AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀಯಾ? ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

ಸಾರಿಗೆ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಡಲಿಲ್ಲ ಎಂದು ಹೇಳಿದ್ದಾರೆ.

ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀಯಾ? ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ
ಶ್ರೀರಾಮುಲು, ಸಿದ್ದರಾಮಯ್ಯ
TV9 Web
| Edited By: |

Updated on:Oct 29, 2022 | 8:00 PM

Share

ಗದಗ: ಸಾರಿಗೆ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಎಲ್ಲವೂ ಗೊತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಡಲಿಲ್ಲ ಎಂದು ಹೇಳಿದ್ದಾರೆ.

ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು ಅಂತಾ ಇದೆ. ಇದನ್ನು ಡಾ.ಅಂಬೇಡ್ಕರ್ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಇವತ್ತು ಎಸ್​​ಸಿ, ಎಸ್​ಟಿಗೆ ಬಿಜೆಪಿ ಸರ್ಕಾರ ಮೀಸಲಾತಿ ಕೊಟ್ಟಿದೆ. ನಮ್ಮ ಸರ್ಕಾರ ಕೊಟ್ಟ ಬಳಿಕ ಏನೇನೋ ಹೇಳ್ತಾ ಇದ್ದೀರಲ್ಲಾ, ಈಗ ನಿಮ್ಮ ಮಾತುಗಳನ್ನು ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಜನ ನಿನ್ನ ಅಹಂಕಾರ ಇಳಿಸುವ ಕೆಲಸ ಮಾಡುತ್ತಾರೆ. ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ನಮಗೆ ಗೊತ್ತಾ ಎಂದು ಸಚಿವ ಶ್ರೀರಾಮುಲು ಗದಗನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ.

ರಾಮುಲು ಎಲ್ಲಿದ್ರು ಅಂತಾ ಗೋತ್ತಿಲ್ಲಾ, ನೀನು ಅಧಿಕಾರದಲ್ಲಿದ್ದಾಗ ಏನು? ಮಾಡಿದ್ದೀಯಾ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಟ್ಟಿಯಾ..? ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಿ ಎಂದು ಹೇಳಿದ್ದಾರೆ. ಜನರು ನಿನ್ನನ್ನೂ ತಿರಸ್ಕಾರ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿನ್ನ ಅಹಂಕಾರ ಜಾಸ್ತಿಯಾದ್ರೆ ಖಂಡಿತ ನೀನು ಮನೆಗೆ ಹೋಗುತ್ತೀಯಾ ನಿನ್ನ ಅಹಂಕಾರವನ್ನು ಚುನಾವಣೆಯಲ್ಲಿ ಜನರು ಇಳಿಸುವ ಕೆಲಸ ಮಾಡುತ್ತಾರೆ. 220 ದಿನದ ಹೋರಾಟ ಅಲ್ಲಾ, ನಾಲ್ಕು ದಶಕಗಳ ಹೋರಾಟ ಇದು. ಅಂದು ನಾನು ಮೀಸಲಾತಿ ಕೊಡಿಸುತ್ತೇನೆ ಎಂದು ಮಾತು ಕೊಟ್ಟಿದೆ. ನನ್ನ ಸರ್ಕಾರ ಬಂದ್ ಮೇಲೆ ನಮ್ಮ ಸಿಎಂ ಮೀಸಲಾತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

Published On - 8:00 pm, Sat, 29 October 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​