪ್ಟೆಂಬರ್ ಮೊದಲ ವಾರದಿಂದ ಪದವಿ ಕಾಲೇಜು ಆರಂಭಿಸಲಾಗುತ್ತೆ. ಮೇ 31ರೊಳಗೆ ಆನ್​ಲೈನ್ ಮೂಲಕ ಪಾಠ ಮುಗಿಸಬೇಕು. ಈ ಬಗ್ಗೆ ಪದವಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ಸೂಚಿಸಲಾಗಿದೆ. ಪರೀಕ್ಷೆ, ಫಲಿತಾಂಶ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಜುಲೈ 30, 31ರಂದು ಸಿಇಟಿ ಪರೀಕ್ಷೆ: ಜುಲೈ 30, 31ರಂದು ಸಿಇಟಿ ಪರೀಕ್ಷೆ ನಡೆಯುತ್ತೆ. ಸಿಇಟಿ‌ ಪರೀಕ್ಷೆಗೆ ಅಗತ್ಯ ಮುಂಜಾಗ್ರತಾ ಕ್ರಮ […]

CET ಪರೀಕ್ಷೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ಏನು ಹೇಳಿದ್ರು?
ಸಾಧು ಶ್ರೀನಾಥ್​
|

Updated on:May 13, 2020 | 1:43 PM

Share

ಬೆಂಗಳೂರು: ಕ್ರೂರಿ ಕೊರೊನಾದಿಂದ ನಿಗದಿಯಾಗಿದ್ದ ವಿದ್ಯಾರ್ಥಿಗಳ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸೆಪ್ಟೆಂಬರ್ ಮೊದಲ ವಾರದಿಂದ ಪದವಿ ಕಾಲೇಜು ಆರಂಭಿಸಲಾಗುತ್ತೆ. ಮೇ 31ರೊಳಗೆ ಆನ್​ಲೈನ್ ಮೂಲಕ ಪಾಠ ಮುಗಿಸಬೇಕು. ಈ ಬಗ್ಗೆ ಪದವಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ಸೂಚಿಸಲಾಗಿದೆ. ಪರೀಕ್ಷೆ, ಫಲಿತಾಂಶ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಜುಲೈ 30, 31ರಂದು ಸಿಇಟಿ ಪರೀಕ್ಷೆ:

ಜುಲೈ 30, 31ರಂದು ಸಿಇಟಿ ಪರೀಕ್ಷೆ ನಡೆಯುತ್ತೆ. ಸಿಇಟಿ‌ ಪರೀಕ್ಷೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ತೇವೆ. ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್​ ಕಡ್ಡಾಯ. ಕೊಠಡಿಯಲ್ಲಿ ಕಡಿಮೆ ವಿದ್ಯಾರ್ಥಿಗಳನ್ನ ಕೂರಿಸಬೇಕು. ಈ ಬಾರಿ ಸಿಇಟಿಗೆ ಪರೀಕ್ಷಾ ಕೇಂದ್ರಗಳು ಹೆಚ್ಚಾಗಿರುತ್ತವೆ. ಇಂದಿನಿಂದ ಆಫ್ ಲೈನ್​ನಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತೆ.

ಆನ್​ಲೈನ್​ನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ:

ಗೆಟ್ ಸಿಇಟಿ ಗೊ ಹೆಸರಿನಲ್ಲಿ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ಕೋರ್ಸ್ ಪ್ರಾರಂಭಿಸಲಾಗುತ್ತೆ. ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸರ್ಕಾರ ಮುಂದಾಗಿದೆ. ಸಹಾಯವಾಣಿಯನ್ನು ಕೂಡ ಪ್ರಾರಂಭ ಮಾಡಲಾಗಿದೆ.

ಸಿಇಟಿ, ನೀಟ್​ಗೆ ಅನುಕೂಲವಾಗುವ ವಿಡಿಯೋ, ಟೆಸ್ಟ್, ಪಠ್ಯಗಳ ವಿವರ ಕೋರ್ಸ್​ನಲ್ಲಿರುತ್ತೆ. ಈಗಾಗಲೇ ಆನ್​ಲೈನ್​ನಲ್ಲಿ ಕೋರ್ಸ್ ಪ್ರಾರಂಭ ಆಗಿದೆ. 1,60,510 ಜನ ಈವರೆಗೆ ಪೇಜ್ ನೋಡಿದ್ದಾರೆ. 76,913 ವಿದ್ಯಾರ್ಥಿಗಳು ಲಾಗಿನ್ ಆಗಿದ್ದಾರೆ. 38 ಸಾವಿರ ವಿದ್ಯಾರ್ಥಿಗಳು ಆ್ಯಪ್ ಮೂಲಕ ಲಾಗಿನ್ ಆಗಿದ್ದಾರೆ. 38 ಸಾವಿರ ವಿದ್ಯಾರ್ಥಿಗಳು ವೆಬ್ ಪೋರ್ಟಲ್ ಮೂಲಕ ಲಾಗಿನ್ ಆಗಿದ್ದಾರೆ. 51,975 ವಿದ್ಯಾರ್ಥಿಗಳು ಈಗಾಗಲೇ ಟೆಸ್ಟ್ ತೆಗೆದುಕೊಂಡಿದ್ದಾರೆ.

ದ್ವೀತಿಯ PUC ಇಂಗ್ಲಿಷ್ ಪರೀಕ್ಷೆ ಆದಷ್ಟು ಬೇಗ ಮಾಡುತ್ತೇವೆ. ವೇಳಾಪಟ್ಟಿಯನ್ನು ಪಿಯು ಮಂಡಳಿ ಘೋಷಣೆ ಮಾಡುತ್ತೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.

Published On - 1:33 pm, Wed, 13 May 20

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್