AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಹೇಳಿದ್ದೇನು? ಇಲ್ಲಿದೆ ವಿವರ

Chaitra Kundapura Case: ಈಗ ಚೈತ್ರಾ ತೀವ್ರ ನಿಗಾ ಘಟಕದಲ್ಲಿ ಇದ್ದು, ಪ್ರಜ್ಞೆ ಮರುಕಳಿಸುತ್ತಿದೆ. ಸಿಸಿಬಿ ಅಧಿಕಾರಿಗಳು ಆಕೆ ಜತೆಗೆ ಇದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಸರಿಯಾಗಿ ಪ್ರಜ್ಞೆ ಬಂದ ಕೂಡಲೇ ವಾರ್ಡ್​​ಗೆ ಶಿಫ್ಟ್ ಮಾಡುತ್ತೇವೆ ಎಂದು ಬಾಲಾಜಿ ಪೈ ತಿಳಿಸಿದ್ದಾರೆ.

ಚೈತ್ರಾ ಕುಂದಾಪುರ ಆರೋಗ್ಯದ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಹೇಳಿದ್ದೇನು? ಇಲ್ಲಿದೆ ವಿವರ
ಚೈತ್ರಾ ಕುಂದಾಪುರ
Mangala RR
| Edited By: |

Updated on: Sep 15, 2023 | 6:28 PM

Share

ಬೆಂಗಳೂರು, ಸೆಪ್ಟೆಂಬರ್ 15: ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ (Chaitra Kundapura) ಅವರನ್ನು ಅಸ್ವಸ್ಥಗೊಂಡ ಕಾರಣ ಶುಕ್ರವಾರ ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಲಾಗಿತ್ತು. ಸಂಜೆ ವೇಳೆಗೆ ಆಕೆಯ ಆರೋಗ್ಯದ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮ ಕೇರ್ ಸೆಂಟರ್​​ನ ವಿಶೇಷ ಅಧಿಕಾರಿ ಡಾಕ್ಟರ್ ಬಾಲಾಜಿ ಪೈ ಮಾಹಿತಿ ನೀಡಿದ್ದು, ಚೈತ್ರಾ ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಪ್ರಜ್ಞಾಹೀನರಾಗಿ ಇದ್ದರು. ಚಿಕಿತ್ಸೆ ನೀಡಿದ್ದೇವೆ. ಸಿಟಿ ಸ್ಕ್ಯಾನ್ ಮಾಡಿದ್ದೇವೆ. ಈಗ ಪ್ರಜ್ಞೆ ಬರುತ್ತಾ ಇದೆ. ಫಿಟ್ಸ್ ಬಂದಿತ್ತೇ ಎಂಬುದು ತಿಳಿದಿಲ್ಲ. ಮುಂಚೆಯೇ ಆಕೆಗೆ ಈ ಸಮಸ್ಯೆ ಇತ್ತು ಎಂದು ಆಕೆಯ ಸ್ನೇಹಿತರು ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈಗ ಚೈತ್ರಾ ತೀವ್ರ ನಿಗಾ ಘಟಕದಲ್ಲಿ ಇದ್ದು, ಪ್ರಜ್ಞೆ ಮರುಕಳಿಸುತ್ತಿದೆ. ಸಿಸಿಬಿ ಅಧಿಕಾರಿಗಳು ಆಕೆ ಜತೆಗೆ ಇದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಸರಿಯಾಗಿ ಪ್ರಜ್ಞೆ ಬಂದ ಕೂಡಲೇ ವಾರ್ಡ್​​ಗೆ ಶಿಫ್ಟ್ ಮಾಡುತ್ತೇವೆ ಎಂದು ಬಾಲಾಜಿ ಪೈ ತಿಳಿಸಿದ್ದಾರೆ.

ಈ ಮಧ್ಯೆ, ಚೈತ್ರಾ ಕುಂದಾಪುರ ಅವರನ್ನು ಎಲ್ಲ ರೀತಿಯ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಎಬಿಜಿ, ಆರ್​ಬಿಎಸ್ ಮತ್ತು ಇಸಿಜಿ ಸಾಮಾನ್ಯವಾಗಿದೆ. ಸಿಟಿ ಸ್ಕ್ಯಾನ್ ವರದಿಯೂ ಸಕಾರಾತ್ಮಕವಾಗಿದೆ. ಪ್ರಸ್ತುತ ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಸಾಬೂನು ನೊರೆ ಬಾಯಿಗೆ ಹಾಕಿ ಮೂರ್ಛೆ ಬಂದಂತೆ ನಟನೆ; ಚೈತ್ರಾ ಕುಂದಾಪುರ ನಾಟಕಕ್ಕೆ ಸಿಸಿಬಿ ಪೊಲೀಸರು ಸುಸ್ತು

ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು ಇನ್ನಷ್ಟೇ ಸಿಸಿಬಿ ಕಚೇರಿಗೆ ಕರೆದೊಯ್ಯಬೇಕಿದೆ. ಏತನ್ಮಧ್ಯೆ, ದೂರುದಾರ ಗೋವಿಂದ್ ಬಾಬು ಅವರು ಪೊಲೀಸರಿಗೆ ಸಾಕ್ಷ್ಯದ ಪೆನ್ ಡ್ರೈವ್ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೆ ಟಿಕೆಟ್​ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡ

ತನಗೆ ಬಿಜೆಪಿ ಶಾಸಕ ಟಿಕೆಟ್ ಭರವಸೆ ನೀಡಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರಾ ಮತ್ತು ಆಕೆಯ ಸಹಚರರ ವಿರುದ್ಧ ದೂರು ದಾಖಲಿಸಿರುವ ಗೋವಿಂದ್ ಬಾಬು ಅವರು ಸಿಸಿಬಿ ಪೊಲೀಸರಿಗೆ ಪುರಾವೆಯನ್ನು ಸಲ್ಲಿಸಿದ್ದಾರೆ. ಪೆನ್‌ಡ್ರೈವ್‌ನಲ್ಲಿ ಆರೋಪಿಗಳ ಜತೆಗಿನ ದೂರವಾಣಿ ಸಂಭಾಷಣೆ ಇದೆ ಎನ್ನಲಾಗಿದೆ. ಆರೋಪಿಗಳು ಅನುಮಾನಾಸ್ಪದವಾಗಿ ಕಂಡ ನಂತರ ಗೋವಿಂದ್ ಬಾಬು ಅವರೊಂದಿಗಿನ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿದ್ದಾರೆ ಎಂದು ವರದಿಯಾಗಿದೆ. ಅವರು ಸಲ್ಲಿಸಿರುವ ಸಾಕ್ಷ್ಯಾಧಾರಗಳ ಪರಿಶೀಲನೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!